NEWSಆರೋಗ್ಯನಮ್ಮರಾಜ್ಯ

ಡೆಲ್ಟಾ ಪ್ಲಸ್ ವೈರಸ್ ಬಗ್ಗೆ ಸರ್ಕಾರ ತೀವ್ರ ನಿಗಾ: ಸಚಿವ ಬಸವರಾಜ ಬೊಮ್ಮಾಯಿ

ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ಕೋವಿಡ್ ರೂಪಾಂತರ ತಳಿಯನ್ನಲಾದ ಡೆಲ್ಟಾ ಪ್ಲಸ್ ವೈರಸ್ ಮೇಲೆ ಸರ್ಕಾರ ತೀವ್ರ ನಿಗಾವಹಿಸಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಹಾವೇರಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಮಾತನಾಡಿದ ಅವರು, ದೇಶದಲ್ಲಿ ಮಹಾರಾಷ್ಟ್ರ ಮತ್ತು ಕೇರಳ ರಾಜ್ಯದಲ್ಲಿ ಮೊದಲು ಪತ್ತೆಯಾಗಿದ್ದು, ದೇಶದಲ್ಲಿಯೇ 35 ರಿಂದ 40 ಡೆಲ್ಪಾ ಪ್ರಕರಣಗಳು ಮಾತ್ರ ಪತ್ತೆಯಾಗಿವೆ ಎಂದು ತಿಳಿಸಿದರು.

ರಾಜ್ಯದಲ್ಲಿ ಡೆಲ್ಪಾ ಮತ್ತು ಡೆಲ್ಪಾ ಪ್ಲಸ್ ಪ್ರಕರಣಗಳು ಕುರಿತಂತೆ ತೀವ್ರ ನಿಗಾ ವಹಿಸಲಾಗಿದೆ. ನಮ್ಮಲ್ಲಿ ಜಿನೋನ್ ಸೆಂಟರ್‍ಗಳಿದ್ದು, ಡೆಲ್ಟಾ ಪ್ಲಸ್ ಕುರಿತು ಹೆಚ್ಚಿನ ಅಧ್ಯಯನ ನಡೆಸಲಾಗುತ್ತಿದೆ. ಈ ವೈರಸ್‍ನ ಬೇರೆ ಬೇರೆ ಪ್ರಕಾರಗಳು ಪರಿಣಾಮ ಹಾಗೂ ಈಗಿನ ವ್ಯಾಕ್ಸಿನ್ ಬಳಕೆಗಳ ಕುರಿತಂತೆ ಅಧ್ಯಯನ ನಡೆಸಲಾಗುತ್ತಿದೆ. ಕೇಂದ್ರ ಆರೋಗ್ಯ ಇಲಾಖೆ ನೀಡುವ ಸಲಹೆಗಳನ್ನು ನಿಯಮಾವಳಿಗಳನ್ನು ಪಾಲಿಸಲಾಗುವುದು ಎಂದು ಹೇಳಿದರು.

ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಇಳಿಮುಖವಾದರೂ ಮರಣ ಪ್ರಮಾಣ ಜಾಸ್ತಿ ಇದೆ. ಜಿಲ್ಲೆಯ ಮರಣ ಪ್ರಕರಣಗಳ ಆಡಿಟ್ ಮಾಡಲು ರಾಜ್ಯದ ವೈದ್ಯಕೀಯ ತಜ್ಞರ ತಂಡ ಜಿಲ್ಲೆಗೆ ಬಂದಿದೆ. ಈ ತಂಡ ನೀಡುವ ಆಡಿಟ್ ವರದಿ ಆಧರಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಆಸ್ಪತ್ರೆಯಲ್ಲಿ 21 ಜನ ಕೋವಿಡ್ ರೋಗಿಗಳು ವೆಂಟಿಲೇಟರ್ ಮೇಲೆ ಇದ್ದಾರೆ. ಇವರ ಜೀವ ಉಳಿಸುವ ನಿಟ್ಟಿನಲ್ಲಿ ತೀವ್ರ ನಿಗಾವಹಿಸಲು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಮೂರನೇ ಅಲೆ ಆರಂಭವಾಗುವ ಮುನ್ನ ಜಿಲ್ಲೆಯಲ್ಲಿ ಗರಿಷ್ಠ ಎಚ್ಚರಿಕೆಗಳೊಂದಿಗೆ ಸಿದ್ಧತೆಮಾಡಿಕೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ. ಮಕ್ಕಳ ಮೇಲೆ ಮೂರನೇ ಪ್ರಭಾವ ಬೀರುವ ತಜ್ಞರ ಅಭಿಪ್ರಾಯದ ಹಿನ್ನೆಲೆಯಲ್ಲಿ ಜೂನ್ 25 ರಿಂದ ಜಿಲ್ಲೆಯ ಪ್ರತಿ ಗ್ರಾಮಗಳಲ್ಲಿ ಮಕ್ಕಳ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲು ಸೂಚನೆ ನೀಡಲಾಗಿದೆ.

ಜುಲೈ 30ರೊಳಗೆ ಮಕ್ಕಳ ಆರೋಗ್ಯ ತಪಾಸಣೆ ಪೂರ್ಣಗೊಳಿಸಲು ಸೂಚಿಸಲಾಗಿದೆ. ನಾಳೆ ಮಕ್ಕಳ ಆರೋಗ್ಯ ಶಿಬಿರಕ್ಕೆ ಚಾಲನೆ ನೀಡಲಾಗುವುದು. ರಾಜ್ಯದಲ್ಲೇ ಮೊದಲು ಜಿಲ್ಲೆಯಲ್ಲಿ ಮಕ್ಕಳ ಆರೋಗ್ಯ ತಪಾಸಣೆ ಶಿಬಿರಕ್ಕೆ ಚಾಲನೆ ನೀಡಲಾಗುವುದು ಎಂದರು.

ಮಕ್ಕಳ ತಪಾಸಣೆ ಸಂದರ್ಭದಲ್ಲಿ ಅಪೌಷ್ಠಿಕತೆಯಿಂದ ಬಳಲುವ ಮಕ್ಕಳಿಗೆ ಪೌಷ್ಠಿಕ ಕಿಟ್, ಪೂರಕ ಆಹಾರ ಹಾಗೂ ಔಷಧಿಗಳನ್ನು ನೀಡಿ ಕೋವಿಡ್‍ನಿಂದ ರಕ್ಷಣೆ ನೀಡಲು ಆದ್ಯತೆ ನೀಡಲಾಗುವುದು. ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ಆಸ್ಪತ್ರೆಯಲ್ಲಿ ಕನಿಷ್ಠ 30 ಹಾಗೂ ತಾಲೂಕು ಆಸ್ಪತ್ರೆಗಳಲ್ಲ್ಲಿ ತಲಾ 10 ಹಾಸಿಗೆಯ ವಿಶೇಷ ಮಕ್ಕಳ ಐಸಿಯು ವಾರ್ಡ್ ಸಿದ್ಧತೆಮಾಡಿಕೊಳ್ಳಲು ಸೂಚನೆ ನೀಡಲಾಗಿದೆ ಎಂದರು.

ರೋಗಿಗಳಿಲ್ಲದ ಕಾರಣ ಕೋವಿಡ್ ಕೇರ್ ಸೆಂಟರ್‍ಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗುವುದು. ಈ ಕೇಂದ್ರಗಳಿಗೆ ಪೂರೈಕೆಮಾಡಲಾದ ಸಾಮಗ್ರಿಗಳನ್ನು ಕಾಯ್ದಿರಿಸಿ ಮೂರನೇ ಅಲೆಯ ಸಂದರ್ಭದಲ್ಲಿ ಅಗತ್ಯಬಿದ್ದರೆ ಮಕ್ಕಳು ಹಾಗೂ ಪಾಲಕರಿಗಾಗಿ ಬಳಸಿಕೊಳ್ಳಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಸಂಸದ ಶಿವಕುಮಾರ ಉದಾಸಿ, ಶಾಸಕರಾದ ನೆಹರು ಓಲೇಕಾರ, ವಿರುಪಾಕ್ಷಪ್ಪ ಬಳ್ಳಾರಿ, ಅರುಣಕುಮಾರ ಗುತ್ತೂರ ಉಪಸ್ಥಿತರಿದ್ದರು.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ