Breaking NewsNEWSನಮ್ಮಜಿಲ್ಲೆರಾಜಕೀಯ

ಬಂಡಾಯ ಬಾವುಟ ಹಾರಿಸಿದ ಅರಸೀಕೆರೆ ನಗರಸಭೆಯ 7 ಜೆಡಿಎಸ್ ಸದಸ್ಯರು: ಬಿಜೆಪಿಗೆ ಬೆಂಬಲ

ವಿಜಯಪಥ ಸಮಗ್ರ ಸುದ್ದಿ

ಹಾಸನ: ಅರಸೀಕೆರೆ ನಗರಸಭೆಯ 7 ಜೆಡಿಎಸ್ ಸದಸ್ಯರು ಹಾಗೂ ಒಬ್ಬ ಪಕ್ಷೇತರ ಸದಸ್ಯ ಬಂಡಾಯ ಬಾವುಟ ಹಾರಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಈ ಮೂಲಕ ತಮಗೆ ಪ್ರತ್ಯೇಕ ಆಸನ ನೀಡುವಂತೆ ಹಾಸನ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದು, 31 ಸದಸ್ಯರನ್ನು ಒಳಗೊಂಡಿರುವ ಅರಸೀಕೆರೆ ನಗರಸಭೆಯಲ್ಲಿ 21 ಮಂದಿ ಜೆಡಿಎಸ್ ನಿಂದ ಗೆದ್ದುಬಂದಿದ್ದಾರೆ. ಬಿಜೆಪಿಯಿಂದ 6 ಹಾಗೂ ಪಕ್ಷೇತರ 3 ಮತ್ತು ಕಾಂಗ್ರೆಸ್ ಒಬ್ಬರು ಆಯ್ಕೆಯಾಗಿದ್ದಾರೆ.

ಜೆಡಿಎಸ್ ಶಾಸಕ ಶಿವಲಿಂಗೇಗೌಡರ ವಿರುದ್ಧ ಮುನಿಸಿಕೊಡಿರುವ ಈ ಏಳು ಸದಸ್ಯರು, ತಮಗೆ ಯಾವುದೇ ರೀತಿ ಸ್ಪಂದನೆಯನ್ನು ಈಗಿರೋ ನಾಯಕರು ನೀಡುತ್ತಿಲ್ಲ. ಮೀಸಲಾತಿಯನ್ವಯ ಈಗ ಬಿಜೆಪಿಯವರು ಅರಸೀಕೆರೆ ನಗರಸಭೆ ಅಧ್ಯಕ್ಷರಾಗಿದ್ದಾರೆ. ಅವರು ಉತ್ತಮವಾಗಿ ಕೆಲಸ ಮಾಡಬೇಕಾದರೆ ನಮ್ಮೆಲ್ಲರ ಸಹಕಾರ ಬೇಕಾಗಿರುತ್ತದೆ. ಇದರಿಂದ ನಾವೂ ಉತ್ತಮವಾಗಿ ಜನಸೇವೆ ಮಾಡಬಹುದು ಎಂಬ ಕಾರಣ ನೀಡಿ, ಬಿಜೆಪಿಗೆ ಬೆಂಬಲ ನೀಡುವುದಾಗಿ ತಿಳಿಸಿ, ಪ್ರತ್ಯೇಕ ಆಸನ ವ್ಯವಸ್ಥೆ ಮಾಡುವಂತೆ ಡಿಸಿಗೆ ಮನವಿ ಮಾಡಿದ್ದಾರೆ.

ಅರಸೀಕೆರೆ ನಗರಸಭೆಗೆ ಜೆಡಿಎಸ್‍ನಿಂದ 21 ಜನ ಆಯ್ಕೆಯಾಗಿದ್ದು, ಆ ಸಂಖ್ಯೆಯ ಮೂರನೇ ಒಂದು ಭಾಗವಾಗಿ ನಾವು ಏಳುಜನ ಪಕ್ಷಕ್ಕೆ ಸಾಮೂಹಿಕ ರಾಜೀನಾಮೆಯನ್ನು ನೀಡಿದ್ದೇವೆ. ಹೀಗಾಗಿ ನಾವು ಪಕ್ಷಾಂತರ ನಿಷೇಧ ಕಾಯ್ದೆ ಉಲ್ಲಂಘಿಸಿದಂತೆ ಆಗುವುದಿಲ್ಲ ಎಂದಿದ್ದಾರೆ.

ಶಾಸಕ ಶಿವಲಿಂಗೇಗೌಡ ಆಕ್ರೋಶ
ಈ ರಾಜಕೀಯ ಕುಚೇಷ್ಟೆ ಹಿಂದೆ ನೇರವಾಗಿ ಬಿಜೆಪಿ ಇದೆ ಎಂದು ಈ ಬೆಳವಣಿಗೆಯಿಂದ ಕೆರಳಿದ ಶಾಸಕ ಶಿವಲಿಂಗೇಗೌಡ ಅರಸೀಕೆರೆಗೆ ರಾಜಕೀಯ ಆಸರೆ ಪಡೆಯಲು ಬಂದವರೊಬ್ಬರು ಇದನ್ನೆಲ್ಲ ಮಾಡುತ್ತಿದ್ದಾರೆ. ಕುಮಾರಸ್ವಾಮಿಯವರ ಸಮ್ಮಿಶ್ರ ಸರ್ಕಾರ ಬೀಳಿಸಿದವರಿಗೆ ಇದು ಸಾಧ್ಯವಾಗದಿರು ಎಂದ ಅವರು ಸದಸ್ಯರ ನಡೆ ಬಗ್ಗೆ ನಮ್ಮ ಪಕ್ಷದ ರಾಜ್ಯಾಧ್ಯಕ್ಷರು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಅರಸೀಕೆರೆಯಲ್ಲಿ ಜೆಡಿಎಸ್ ಸಂಖ್ಯಾ ಬಲ ಜಾಸ್ತಿ ಇದ್ದರೂ ಮೀಸಲಾತಿ ಆಧಾರದ ಮೇಲೆ ಅಧ್ಯಕ್ಷ ಸ್ಥಾನವನ್ನು ಬಿಜೆಪಿ ಅಭ್ಯರ್ಥಿ ಅಲಂಕರಿಸಿದ್ದಾರೆ. ಆದರೆ ಜೆಡಿಎಸ್ ಭದ್ರ ಕೋಟೆಯಾಗಿರುವ ಅರಸೀಕೆರೆಯಲ್ಲಿ ಬಿಜೆಪಿ ಇಷ್ಟೆಲ್ಲಾ ಕಸರತ್ತು ಮಾಡುತ್ತಿದೆ ಎಂದರೆ ಅದರ ಹಿಂದೆ ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಇದ್ದಾರೆ ಅನ್ನೋ ಮಾತು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.

ಈ ಸಂತೋಷ್ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ, ಅರಸೀಕೆರೆಯಿಂದ ಸ್ಪರ್ಧೆಗೆ ಸಿದ್ಧ ಎಂದು ಈ ಹಿಂದೆ ಕೂಡ ಸ್ಪಷ್ಟವಾಗಿ ಹೇಳಿದ್ದರು. ಅಲ್ಲದೆ ನಿರಂತರವಾಗಿ ಅರಸೀಕೆರೆಯಲ್ಲಿ ಓಡಾಡುತ್ತಿರುವ ಅವರು, ಈಗ ತೆರೆಮರೆಯಲ್ಲೇ ತಮ್ಮ ಶಕ್ತಿ ಪ್ರದರ್ಶನ ಮಾಡುತ್ತಿದ್ದಾರೆ. ಇದೆಲ್ಲದರ ಮಧ್ಯೆ ಜೆಡಿಎಸ್ ನಾಯಕರು ತಮ್ಮ ಸದಸ್ಯರನ್ನು ಹೇಗೆ ಮನವೊಲಿಸುತ್ತಾರೆ ಎಂಬುದು ಈಗ ಇನ್ನಷ್ಟು ಕುತೂಹಲ ಮೂಡಿಸಿದೆ.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ