NEWSದೇಶ-ವಿದೇಶವಿಜ್ಞಾನ

ಅಂತಾರಾಷ್ಟ್ರೀಯ ವಿಮಾನ ಸೇವೆ ಜೂನ್‌ 30ರವರೆಗೂ ಸ್ಥಗಿತ: ಡಿಜಿಸಿಎ ಆದೇಶ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ನ್ಯೂಡೆಲ್ಲಿ:
ವಿಶ್ವಮಾರಿ ಕೊರೊನಾ ಸೋಂಕು ನಾಗಾಲೋಟದಲ್ಲಿ ಹರಡುತ್ತಿರುವುದರಿಂದ ಒಂದು ವರ್ಷದಿಂದ ಅಂತಾರಾಷ್ಟ್ರೀಯ ವಿಮಾನ ಸೇವೆ ಸ್ಥಗಿತಗೊಳಿಸಲಾಗಿದೆ. ಇದೀಗ ಅದನ್ನು ಇನಷ್ಟು ದಿನ ಮುಂದುವರಿಸುವ ಬಗ್ಗೆ ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ಮುಂದಾಗಿದ್ದು, ಅದನ್ನು ಜೂನ್ 30ರವರೆಗೆ ವಿಸ್ತರಿ ಆದೇಶ ಹೊರಡಿಸಿದೆ.

ಈ ಮೂಲಕ ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ಸೇವೆಗೆ ವಿಧಿಸಲಾಗಿದ್ದ ನಿರ್ಬಂಧವನ್ನು ಮತ್ತೆಜೂನ್ 30ರ ವರೆಗೆ ವಿಸ್ತರಿಸಿರುವ ಬಗ್ಗೆ ಡಿಜಿಸಿಎ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.

ಇದರ ನಡುವೆಯೂ ಗೃಹ ಸಚಿವಾಲಯದಿಂದ ಅನುಮತಿ ಪಡೆದವರು ವಿಮಾನದಲ್ಲಿ ಪ್ರಯಾಣಿಸಬಹುದಾದ ಅವಕಾಶವನ್ನು ಮತ್ತು ಈ ನಿರ್ಬಂಧ ಕಾರ್ಗೋ ವಿಮಾನ ಸೇವೆಗೆ ಅನ್ವಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಕಳೆದ 2020ರ ಮಾರ್ಚ್ 25ರಂದು ಕೊರೊನಾ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಲಾಕ್ ಡೌನ್ ಘೋಷಿಸಿದರು. ಆ ನಂತರ ಎಲ್ಲಾ ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನ ಸೇವೆಯನ್ನು ರದ್ದುಗೊಳಿಸಲಾಗಿತ್ತು.

ಮೇ 2020 ರಿಂದ ವಂದೇ ಭಾರತ್ ಮಿಷನ್ ಅಡಿಯಲ್ಲಿ ಮತ್ತು ಜುಲೈನಿಂದ ಆಯ್ದ ದೇಶಗಳೊಂದಿಗೆ ದ್ವಿಪಕ್ಷೀಯ ‘ಏರ್ ಬಬಲ್’ ವ್ಯವಸ್ಥೆಗಳ ಅಡಿಯಲ್ಲಿ ವಿಶೇಷ ಅಂತಾರಾಷ್ಟ್ರೀಯ ವಿಮಾನಯಾನಕ್ಕೆ ಅನುಮತಿಸಲಾಗಿದೆ.

ಭಾರತವು ಯುನೈಟೆಡ್ ಸ್ಟೇಟ್ಸ್, ಯುನೈಟೆಡ್ ಕಿಂಗ್‌ಡಮ್, ಯುನೈಟೆಡ್ ಅರಬ್ ಎಮಿರೇಟ್ಸ್, ಕೀನ್ಯಾ, ಭೂತಾನ್ ಮತ್ತು ಫ್ರಾನ್ಸ್ ಸೇರಿದಂತೆ ಹಲವಾರು ದೇಶಗಳೊಂದಿಗೆ ಏರ್ ಬಬಲ್ ಒಪ್ಪಂದ ರೂಪಿಸಿದೆ. ಎರಡು ದೇಶಗಳ ನಡುವಿನ ಏರ್ ಬಬಲ್ ಒಪ್ಪಂದದಡಿಯಲ್ಲಿ, ವಿಶೇಷ ಅಂತಾರಾಷ್ಟ್ರೀಯ ವಿಮಾನಗಳನ್ನು ತಮ್ಮ ವಿಮಾನಯಾನ ಸಂಸ್ಥೆಗಳು ಪ್ರಾಂತ್ಯಗಳ ನಡುವೆ ನಿರ್ವಹಿಸಬಹುದಾಗಿದೆ.

Leave a Reply

error: Content is protected !!
LATEST
KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್ ದೆಹಲಿ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಅತಿಶಿ: ಎಎಪಿ ನಾಯಕರ ಸಭೆಯಲ್ಲಿ ನಿರ್ಧಾರ BMTC 1500 ನಿವೃತ್ತ ನೌಕರರ ಗ್ರಾಚ್ಯುಟಿ, EL ಹಣ 400 ಕೋಟಿ ರೂ.ಬಾಕಿ: 16-18 ತಿಂಗಳಿನಿಂದ ಕೇಂದ್ರ ಕಚೇರಿಗೆ ಅಲೆದಾಟ!! ಸುಪ್ರೀಂ ಕೋರ್ಟ್ ಅಧಿಕೃತ  ಭಾಷೆ ಇಂಗ್ಲಿಷ್- ಹಿಂದಿಯಲ್ಲಿ ವಾದಕ್ಕೆ ಅನುಮತಿ ಇಲ್ಲ: ವಕೀಲರಿಗೆ ನೆನಪಿಸಿದ ಕೋರ್ಟ್‌ ಕೃಷಿ ಉತ್ಪನ್ನಗಳ ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ಖರೀದಿ ಮಾಡದಂತ ಕಟ್ಟುನಿಟ್ಟಿನ ಕಾನೂನು ಜಾರಿಗೆ ರೈತ ಮುಖಂಡರ ಆಗ್ರಹ KSRTC ಬಸ್‌ -ಕಾರು ನಡುವೆ ಅಪಘಾತ: ಅನಾರೋಗ್ಯದ ನಡುವೆ ಕಾರು ಚಲಾಯಿಸಿದ ಪತಿ ಮೃತ- ಪತ್ನಿ ಪ್ರಾಣಾಪಾಯದಿಂದ ಪಾರು