NEWSನಮ್ಮರಾಜ್ಯಶಿಕ್ಷಣ-

ವಿದ್ಯಾರ್ಥಿಗಳು , ಶಿಕ್ಷಕರಿಗೆ  ಲಸಿಕೆ ನೀಡಿದ ಬಳಿಕ ಶಾಲೆ-ಕಾಲೇಜ್‌ಗಳು ಓಪನ್‌: ಸಿಎಂ ಬಿಎಸ್‌ವೈ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಕೊರೊನಾ ಲಸಿಕೆಯನ್ನು ತಜ್ಞರ ಸಮಿತಿ ಸಲಹೆ ಮೇರೆಗೆ ನೀಡಿದ ನಂತರ ಹಂತ ಹಂತವಾಗಿ ರಾಜ್ಯದಲ್ಲಿ ಉನ್ನತ ಶಿಕ್ಷಣ ತರಗತಿಗಳನ್ನು ಆರಂಭಿಸುವಚಂತೆ ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಕೊರೊನಾ ಸೋಂಕಿನ ತಡೆಗೆ ಲಸಿಕೆ ನೀಡುವುದೇ ಪರಿಹಾರ ಎಂದು ಸಮಿತಿ ಹೇಳಿದ್ದು, ಕೋವಿಡ್‌ ನಿಯಂತ್ರಣಕ್ಕೆ ಲಸಿಕೆ ಅಭಿಯಾನವನ್ನು ಇನ್ನಷ್ಟು ತೀವ್ರಗೊಳಿಸಲು ಸಲಹೆ ನೀಡಲಾಗಿದೆ. ಇನ್ನು ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ತಡೆಗೆ ಉನ್ನತ ಮಟ್ಟದ ತಜ್ಞರ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಅವರ ಸಲಹೆ ಮೇರೆಗೆ ಈ ತೀರ್ಮಾನ ಕೈಗೊಂಡಿರುವುದಾಗಿ ಮಂಗಳವಾರ ತಿಳಿಸಿದರು.

ಸಮಿತಿಯು ಸರ್ಕಾರ ಅನ್‌ಲಾಕ್‌ ಮಾಡರುವುದನ್ನು ಬೆಂಬಲಿಸಿದೆ. ಮುಂದಿನ ದಿನಗಳಲ್ಲಿ ಶಿಕ್ಷಣ ಸಂಸ್ಥೆಗಳನ್ನು ತೆರೆಯುವಂತೆ ಸಲಹೆ ನೀಡಿದೆ. ಮೊದಲು ಕಾಲೇಜುಗಳನ್ನು ತೆರೆಯಲಾಗುತ್ತದೆ ಎಂದು ಸಿಎಂ ಹೇಳಿದರು.

ರಾಜ್ಯದಲ್ಲಿ ಕೊರೊನಾ ಮೂರನೇ ಅಲೆಯನ್ನು ತಡೆಗಟ್ಟಲು ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಉನ್ನತ ಮಟ್ಟದ ನುರಿತ ತಜ್ಞರ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಅವರು ಮಧ್ಯಂತರ ವರದಿ ನೀಡಿದ್ದಾರೆ. ಅದರಲ್ಲಿ ಕೆಲವು ನಿಬಂಧನೆಗಳೊಂದಿಗೆ ಶಾಲಾ ಕಾಲೇಜು ಆರಂಭಿಸುವ ಪ್ರಸ್ತಾಪ ಮಾಡಿದ್ದಾರೆ ಎಂದು ವಿವರಿಸಿದರು.

ಇನ್ನು 3ನೇ ಅಲೆ ತಡೆಗಟ್ಟಲು ಮಾನವ ಸಂಪನ್ಮೂಲ, ಆರ್ಥಿಕ ಸಂಪನ್ಮೂಲ ಹಾಗೂ ಪರಿಣತರ ನೆರವು ಪಡೆಯುವ ಕುರಿತು ಸಲಹೆ ನೀಡಿದ್ದಾರೆ. ವಿವಿಧ ವೈದ್ಯಕೀಯ ಸಂಘಟನೆಗಳ ಸಹಯೋಗದೊಂದಿಗೆ ವೈದ್ಯರು, ದಾದಿಯರ ಕೊರತೆ ನಿವಾರಣೆ, ರಾಜ್ಯದಲ್ಲಿರುವ ಎಲ್ಲ ಸ್ವಯಂ ಸೇವಾ ಸಂಸ್ಥೆಗಳ ನೆರವು ಪಡೆಯುವುದು.

ಕಾರ್ಪೊರೇಟ್ ಸಂಸ್ಥೆಗಳ ಸಹಕಾರದಿಂದ ಸಂಪನ್ಮೂಲಗಳ ನೆರವು ಹಾಗೂ ಎಲ್ಲಕ್ಕಿಂತ ಮುಖ್ಯವಾಗಿ ಸಾರ್ವಜನಿಕರ ಸಹಭಾಗಿತ್ವ ಪಡೆಯುವ ಬಗ್ಗೆ ಸಲಹೆ ನೀಡಲಾಗಿದೆ ಎಂದು ತಿಳಿಸಿದರು.

Leave a Reply

error: Content is protected !!
LATEST
ವಿಜಯಪಥ ವರದಿ ಪರಿಣಾಮ-KSRTC ಚಾಲಕನಿಗೆ ಕೊಟ್ಟಿದ್ದ ಮೆಮೋ ವಾಪಸ್‌ ಪಡೆದು 20ದಿನಗಳ ರಜೆ ಮಂಜೂರು ಮಾಡಿದ ಡಿಸಿ ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ !