NEWSನಮ್ಮಜಿಲ್ಲೆನಮ್ಮರಾಜ್ಯ

ಕೋವಿಡ್ ಅನ್‌ಲಾಕ್‌- ನಾಳೆಯಿಂದ 14.5 ಸಾವಿರ ಸಾರಿಗೆ ಬಸ್‌ಗಳ ಸಂಚಾರ: ಸ್ಟ್ಯಾಂಡಿಂಗ್‌ ಪ್ರಯಾಣಕ್ಕೆ ಇಲ್ಲ ಅನುಮತಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಾಳೆಯಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಬಸ್​ಗಳು ಬಹುತೇಕ ಪೂರ್ಣ ಪ್ರಮಾಣದಲ್ಲಿ ರಸ್ತೆಗಿಳಿಯಲಿದ್ದು, ನಾಲ್ಕೂ ಸಾರಿಗೆ ನಿಗಮಗಳಿಂದ 14.5 ಸಾವಿರ ಬಸ್‌ಗಳು ಕಾರ್ಯಾಚರಿಸಲಿವೆ.

ಅವುಗಳಲ್ಲಿ ಬಿಎಂಟಿಸಿಯ 4500ಕ್ಕೂ ಹೆಚ್ಚು ಬಸ್‌ಗಳು, ಕೆಎಸ್‌ಆರ್‌ಟಿಸಿಯ 4 ಸಾವಿರ ಬಸ್‌ಗಳು, ಎನ್‌ಇಕೆಆರ್‌ಟಿಸಿ ಮತ್ತು ಎನ್‌ಡಬ್ಲ್ಯುಕೆಆರ್‌ಟಿಸಿ ತಲಾ 3 ಸಾವಿರಕ್ಕೂ ಹೆಚ್ಚು ಬಸ್​ಗಳು ಸೇವೆ ಒದಗಿಸಲಿವೆ.

ಬೆಳಗ್ಗೆ5ರಿಂದ ರಾತ್ರಿ 9 ಗಂಟೆಯವರೆಗೆ ಬಸ್‌ಗಳು ಸಂಚರಿಸಲಿದ್ದು, ರಾತ್ರಿ 9 ಗಂಟೆ ನಂತರ ಬಸ್ ಸಂಚಾರ ಇರುವುದಿಲ್ಲ. ಜತೆಗೆ ಬೆಳಗ್ಗೆ 5 ಗಂಟೆಗೂ ಮುನ್ನವೂ ಬಿಎಂಟಿಸಿ ಬಸ್ ಸಂಚರಿಸುವುದಿಲ್ಲ.

8 ಗಂಟೆಗಿಂತ ಹೆಚ್ಚು ಕಾಲ ಕೆಲಸ ಮಾಡಿಸುವಂತಿಲ್ಲ
ಇನ್ನು ಬಿಎಂಟಿಸಿ ಸಿಬ್ಬಂದಿ 8 ಗಂಟೆಗೂ ಮೀರಿ ಕೆಲಸ ಮಾಡಿಸುವಂತಿಲ್ಲ. ಪ್ರತಿ ಡಿಪೋದಲ್ಲೂ 5 ಹೆಚ್ಚುವರಿ ಬಸ್‌ಗಳು ಕಾರ್ಯಾಚರಣೆಗೆ ಸಿದ್ಧವಾಗಿರಬೇಕು. ಬಸ್‌ಗಳಲ್ಲಿ ಮಾರ್ಗಸೂಚಿ ಫಲಕ ಕಡ್ಡಾಯವಾಗಿರಬೇಕು ಮತ್ತು ಶೇ.100ರಷ್ಟು ಪ್ರಯಾಣಿಕರಿಗೆ ಅಂದರೆ ಪೂರ್ಣ ಪ್ರಮಾಣದಲ್ಲಿ ಅವಕಾಶ ನೀಡಲಾಗಿದ್ದು, ನಿಂತುಕೊಂಡು (ಸ್ಟ್ಯಾಂಡಿಂಗ್‌ ) ಪ್ರಯಾಣಿಸುವುಕ್ಕೆ ಇನ್ನೂ ಅನುಮತಿ ನೀಡಿಲ್ಲ.

ಕೆಎಸ್​ಆರ್​ಟಿಸಿ : ನಾಳೆಯಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಈಗಿರುವಂತೆಯೇ ಕೆಎಸ್​ಆರ್​ಟಿಸಿ ಬಸ್​ ಸೇವೆ ಇರಲಿದೆ. ಅಂದರೆ ಪ್ರಸ್ತುತ 4 ಸಾವಿರ ಬಸ್​ಗಳು ಸಂಚರಿಸುತ್ತಿದ್ದು, ಪ್ರಯಾಣಿಕರ ಲಭ್ಯತೆ ಅನುಗುಣವಾಗಿ ಸಂಸ್ಥೆಯಿಂದ ಬಸ್‌ಗಳು ಸಂಚರಿಸಲಿವೆ ಎಂದು ಅಧಿಕಾರಿ ತಿಳಿಸಿದ್ದಾರೆ. ಇನ್ನು ಪ್ರಯಾಣಿಕರು ಕೊವಿಡ್ 19 ತಡೆ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಕೆಎಸ್ಆರ್​ಟಿಸಿ ಸೂಚಿಸಿದೆ.

ಅಂತಾರಾಜ್ಯಗಳಿಗೆ ಕೆಎಸ್​ಆರ್​ಟಿಸಿ ಬಸ್ ಸೇವೆ ಈಗ ಇರುವಂತೆಯೇ ಆಂಧ್ರಪ್ರದೇಶ, ತೆಲಂಗಾಣ ಮತ್ತು ಮಹಾರಾಷ್ಟ್ರ ನಡುವೆ ಸಂಚರಿಸಲಿವೆ. ಇನ್ನು ಉಳಿದಂತೆ ಕೇರಳ, ತಮಿಳು ನಾಡಿನಲ್ಲಿ ಇನ್ನೂ ಕೋವಿಡ್‌ ನಿಯಮ ಸಡಿಲಿಕೆಯಾಗದಿರುವುದರಿಂದ ಆ ರಾಜ್ಯಗಳಿಗೆ ಬಸ್‌ ಸೇವೆ ಲಭ್ಯವಾಗುವುದಿಲ್ಲ.

ಎನ್‌ಇಕೆ​ಆರ್​ಟಿಸಿ: ಇನ್ನು ಎನ್‌ಇಕೆ​ಆರ್​ಟಿಸಿಯಿಂದ ಈಗಾಗಲೇ 3 ಸಾವಿರ ಬಸ್​ಗಳು ಸಂಚರಿಸುತ್ತಿದ್ದು, ಪ್ರಯಾಣಿಕರ ಲಭ್ಯತೆ ನೋಡಿಕೊಂಡು ಹೆಚ್ಚುವರಿ ಬಸ್‌ ಸೇವೆಗೆ ಕ್ರಮ ವಹಿಸಲಾಗುವುದು, ಇನ್ನು ಅವುಗಳಲ್ಲಿ ಮಹಾರಾಷ್ಟ್ರ ಮತ್ತು ತೆಲಂಗಾಣ ರಾಜ್ಯಗಳಲ್ಲೂ ಸಂಚರಿಸುತ್ತಿವೆ ಎಂದು ನಿಗಮದ ಅಧಿಕಾರಿ ತಿಳಿಸಿದ್ದಾರೆ.

ಎನ್‌ಡಬ್ಲ್ಯುಕೆ​ಆರ್​ಟಿಸಿ: ಎನ್‌ಡಬ್ಲ್ಯುಕೆ​ಆರ್​ಟಿಸಿಯಿಂದ 3ಸಾವಿರಕ್ಕೂ ಹೆಚ್ಚು ಬಸ್​ಗಳು ಸಂಚರಿಸಲಿದ್ದು, ಪ್ರಯಾಣಿಕರ ಲಭ್ಯತೆ ಮೇರೆಗೆ ಹೆಚ್ಚು ಬಸ್‌ಗಳ ಸಂಚಾರಕ್ಕೆ ನಿಗಮ ಮುಂದಾಗಲಿದೆ ಎಂದು ಸಂಸ್ಥೆ ಅಧಿಕಾರಿ ತಿಳಿಸಿದ್ದಾರೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ