NEWSದೇಶ-ವಿದೇಶರಾಜಕೀಯ

ಕೊರೊನಾದಿಂದ ಮೃತಪಟ್ಟವರ ಸಂಖ್ಯೆ ಮುಚ್ಚಿಟ್ಟ ಸರ್ಕಾರ: ಸೋಂಕಿಗೆ ಬಲಿಯಾದವರು 4 ಲಕ್ಷ ಅಲ್ಲ 49ಲಕ್ಷ ಮಂದಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ದೇಶಕ್ಕೆ ಕೊರೊನಾ ಮಹಾಮಾರಿ ವಕ್ಕರಿಸಿದ ಬಳಿಕ ಲಕ್ಷಾಂತರ ಜನರು ತಮ್ಮ ಜೀವ ಕಳೆದುಕೊಂಡಿದ್ದಾರೆ. ವಿಶ್ವಮಾರಿ ಕೊರೊನಾಗೆ ಅದೆಷ್ಟೋ ಮಂದಿ ಬಲಿಯಾಗಿದ್ದಾರೆ. ಈವರೆಗೆ ದೇಶದಲ್ಲಿ ಕೊರೊನಾದಿಂದ 4 ಲಕ್ಷಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ ಎಂಬುದು ಅಧಿಕೃತ ವೆಬ್​ಸೈಟ್​ ನೀಡಿರುವ ಮಾಹಿತಿ.

ಆದರೆ, ಹೊಸ ಅಂಕಿ-ಅಂಶಗಳ ಪ್ರಕಾರ ಸಾವಿನ ಸಂಖ್ಯೆ ಕೇವಲ 4 ಲಕ್ಷ ಅಲ್ಲ. ಹೌದು, ನೂತನ ವರದಿ ಪ್ರಕಾರ ಕೊರೊನಾ ಸೋಂಕಿನಿಂದ ಇದುವರೆಗೆ 49 ಲಕ್ಷ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಎಂದು ನೂತನ ವರದಿಯೊಂದು ತಿಳಿಸಿದೆ.

ದೇಶದ ಮಾಜಿ ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ ಸುಬ್ರಮಣಿಯನ್‌ ಸಹ ಲೇಖಕರಾಗಿರುವ, ಅಮೆರಿಕ ಮೂಲದ ಗ್ಲೋಬಲ್‌ ಡೆವ-ಲಪ್‌ಮೆಂಟ್‌ ಸಂಸ್ಥೆಯ ಜಸ್ಟಿನ್‌ ಸ್ಯಾಂಡೆಫರ್‌ ಹಾಗೂ ಹಾರ್ವರ್ಡ್‌ ವಿಶ್ವವಿದ್ಯಾಲಯದ ಅಭಿಷೇಕ್‌ ಆನಂದ್‌ ತಯಾರಿಸಿದ ವರದಿ ಮಂಗಳವಾರ ಬಿಡುಗಡೆಯಾಗಿದೆ. ಇದರಲ್ಲಿ 34-49 ಲಕ್ಷ ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

‘ಕೊರೊನಾದಿಂದ ಇಷ್ಟೇ ಜನ ಮೃತಪಟ್ಟಿದ್ದಾರೆ ಎಂದು ನಿಖರವಾಗಿ ಹೇಳಲು ಆಗುವುದಿಲ್ಲ. ಆದರೆ, ಭಾರತದಲ್ಲಿ 2020ರ ಜನವರಿಯಿಂದ 2021ರ ಜೂನ್‌ ಅವಧಿಯಲ್ಲಿ 34 ಲಕ್ಷದಿಂದ 49 ಲಕ್ಷ ಜನ ಸೋಂಕಿಗೆ ಬಲಿಯಾಗಿದ್ದಾರೆ. ಅಧಿಕೃತವಾಗಿ ನೀಡಿರುವ ಮಾಹಿತಿಗಿಂತ 40 ಲಕ್ಷ ಅಧಿಕ ಜನರಂತೂ ಸಾವಿಗೀಡಾಗಿದ್ದಾರೆ,” ಎಂದು ವರದಿ ತಿಳಿಸಿದೆ.

”ದೇಶಕ್ಕೆ ಸ್ವಾತಂತ್ರ್ಯ ಬಂದ ಬಳಿಕ ನಡೆದ ಮಹಾ ದುರಂತಗಳಿಗಿಂತ ಹೆಚ್ಚಿನ ಪ್ರಮಾಣದ ಜನ ಕೊರೊನಾದಿಂದ ಮೃತಪಟ್ಟಿದ್ದಾರೆ. ಖಂಡಿತವಾಗಿಯೂ ಇದು ನೂರು, ಸಾವಿರ ಇಲ್ಲ. ಲಕ್ಷಾಂತರ ಜನ ಸೋಂಕಿಗೆ ಬಲಿಯಾಗಿದ್ದಾರೆ,” ಎಂದು ಲೇಖಕರು ವರದಿಯಲ್ಲಿ ಉಲ್ಲೇಖಿಸಿದ್ದಾರೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...