Breaking NewsNEWSನಮ್ಮರಾಜ್ಯ

ಸಾರಿಗೆ ನಾಲ್ಕೂ ನಿಗಮಗಳ ನೌಕರರ ತುಟ್ಟಿಭತ್ಯೆ ಜುಲೈಯಿಂದಲೇ ಪಾವತಿಗೆ ಎಂಡಿ ಆದೇಶ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ನೌಕರರಿಗೆ ಜುಲೈ 1ರಿಂದ ಅನ್ವಯವಾಗುವಂತೆ ತುಟ್ಟಿಭತ್ಯೆ ದರವನ್ನು ಶೇ.11.25ರಿಂದ ಶೇ.21.50ಕ್ಕೆ ಹೆಚ್ಚಿಸಿ ಅನುಷ್ಠಾನ ಗೊಳಿಸಲು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ರಾಜ್ಯ ಸರ್ಕಾರದ ಆದೇಶದಂತೆ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರು ರಾಜ್ಯ ಸಾರಿಗೆ ನಿಗಮಗಳಲ್ಲಿ ಪರಿಷ್ಕೃತ ತುಟ್ಟಿಭತ್ಯೆ ದರವನ್ನು ಅನುಷ್ಠಾನಗೊಳಿಸಿ ನಾಲ್ಕೂ ಸಾರಿಗೆ ನಿಗಮಗಳಲ್ಲಿ ಜುಲೈ 2021ರ ಮಾಹೆಯ ವೇತನದಲ್ಲಿ ಮತ್ತು ಮುಂದಕ್ಕೆ ತುಟ್ಟಿಭತ್ಯೆ ದರವನ್ನು ಶೇ.11.25 ರಿಂದ ಶೇ.21.50ಕ್ಕೆ ಹೆಚ್ಚಿಸಿ ಅನುಷ್ಠಾನಗೊಳಿಸಿ ಪಾವತಿಸುವಂತೆ ಆದೇಶ ಹೊರಡಿಸಿದ್ದಾರೆ.

ರಾಜ್ಯ ಸರ್ಕಾರ ತನ್ನ ಉದ್ಯೋಗಿಗಳಿಗೆ ಶೇ.10.25ರಷ್ಟು ತುಟ್ಟಿ ಭತ್ಯೆ (ಡಿಯರ್ ನೆಸ್ ಅಲೋಯನ್ಸ್) ಹಾಗೂ ಡಿಯರ್ ನೆಸ್ ರಿಲೀಫ್ ಹೆಚ್ಚಳ ಮಾಡಿದ್ದು ಜು.1 ರಿಂದ ಅನ್ವಯವಾಗುವಂತೆ ಜಾರಿಗೊಳಿಸಲು ಹಣಕಾಸು ಇಲಾಖೆಗೆ ಆದೇಶ ನೀಡಿದೆ.

ಹೊಸ ನಿರ್ಧಾರ ಜಾರಿಗೆ ಬರುವುದರಿಂದ ಕೇಂದ್ರ ಸರ್ಕಾರದ ಉದ್ಯೋಗಿಗಳಿಗೆ ಹಾಗೂ ಪಿಂಚಣಿದಾರರಿಗೆ ಈ ವರೆಗೂ ಇದ್ದ ಶೇ.17 ರಷ್ಟು ಡಿಎ, ಡಿ.ಆರ್ ಈಗ ಶೇ.28 ಕ್ಕೆ ಏರಿಕೆಯಾಗಲಿದ್ದು ಕೇಂದ್ರ ಸರ್ಕಾರದ 48 ಲಕ್ಷ ಉದ್ಯೋಗಿಗಳು ಹಾಗೂ 65 ಲಕ್ಷ ಪಿಂಚಣಿದಾರರಿಗೆ ಮೂಲ ವೇತನದ ಶೇ.28 ರಷ್ಟು ಡಿ.ಎ, ಡಿಆರ್ ಏರಿಕೆಯ ಲಾಭಪಡೆಯಲಿದ್ದಾರೆ.

2020 ರ ಜನವರಿ 1, 2020 ರ ಜುಲೈ 1 ಹಾಗೂ 2021 ರ ಜನವರಿ, 1 ರ ಕಂತುಗಳನ್ನೂ ಈ ಏರಿಕೆಯ ಮೊತ್ತ ಒಳಗೊಂಡಿರುತ್ತದೆ.

ಕೋವಿಡ್-19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಕಳೆದ ವರ್ಷ ಡಿಎ ಹೆಚ್ಚಳಕ್ಕೆ 2021 ರ ಜೂ.30 ರವರೆಗೂ ತಡೆಯೊಡ್ಡಿತ್ತು.

ಬಿಎಂಟಿಸಿಯಲ್ಲಿ ನಿತ್ಯ 17 ಲಕ್ಷ ಜನರ ಪ್ರಯಾಣ, 2.10 ಕೋಟಿ ರೂ. ಸರಾಸರಿ ಆದಾಯ ಗಳಿಕೆ

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...