NEWSನಮ್ಮಜಿಲ್ಲೆಸಂಸ್ಕೃತಿ

ತಗ್ಗಿಹಳ್ಳಿಯಲ್ಲಿ ಇಂದು ನಡೆಯಬೇಕಿದ್ದ ಬಾಲ್ಯ ವಿವಾಹ ತಪ್ಪಿಸಿದ ಅಧಿಕಾರಿಗಳು

ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ಸವಣೂರ ತಾಲೂಕಿನ ತಗ್ಗಿಹಳ್ಳಿ ಗ್ರಾಮದಲ್ಲಿ ಜೂ. 23 ರಂದು ನಡೆಸಲು ನಿಶ್ಚಯವಾಗಿದ್ದ ಬಾಲ್ಯ ವಿವಾಹವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಮಕ್ಕಳ ರಕ್ಷಣಾ ಘಟಕದ ತಂಡ ತಡೆದಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಮೇಲಧಿಕಾರಿಗಳ ಮಾರ್ಗದರ್ಶನದಲ್ಲಿ ಹಾವೇರಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಮೇಲ್ವಿಚಾರಕಿಯರು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ತಂಡ ತೆಗ್ಗಿಹಳ್ಳಿ ಗ್ರಾಮಕ್ಕೆ ಮಂಗಳವಾರ ತೆರಳಿ ಬಾಲ್ಯವಿವಾಹವನ್ನು ತಡೆಯುವಲ್ಲಿ ಯಶಸ್ವಿಯಾಗಿದೆ.

ಹಾವೇರಿ ನಗರದ ರಜಪೂತಗಲ್ಲಿ ನಿವಾಸಿ ಕೋಟೆಪ್ಪ ಭಜಂತ್ರಿ ಎಂಬುವರ 16 ವರ್ಷದ ಸೌಂದರ್ಯ ಕೋಟೆಪ್ಪ ಭಜಂತ್ರಿ ಎಂಬ ಬಾಲಕಿಯೊಂದಿಗೆ ಸವಣೂರು ತಾಲೂಕಿನ ತಗ್ಗಿಹಳ್ಳಿ ಗ್ರಾಮದ ಮಂಜುನಾಥ ಭಜಂತ್ರಿ ಎಂಬ ವರನೊಂದಿಗೆ ವಿವಾಹ ನಿಶ್ಚಯಮಾಡಿ ಜೂ.23 ರಂದು ಮದುವೆ ಮಾಡಲು ಸಿದ್ಧತೆ ನಡೆಸಲಾಗಿತ್ತು.

ಬಾಲ್ಯ ವಿವಾಹ ನಡೆಸುವ ಕುರಿತು ಮಾಹಿತಿ ಪಡೆದ ಅಧಿಕಾರಿಗಳ ತಂಡ ಬಾಲಕಿಯ ಮನೆಗೆ ಭೇಟಿ ನೀಡಿ ಪಾಲಕರಿಗೆ ಹಾಗೂ ಮಗುವಿಗೆ ಬಾಲ್ಯ ವಿವಾಹ ನಿಷೇಧ ಕಾಯ್ದೆ-2006 ಬಗ್ಗೆ ತಿಳಿವಳಿಕೆ ಹೇಳಿ ಮುಚ್ಚಳಿಕೆ ಪ್ರಮಾಣ ಪತ್ರ ಬರೆಸಿಕೊಂಡು ಮಗುವನ್ನು ಹಾವೇರಿ ಸರ್ಕಾರಿ ಬಾಲಕಿಯರ ಬಾಲ ಮಂದಿರದಲ್ಲಿ ದಾಖಲಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಪಿ.ವೈ.ಶೆಟ್ಟೆಪ್ಪನ್ನವರ ತಿಳಿಸಿದ್ದಾರೆ.

Leave a Reply

error: Content is protected !!
LATEST
KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ