CrimeNEWSನಮ್ಮಜಿಲ್ಲೆ

ʻತಂದೆಗೆ ಒಳ್ಳೆಯ ಮಗಳಾಗಲಿಲ್ಲ, ಗಂಡನಿಗೆ ತಕ್ಕ ಹೆಂಡತಿಯಾಗಿಲ್ಲ: ನೊಂದ ಮಹಿಳೆ ಆತ್ಮಹತ್ಯೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮೈಸೂರು: ತಂದೆಗೆ ಡೆತ್‌ ನೋಟ್‌ ಬರೆದು ಮಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಎನ್‌.ಆರ್‌.ಮೊಹಲ್ಲಾದಲ್ಲಿ ನಡೆದಿದೆ.

ಮೋಹನ್‌ ಕುಮಾರಿ (32) ಆತ್ಮಹತ್ಯೆ ಮಾಡಿಕೊಂಡವರು. ʻತಂದೆಗೆ ಒಳ್ಳೆಯ ಮಗಳಾಗಲಿಲ್ಲ, ಗಂಡನಿಗೆ ತಕ್ಕ ಹೆಂಡತಿಯಾಗಿಲ್ಲʼ ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ ಎನ್ನಲಾಗಿದೆ.

ಚಾರ್ಟೆಡ್ ಅಕೌಂಟೆಂಟ್ ಬಳಿ ಸಹಾಯಕಳಾಗಿ ಕೆಲಸ ಮಾಡುತ್ತಿದ್ದ ಮೋಹನ್ ಕುಮಾರಿ 2013ರಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಉದಯ್ ಕುಮಾರ್ ಎಂಬವರನ್ನು ಪ್ರೀತಿಸಿ ವಿವಾಹವಾಗಿದ್ದರು. ಚಾರ್ಟೆಡ್ ಅಕೌಂಟೆಂಟ್ ಬಳಿ ಕೆಲಸ ಮಾಡುತ್ತಿದ್ದ ಮೋಹನ ಕುಮಾರಿ ಸಾಕಷ್ಟು ಸಾಲ ಮಾಡಿಕೊಂಡಿದ್ದರು.

ಡೆತ್‌ನೋಟ್ ಬರೆದು ನಾಯ್ಡುನಗರದಲ್ಲಿರುವ ತಂದೆ ಮಹೇಂದ್ರರಿಗೆ ಪೋಸ್ಟ್ ಮಾಡಿ ಮನೆಯಲ್ಲಿ ಒಂದು ಕಾಪಿ ಇಟ್ಟು ನೇಣಿಗೆ ಶರಣಾಗಿದ್ದಾರೆ. ಈ ಬಗ್ಗೆ ಮಹೇಂದ್ರ ಅವರು ಎನ್.ಆರ್.ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರ ಸಮೇತ ತಂದೆ ಮಹೇಂದ್ರ ಮನೆಗೆ ಬಂದಾಗ ಮಗಳು ನೇಣು ಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆ.

ಈ ಸಂಬಂಧ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ