NEWSನಮ್ಮರಾಜ್ಯ

ಕೊರೊನಾ ಅನ್‌ಲಾಕ್‌: ಜುಲೈ 5ರ ನಂತರ ರಾಜ್ಯದಲ್ಲಿ ಬಹುತೇಕ ಎಲ್ಲವೂ ಮುಕ್ತಮುಕ್ತ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿ ಸಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಹಂತಹಂತವಾಗಿ 0.3 ಅನ್‌ಲಾಕ್ ಪ್ರಕ್ರಿಯೆ ಆರಂಭವಾಗಿದೆ.

ಈಗಾಗಲೇ ಹಲವು ಜಿಲ್ಲೆಗಳು ಅನ್‌ಲಾಕ್ ಆಗಿದ್ದು, ಜನಜೀವನ ಸಹಜ ಸ್ಥಿತಿಗೆ ಬರುತ್ತಿದೆ. ಇದೀಗ ಜುಲೈ 5ರಿಂದ ಅನ್‌ಲಾಕ್ 0.3 ಜಾರಿಯಾಗುವ ನಿರೀಕ್ಷೆಯಿದ್ದು, ಅದರಲ್ಲಿ ಮಾಲ್‌, ಸಿನಿಮಾ ಮಂದಿರಗಳು, ಪಬ್, ಕ್ಲಬ್, ಬಾರ್‌ಗಳಿಗೆ ಅನುಮತಿ ನೀಡುವ ಸಾಧ್ಯತೆ ದಟ್ಟವಾಗಿದೆ.

ಸದ್ಯಕ್ಕೆ ರಾಜ್ಯದಲ್ಲಿ ಸೋಂಕಿನ ಪಾಸಿಟಿವಿಟಿ ಪ್ರಮಾಣ 1.97ರಷ್ಟಿರುವ ಕಾರಣ ಅನ್‌ಲಾಕ್ ಮಾಡುವ ನಿಟ್ಟಿನಲ್ಲಿ ಸರ್ಕಾರ ಚಿಂತನೆ ನಡೆಸುತ್ತಿದೆ. ಅದಕ್ಕಾಗಿ ತಜ್ಞರ ಜತೆಗೆ ಚರ್ಚೆ ಮಾಡುವ ನಿಟ್ಟಿನಲ್ಲೂ ಮುಂದಾಗುತ್ತಿದೆ.

ಈಗ ಅಂಗಡಿ ಮಳಿಗೆಗಳಿಗೆ ಅವಕಾಶ ಕೊಟ್ಟಿರುವಂತೆಯೇ ಮಾಲ್‌ಗಳನ್ನು ಸಂಜೆವರೆಗೂ ತೆರೆಯಲು ಅನುಮತಿ ನೀಡಬಹುದಾಗಿದೆ. ಅತಿ ಕಡಿಮೆ ಜನರ ಪ್ರವೇಶಕ್ಕೆ ಅನುಮತಿ ನೀಡಲಿದ್ದು, ಮಕ್ಕಳಿಗೆ ಪ್ರವೇಶ ನಿರ್ಬಂಧ ಹೇರುವ ಸಂಭವವಿದೆ.

ಬಾರ್‌ಗಳಲ್ಲಿಯೂ ಟೇಬಲ್ ಸರ್ವೀಸ್‌ಗೆ ಅವಕಾಶ ನೀಡುವ ಬಗ್ಗೆ ಈಗಾಗಲೇ ಅನುಮತಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ ಸಿನಿಮಾ ಮಂದಿರಗಳಿಗೆ ಇಷ್ಟು ಬೇಗ ಅವಕಾಶ ನೀಡುವುದು ಅನುಮಾನ. ಇದರ ನಡುವೆ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಇನ್ನಷ್ಟು ದಿನ ಮುಂದುವರಿಯುವ ಸಾಧ್ಯತೆ ಹೆಚ್ಚಾಗಿದೆ.

ಏಪ್ರಿಲ್ 27ರಿಂದ ಕರ್ನಾಟಕದಲ್ಲಿ ಜಾರಿ ಮಾಡಲಾಗಿದ್ದ ಕೋವಿಡ್ -19 ಲಾಕ್‌ಡೌನ್‌ ಅನ್ನು ಜೂನ್ 14ರ ನಂತರ ಅಲ್ಪ ಸಡಿಲಿಕೆ ಮಾಡಲಾಗಿತ್ತು. ಜೂನ್ 21ರ ನಂತರ ಅನ್‌ಲಾಕ್ 0.2 ಘೋಷಣೆಯಾಗಿದ್ದು, ಕೆಲವು ನಿರ್ಬಂಧಗಳೊಂದಿಗೆ ಹಲವು ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ. ಮೊದಲು ಹದಿನಾರು ಜಿಲ್ಲೆಗಳಲ್ಲಿ ಅನ್‌ಲಾಕ್ ಘೋಷಣೆ ಮಾಡಿ ನಂತರ ಆ ಪಟ್ಟಿಗೆ 6 ಜಿಲ್ಲೆಗಳನ್ನು ಸೇರಿಸಲಾಗಿದೆ.

ಇನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಬಹುತೇ ಕೋವಿಡ್‌ ಸೋಂಕು ನಿಯಂತ್ರಣಕ್ಕೆ ಬಂದಿರುವ ಹಿನ್ನೆಲೆಯಲ್ಲಿ 0.3 ಅನ್‌ಲಾಕ್‌ ಘೋಷಣೆ ಮಾಡುವುದು ದೃಢವಾಗುತ್ತಿದೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್