Breaking NewsNEWSರಾಜಕೀಯ

ಮತ್ತೆ ಮುಂಬೈಗೆ ಪಯಣ: ಕಾನೂನಿನ ಆಯುಧದಡಿ ಸಿಲುಕಿದ್ರ ರಮೇಶ್ ಜಾರಕಿಹೊಳಿ

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ರಾಸಲೀಲೆ ಸಿಡಿ ವಿಚಾರ ಭಾರಿ ಸದ್ದು ಮಾಡಿದ್ದರಿಂದ ಸಚಿವ ಸ್ಥಾನ ಕಳೆದುಕೊಂಡು ಒಂದು ರೀತಿ ರಾಜಕೀಯ ಅತಂತ್ರ ಸ್ಥಿತಿಗೆ ತಲುಪಿರುವ ಶಾಸಕ ರಮೇಶ್ ಜಾರಕಿಹೊಳಿಗೆ ರಾತ್ರಿ ಹೊತ್ತು ಸರಿಯಾಗಿ ನಿದ್ದೆ ಬರುತ್ತಿಲ್ಲ, ಇನ್ನು ಬೆಳಗಾದರೆ ಕಾನೂನಿನ ಆಯುಧದಲ್ಲಿ ಸಿಲುಕಿಕೊಳ್ಳುವ ಭಯ, ಇದರಿಂದ ಮಾನಸಿಕವಾಗಿ ಕುಗ್ಗಿಹೋಗಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.

ಇನ್ನು ರಾಜಕೀಯವೇ ನನಗೆ ಬೇಡ, ಈ ಎಲ್ಲ ಗೊಂದಲಗಳಿಂದ ಹೊರಬಂದರೆ ಸಾಕು ಎಂದು ಎಣಿಸುತ್ತಿರುವ ರಮೇಶ್ ಜಾರಕಿಹೊಳಿ ಅವರು ಅದಕ್ಕೆ ಹಲವಾರು ನಾಯಕರ ಮನೆ ಕದ ತಟ್ಟುತ್ತಿದ್ದಾರೆ. ಅದರಂತೆ ಇಂದು ಸಂಜೆ (ಜೂನ್ 28) ಮತ್ತೆ ಮುಂಬೈಗೆ ತೆರಳಲಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ಸಂಜೆ ಬೆಳಗಾವಿ ಸಾಂಬ್ರಾ ಏರ್​ಪೋರ್ಟ್​ನಿಂದ ಮುಂಬೈಗೆ ಕೆಲ ಆಪ್ತರ ಜೊತೆ ಪ್ರಯಾಣ ಬೆಳೆಸಲಿದ್ದು, ಜೂನ್‌ 29ರ (ನಾಳೆ) ಬೆಳಗ್ಗೆ ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಭೇಟಿ ಮಾಡಿ, ಮತ್ತೊಂದು ಸುತ್ತಿನ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ದೇವೇಂದ್ರ ಫಡ್ನವಿಸ್, ರಮೇಶ್ ಜಾರಕಿಹೊಳಿ ಬಿಜೆಪಿ ಸೇರ್ಪಡೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಫಡ್ನವಿಸ್​ ಅವರನ್ನು ರಾಜಕೀಯ ಗಾಡ್​ಫಾದರ್ ಎಂದು ಜಾರಕಿಹೊಳಿ ನಂಬಿದ್ದಾರೆ.

ಈ ನಡುವೆ ತಮ್ಮ ಏಳಿಗೆ ಸಹಿಸದೇ ಷಡ್ಯಂತ್ರ ಮಾಡಿದ್ದಾರೆಂದು ಬಿಜೆಪಿಯ ಕೆಲ ಪ್ರಮುಖ ನಾಯಕರ ವಿರುದ್ಧವೇ ಈಗ ರಮೇಶ್ ಮಾಡಿರುವ ಗಂಭೀರ ಆರೋಪವನ್ನು ಫಡ್ನವಿಸ್ ಹೈಕಮಾಂಡ್ ನಾಯಕರ ಗಮನಕ್ಕೆ ತಂದಿದ್ದಾರೆ. ಈ ವಿಚಾರದ ಬಗ್ಗೆ ಹೈಕಮಾಂಡ್ ಸಂದೇಶವನ್ನು ಫಡ್ನವಿಸ್ ರಮೇಶ್‌ಗೆ ತಿಳಿಸುತ್ತಾರಾ ಎಂಬ ಪ್ರಶ್ನೆ ಸದ್ಯ ಹುಟ್ಟುಕೊಂಡಿರೋದು.

ಇನ್ನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡೋದಾಗಿ ಹೇಳಿರುವ ರಮೇಶ್ ಜಾರಕಿಹೊಳಿಗೆ ತಮ್ಮ ನಿರ್ಧಾರದಿಂದ ಹಿಂದೆ ಸರಿಯಲು ರಾಜ್ಯ ನಾಯಕರು ಸಲಹೆ ನೀಡಿದ್ದಾರೆ. ಜತೆಗೆ ನಾಳೆ ಫಡ್ನವಿಸ್ ಭೇಟಿ ಬಳಿಕ ದೆಹಲಿಗೆ ತೆರಳಿ, ಹೈಕಮಾಂಡ್ ನಾಯಕರ ಭೇಟಿಯಾಗುವ ಸಾಧ್ಯತೆಯಿದೆ.

ಸಹೋದರರ ಸಲಹೆ
ಆತುರಕ್ಕೆ ಬಿದ್ದು ಯಾವುದೇ ನಿರ್ಧಾರ ಬೇಡ ಎಂದು ನಿನ್ನೆ ತಡರಾತ್ರಿ ನಡೆದ ಜಾರಕಿಹೊಳಿ ಬ್ರದರ್ಸ್ ಮೀಟಿಂಗ್​ನಲ್ಲಿ ಸಹೋದರರು ಸಲಹೆ ನೀಡಿದ್ದಾರೆ. ಇನ್ನು ಇಂದಿನ ಮಾನಸಿಕ ವೇದನೆಯನ್ನು ತಡೆದುಕೊಂಡರೆ ಮತ್ತೆ ಮಂತ್ರಿ ಸ್ಥಾನ ಸಿಗುವ ಸಾಧ್ಯತೆ ಹೆಚ್ಚಾಗಿದೆ. ಈಗ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಮುಂದೆ ಹಲವು ಅಡ್ಡಿಗಳು ಎದುರಾಗಬಹುದು ಎಂದು ತಿಳಿ ಹೇಳಿದ್ದಾರೆ ಎನ್ನಲಾಗಿದೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ