NEWSಕ್ರೀಡೆನಮ್ಮರಾಜ್ಯ

ಒಲಿಂಪಿಕ್ಸ್ ಕ್ರೀಡಾಪಟುಗಳ ಉತ್ತೇಜಿಸಲು ‘ಚೀರ್ ಫಾರ್ ಇಂಡಿಯಾ’ ಅಭಿಯಾನ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸೆಲ್ಫಿ ತೆಗೆಯಿರಿ, ಭಾರತೀಯ ಅಥ್ಲೆಟ್ ಗಳನ್ನು ಪ್ರೋತ್ಸಾಹಿಸಿ ಎಂದು ರೈಲ್ವೆ ಇಲಾಖೆಯಿಂದ ‘ಚೀರ್ ಫಾರ್ ಇಂಡಿಯಾ’ ಅಭಿಯಾನ ಆರಂಭವಾಗಿದೆ.

ಹೌದು ಇನ್ನು ಕೆಲವೇ ದಿನಗಳಲ್ಲಿ ಟೋಕಿಯೋ ಒಲಿಂಪಿಕ್ಸ್ ಆರಂಭವಾಗಲಿದೆ. ಒಲಿಂಪಿಕ್ಸ್ ನಲ್ಲಿ ಭಾಗವಹಿಸುತ್ತಿರುವ ಕ್ರೀಡಾಪಟುಗಳನ್ನು ಉತ್ತೇಜಿಸಲು ನೈರುತ್ಯ ರೈಲ್ವೆ ವಲಯ ಪ್ರಮುಖ ರೈಲು ನಿಲ್ದಾಣಗಳಲ್ಲಿ ಸೆಲ್ಫಿ ಪಾಯಿಂಟ್ ಗಳನ್ನು ರಚಿಸಿದೆ. ಇಲ್ಲಿ ನಿಂತುಕೊಂಡು ಸಾರ್ವಜನಿಕರು ಸೆಲ್ಫಿ ಅಥವಾ ಫೋಟೋ ತೆಗೆದುಕೊಂಡು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವಂತೆ ಕೋರಲಾಗಿದೆ.

ಕೋವಿಡ್-19 ಮಧ್ಯೆ ಕ್ರೀಡಾ ಸ್ಫೂರ್ತಿ ಉತ್ತೇಜಿಸಲು ಕೇಂದ್ರ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಒಲಿಂಪಿಕ್ಸ್ ಕ್ರೀಡಾಪಟುಗಳಲ್ಲಿ ಉತ್ಸಾಹ ಹೆಚ್ಚಿಸಲು ಹಮ್ಮಿಕೊಂಡಿರುವ ಈ ಅಭಿಯಾನ ಹಲವು ಕ್ರೀಡಾಭಿಮಾನಿಗಳಲ್ಲಿ ಸಂತಸ ಇಮ್ಮಡಿಗೊಳಿಸಿದೆ.

ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ, ಕಂಟೋನ್ಮೆಂಟ್, ಯಶವಂತಪುರ, ಕೆ ಆರ್ ಪುರಂ ರೈಲು ನಿಲ್ದಾಣ, ಮೈಸೂರು ರೈಲು ನಿಲ್ದಾಣ ಸೇರಿದಂತೆ ರಾಜ್ಯದಲ್ಲಿರುವ ಪ್ರಮುಖ ರೈಲು ನಿಲ್ದಾಣಗಳಲ್ಲಿ ಈ ಸೆಲ್ಫಿ ಪಾಯಿಂಟ್ ಗಳನ್ನು ಅಳವಡಿಸಲಾಗಿದೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ