CrimeNEWSನಮ್ಮಜಿಲ್ಲೆ

ತನ್ನನ್ನು ಹಿಂಬಾಲಿಸುತ್ತಿದ್ದ ಕಾಮುಕನಿಗೆ ಚಪ್ಪಲಿ ರುಚಿ ತೋರಿಸಿದ ದಿಟ್ಟ ಮಹಿಳೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ತನ್ನನ್ನು ಹಿಂಬಾಲಿಸಿ ಚುಡಾಯಿಸುತ್ತಿದ್ದ ಬೀದಿ ಕಾಮಣ್ಣಿಗೆ ನಡುರಸ್ತೆಯಲ್ಲಿ ಗೃಹಿಣಿಯೊಬ್ಬರು ತನ್ನ ಚಪ್ಪಲಿಯಿಂದ ಬಿಸಿಬೇಳೆಬಾತು ಕೊಟ್ಟ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿ ಬಳಿ ಈ ಘಟನೆ ನಡೆದಿದ್ದು, ಗೋಪಾಲ್ ಗುರಣ್ಣನವರ ಎಂಬಾತನಿಗೆ ಮಹಿಳೆ ಚಪ್ಪಲಿಯಿಂದ ಗೂಸಾಕೊಟ್ಟಿದ್ದಾರೆ. ಮಹಿಳೆ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದು, ಅವರು ಕೆಲಸ ಮುಗಿಸಿ ಮನೆಗೆ ವಾಪಸ್ ಮರಳುವ ವೇಳೆ ನೋಡಿಕೊಂಡು ಕೆಲ ತಿಂಗಳಿನಿಂದ ಹಿಂಬಾಲಿಸುತ್ತಿದ್ದ. ಈ ಬಗ್ಗೆ ಆಕೆ ಎಚ್ಚರಿಕೆ ಕೊಟ್ಟರು ಕ್ಯಾರೆ ಎನ್ನದೇ ತನ್ನ ಚಾಳಿಯನ್ನು ಮುಂದುವರಿಸಿದ್ದ. ಇದರಿಂದ ಬೇಸತ್ತ ಮಹಿಳೆ ನಡು ರಸ್ತೆಯಲ್ಲಿ ಚಪ್ಪಲಿ ಬಿಚ್ಚುಕೊಂಡು ಗೂಸಾಕೊಟ್ಟಿದ್ದಾರೆ.

ಈ ಹಿಂದೆ ಹಲವು ಬಾರಿ ನಾನು ಎಚ್ಚರಿಕೆ ನೀಡಿದ್ದರೂ ಈತ ಸುಮ್ಮನಾಗದೆ ಕಿರಿಕ್ ಮಾಡುತ್ತಲೇ ಇದ್ದ, ಇದರಿಂದ ಮಾನಸಿಕ ವೇದನೆ ಅಸುಭವಿಸುತ್ತಿದ್ದ ಮಹಿಳೆ ತನ್ನ ಪತಿಗೆ ವಿಷಯ ಮುಟ್ಟಿಸಿದ್ದಾಳೆ. ಇನ್ನು ಆತ ಬುದ್ಧಿ ಮಾತು ಕೇಳುವುದಿಲ್ಲ ಎಂದು ಅರಿತ ಪತಿಯೂ ಆಕೆಗೆ ನೀನೆ ಬುದ್ಧಿಕಲಿಸು ಎಂದು ಧೈರ್ಯ ತುಂಬಿ ತಾನು ನಿಂತುಕೊಂಡು ಗೂಸಾ ಕೊಡಿಸಿದ್ದಾನೆ.

ಮಹಿಳೆ ತನ್ನ ಪತಿಯ ಜೊತೆ ನಡುರಸ್ತೆಯಲ್ಲೇ ಚಪ್ಪಲಿಯೇಟು ಕೊಡುತ್ತಿದ್ದನ್ನು ಗಮನಸಿದ ಸಾರ್ವಜನಿಕರು ವಿಚಾರಿಸುತ್ತಿದ್ದಂತೆ ಆತ ಅಲ್ಲಿಂದ ಕಾಲ್ಕಿತ್ತಿದ್ದಾನೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ