NEWSಕ್ರೀಡೆದೇಶ-ವಿದೇಶವಿದೇಶ

ಬೌಂಡರಿಯತ್ತ ಸರವೇಗದಲ್ಲಿ ಬಂದ ಬಾಲ್‌: ಡೈ ಹೊಡೆದು ಕ್ಯಾಚ್‌ ಹಿಡಿದ ಸ್ಮೃತಿ ಮಂಧಾನಾ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಲಂಡನ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಬೌಂಡರಿ ಬಳಿ ಹಿಡಿದ ಕ್ಯಾಚ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಕತ್‌ ವೈರಲ್ ಆಗಿದೆ. ವಿಡಿಯೋ ನೋಡಿದ ಕ್ರಿಕೆಟ್ ಅಭಿಮಾನಿಗಳು ‘ಫ್ಲೈ ಸ್ಮೃತಿ ಫ್ಲೈ’ ಎಂದು ಕಮೆಂಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಪಂದ್ಯವನ್ನು ಟೀ ಇಂಡಿಯಾ ನಾಲ್ಕು ವಿಕೆಟ್ ಗಳಿಂದ ತನ್ನದಾಗಿಸಿಕೊಂಡಿದೆ.

ಟೀಂ ಇಂಡಿಯಾದ ದೀಪ್ತಿ ಶರ್ಮಾ ಎಸೆದ ಚೆಂಡನ್ನು ಇಂಗ್ಲೆಂಡ್ ಆಟಗಾರ್ತಿ ನತಾಲಿ ಸೈವರ್ ಬೌಂಡರಿಯತ್ತ ಅಟ್ಟಿದ್ದರು. ಆ ಚೆಂಡನ್ನು ಕ್ಯಾಚ್ ಹಿಡಿಯುವ ಮೂಲಕ ಸ್ಮೃತಿ ಮಂಧಾನ, ಅರ್ಧ ಶತಕ ದಾಖಲಿಸಲು ಮುಂದಾಗಿದ್ದ ನತಾಲಿ ವೇಗಕ್ಕೆ ಸೆಕೆಂಡ್‌ನಲ್ಲೇ ಬ್ರೇಕ್ ಹಾಕಿದರು. ಸ್ಮೃತಿ ಮಂಧಾನಾ ಡೈ ಹೊಡೆದು ಬಾಲ್‌ ಹಿಡಿದ ವಿಡಿಯೋ ಈಗ ವೈರಲ್ ಆಗುತ್ತಿದೆ. ಇತ್ತ ನತಾಲಿ ತಾವು ಬೌಂಡರಿಗೆ ಅಟ್ಟಿದ್ದ ಚೆಂಡನ್ನು ಸ್ಮೃತಿ ಮಂಧಾನ ಕ್ಯಾಚ್ ಹಿಡಿದಿರೋದನ್ನು ಕಂಡು ಒಂದು ಕ್ಷಣ ಆಶ್ಚರ್ಯಚಕಿತರಾಗಿ ನಿಂತರು.

ಭಾರತಕ್ಕೆ ಗೆಲುವು
47 ಓವರ್ ಗಳಲ್ಲಿ ಇಂಗ್ಲೆಂಡ್ ತಂಡ 10 ವಿಕೆಟ್ ಕಳೆದುಕೊಂಡು 219 ರನ್ ಕಲೆಹಾಕಿ ಭಾರತಕ್ಕೆ 220ರ ಗುರಿ ನೀಡಿತ್ತು. ಇಂಗ್ಲೆಂಡ್ ಪರವಾಗಿ ನತಾಲಿ 49, ಎಚ್ ನೈಟ್ 46 ರನ್ ಗಳಿಸಿದ್ದರು. ಇಂಗ್ಲೆಂಡ ನೀಡಿದ ಗುರಿಯನ್ನ ಬೆನ್ನಟ್ಟಿದ ಟೀಂ ಇಂಡಿಯಾ 46.3 ಓವರ್ ನಲ್ಲಿ 6 ವಿಕೆಟ್ ಕಳೆದುಕಂಡು ಗೆಲುವನ್ನ ತನ್ನದಾಗಿಸಿಕೊಂಡಿತು. ತಂಡದ ನಾಯಕಿ ಮಿಥಾಲಿ ರಾಜ್ (ಔಟಾಗದೇ) 75 ರನ್ ಕಲೆ ಹಾಕಿದರು. ಇನ್ನೂ ರೋಚಕ ಕ್ಯಾಚ್ ಪಡೆದುಕೊಂಡಿದ್ದ ಸ್ಮೃತಿ ಮಂಧಾನಾ 49 ರನ್ ಪೇರಿಸಿದರು.

ಮಿಥಾಲಿ ರಾಜ್ ದಾಖಲೆ
ಭಾರತ ಮಹಿಳಾ ಏಕದಿನ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್‍ನಲ್ಲಿ ಅತಿ ಹೆಚ್ಚು ರನ್ ದಾಖಲಿಸಿದ ಆಟಗಾರ್ತಿಯಾಗಿ ನೂತನ ವಿಶ್ವದಾಖಲೆ ನಿರ್ಮಿಸಿದ್ದಾರೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ