NEWSನಮ್ಮಜಿಲ್ಲೆವಿಜ್ಞಾನ

ಮೊಟ್ಟೆಗಳಿಗೆ ಕೃತಕ ಕಾವು ನೀಡಿ ಹೆಬ್ಬಾವು ಮರಿಗಳ ರಕ್ಷಣೆ ಮಾಡಿದ ಬನ್ನೂರಿನ ತೇಜಸ್

ವಿಜಯಪಥ ಸಮಗ್ರ ಸುದ್ದಿ

ಪುತ್ತೂರು: ಪ್ರತ್ಯೇಕ ಎರಡು ಸ್ಥಳಗಳಲ್ಲಿ ಸಿಕ್ಕಿದ ಹೆಬ್ಬಾವಿನ ಮೊಟ್ಟೆಗಳನ್ನು ರಕ್ಷಣೆ ಮಾಡಿದ ಬಳಿಕ ಅವುಗಳಿಗೆ ಕೃತಕ ಕಾವು ನೀಡಿ ಎಲ್ಲಾ ಮರಿಗಳನ್ನು ರಕ್ಷಣೆ ಮಾಡಿದ ಉರಗ ಪ್ರಿಯ ಬನ್ನೂರಿನ ತೇಜಸ್ ಅರಣ್ಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಮೊನ್ನೆ (ಜೂ.27) ಅರಣ್ಯಕ್ಕೆ ಬಿಟ್ಟಿದ್ದಾರೆ.

ಸವಣೂರಿನಲ್ಲಿ 16 ಹೆಬ್ಬಾವಿನ ಮೊಟ್ಟೆಗಳು ಮತ್ತು ಲೋಕೋಪಯೋಗಿ ಇಲಾಖೆ ಸಹಾಯಕ ಅಭಿಯಂತರ ಪ್ರಮೋದ್ ಅವರ ಮಾಹಿತಿಯಂತೆ ಪುತ್ತೂರಿನ ಪರಿಸರದಲ್ಲಿ 22 ಹೆಬ್ಬಾವಿನ ಮೊಟ್ಟೆಗಳನ್ನು ಬನ್ನೂರು ಕರ್ಮಲ ನಿವಾಸಿ ತೇಜಸ್ ಅವರು ಫಾರೆಸ್ಟ್ ಗಾರ್ಡ್ ಸತ್ಯ ಡಿ.ಜೆ. ಮತ್ತು ಪ್ರೀತಮ್ ಜೊತೆಯಲ್ಲಿ ಒಟ್ಟು 38 ಮೊಟ್ಟೆಗಳನ್ನು ರಕ್ಷಣೆ ಮಾಡಿದ್ದರು.

ಆ 38 ಮೊಟ್ಟೆಗಳಿಗೂ ಕೃತಕ ಕಾವು ಕೊಡುವ ಮೂಲಕ 38 ಮರಿಗಳು ಮೊಟ್ಟೆಗಳಿಂದ ಹೊರ ಬಂದಿವೆ. ಅವುಗಳನ್ನು ರಕ್ಷಣೆ ಮಾಡಿ ಜೂ. 27ರಂದು ಸಂಜೆ ಅರಣ್ಯ ಇಲಾಖೆ ಅಧಿಕಾರಿಗಳ ಜೊತೆಗೆ ರಕ್ಷಿತಾರಣ್ಯಕ್ಕೆ ಬಿಟ್ಟಿದ್ದಾರೆ.

ಉಪ ವಲಯ ಅರಣ್ಯ ಅಧಿಕಾರಿ ಶಿವಾನಂದ ಆಚಾರ್ಯ, ಶೇಖರ್, ವಲಯ ಅರಣ್ಯ ಅಧಿಕಾರಿಗಳ ಮಾರ್ಗ ದರ್ಶನದಲ್ಲಿ ಪುನೀತ್ ಮತ್ತು ತೇಜಸ್ ಮರಿಗಳನ್ನು ಅರಣ್ಯಕ್ಕೆ ಬಿಟ್ಟರು.

Leave a Reply

error: Content is protected !!
LATEST
KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್ ದೆಹಲಿ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಅತಿಶಿ: ಎಎಪಿ ನಾಯಕರ ಸಭೆಯಲ್ಲಿ ನಿರ್ಧಾರ BMTC 1500 ನಿವೃತ್ತ ನೌಕರರ ಗ್ರಾಚ್ಯುಟಿ, EL ಹಣ 400 ಕೋಟಿ ರೂ.ಬಾಕಿ: 16-18 ತಿಂಗಳಿನಿಂದ ಕೇಂದ್ರ ಕಚೇರಿಗೆ ಅಲೆದಾಟ!! ಸುಪ್ರೀಂ ಕೋರ್ಟ್ ಅಧಿಕೃತ  ಭಾಷೆ ಇಂಗ್ಲಿಷ್- ಹಿಂದಿಯಲ್ಲಿ ವಾದಕ್ಕೆ ಅನುಮತಿ ಇಲ್ಲ: ವಕೀಲರಿಗೆ ನೆನಪಿಸಿದ ಕೋರ್ಟ್‌ ಕೃಷಿ ಉತ್ಪನ್ನಗಳ ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ಖರೀದಿ ಮಾಡದಂತ ಕಟ್ಟುನಿಟ್ಟಿನ ಕಾನೂನು ಜಾರಿಗೆ ರೈತ ಮುಖಂಡರ ಆಗ್ರಹ KSRTC ಬಸ್‌ -ಕಾರು ನಡುವೆ ಅಪಘಾತ: ಅನಾರೋಗ್ಯದ ನಡುವೆ ಕಾರು ಚಲಾಯಿಸಿದ ಪತಿ ಮೃತ- ಪತ್ನಿ ಪ್ರಾಣಾಪಾಯದಿಂದ ಪಾರು