CrimeNEWSನಮ್ಮಜಿಲ್ಲೆ

ಪ್ರೇಯಸಿಯ ಶೀಲ ಶಂಕಿಸಿ ಸಹೋದರನ ಜತೆಗೂಡಿ ಪ್ರಿಯತಮನಿಂದಲೇ ಕೊಲೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಕೊಪ್ಪಳ: ತನ್ನ ಪ್ರೇಯಸಿಯ ಶೀಲ ಶಂಕಿಸಿ ಪ್ರಿಯತಮ ತನ್ನ ಸಹೋದರನ ಸಹಾಯದಿಂದ ಕೊಲೆ ಮಾಡಿ ಬಳಿಕ ಶವ ಹೂತು ಹಾಕಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹುಲೆಗುಡ್ಡ ಗ್ರಾಮದ ಮದ್ದಾನವ್ವ (19) ಹತ್ಯೆಯಾದ ಯುವತಿ. ಯಲ್ಲಪ್ಪ ಬಮ್ಮನಗೌಡ (22) ಎಂಬಾತನೇ ಕೊಲೆ ಮಾಡಿರುವ ಪ್ರಿಯಕರ. ಯಲ್ಲಪ್ಪ ತನ್ನ ಸಹೋದರ ರಮೇಶ್ (19) ಸಹಾಯದಿಂದ ಕೊಲೆ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ.

ಒಂದು ವರ್ಷದಿಂದ ಯಲ್ಲಪ್ಪ ಮತ್ತು ಮದ್ದಾನವ್ವ ಇಬ್ಬರು ಪ್ರೀತಿಸುತ್ತಿದ್ದು, ಮದುವೆಯಾಗಲು ನಿರ್ಧಿಸಿದ್ದರು. ಯುವತಿ ಅಪ್ರಾಪ್ತಳಾಗಿದ್ದರಿಂದ ಎರಡೂ ಕುಟುಂಬದವರು ಮುಂದಿನ ವರ್ಷ ಮದುವೆಯಾಗುವಂತೆ ಬುದ್ಧಿವಾದ ಹೇಳಿದ್ದರಿಂದ ಯುವಕನ ಮನೆಯಲ್ಲಿ ಯುವತಿಯನ್ನು ಬಿಟ್ಟಿದ್ದರು.

ಇತ್ತ ಯುವಕ, ಯುವತಿಯ ಮೇಲೆ ಅನುಮಾನ ಪಟ್ಟು ಕತ್ತು ಹಿಸುಕಿ ಕೊಲೆ ಮಾಡಿ ನಂತರ ಯುವತಿ ಶವವನ್ನು ಮುರುಡಿ ಗ್ರಾಮದ ಕೆರೆ ಹತ್ತಿರದ ಜಮೀನಲ್ಲಿ ಹೂತು ಹಾಕಿದ್ದಾನೆ. ಪೊಲೀಸರು ನಿನ್ನೆ ಶವವನ್ನು ಹೊರತೆಗೆದು ಆರೋಪಿ ಯಲ್ಲಪ್ಪನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನೊಬ್ಬ ಆರೋಪಿ ರಮೇಶ್ ಬಂಧನಕ್ಕೆ ಬಲೆ ಬೀಸಿದ್ದಾರೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...