NEWSನಮ್ಮಜಿಲ್ಲೆ

ಒಂದು ತಿಂಗಳಲ್ಲಿ ಕೊರೊನಾ ನಿಯಂತ್ರಿಸುತ್ತೇವೆ: ಮೈಸೂರು ಡಿಸಿ ಭರವಸೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮೈಸೂರು: ಜಿಲ್ಲೆಯಲ್ಲಿ ಇನ್ನೊಂದು ತಿಂಗಳಲ್ಲಿ ಕೊರೊನಾವನ್ನು ನಿಯಂತ್ರಣಕ್ಕೆ ತರುತ್ತೇವೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಜನತೆಗೆ ಭರವಸೆ ನೀಡಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯನ್ನು ಸಂಪೂರ್ಣವಾಗಿ ಕೊರೊನಾ ಮುಕ್ತ ಮಾಡುವ ಪಣತೊಟ್ಟಿದ್ದು, ನಿಯಂತ್ರಣಕ್ಕೆ ತರುವ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಎಂದರು.

ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಿರುವುದಕ್ಕೆ ಆತಂಕ ಪಡಬೇಡಿ. ನಮ್ಮಲ್ಲಿ ಟೆಸ್ಟಿಂಗ್ ಕೂಡ ಹೆಚ್ಚಿನ ಪ್ರಮಾಣದಲ್ಲಿ ಮಾಡುತ್ತಿದ್ದೇವೆ. ಎಲ್ಲಾ ಅಂಕಿಅಂಶಗಳನ್ನು ವಾರ್‌ ರೂಂ ಮೂಲಕ ಬಿಡುಗಡೆ ಮಾಡುತ್ತಿದ್ದೇವೆ. ಬೆಂಗಳೂರಿನ ನಂತರ ಮೈಸೂರಿನಲ್ಲಿ ಹೆಚ್ಚಿನ ಅಂಕಿ-ಅಂಶಗಳನ್ನು ನೀಡುತ್ತಿದ್ದೇವೆ ಎಂದು ವಿವರಿಸಿದರು.

ಜುಲೈ 1ರ ವೈದ್ಯರ ದಿನದಂದು ವೈದ್ಯರ ಸೇವೆ ಸ್ಮರಿಸಿ ಕೊರೊನಾ ಮುಕ್ತ ಮೈಸೂರಿನ ಘೋಷಣೆಯನ್ನು ಅವರಿಗೆ ಅರ್ಪಿಸೋಣ. ಇದು ನಮ್ಮ ಸಂಕಲ್ಪ ಎಂದ ಅವರು, ಇನ್ನು ನಾಳೆಯ ಲಾಕ್ಡೌನ್ ಬಗ್ಗೆ ಯಾವುದೇ ಗೊಂದಲ ಬೇಡ. ಜನರು ತೀರಾ ಅಗತ್ಯವಿದ್ದರೆ ಮಾತ್ರ ಹೊರಬನ್ನಿ, ಜಜತಾ ಕರ್ಫ್ಯೂ ಅಳವಡಿಸಿಕೊಂಡು ನಿಯಮ ಪಾಲಿಸಿ ಎಂದು ಸಿಂಧೂರಿ ಮನವಿ ಮಾಡಿದರು.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್