NEWSನಮ್ಮರಾಜ್ಯರಾಜಕೀಯ

ಆ.5ರಂದು 25 ರಿಂದ 30 ಸಚಿವರ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ರಾಜ್ಯದ ಸಚಿವ ಸಂಪುಟ ರಚನೆ ಮತ್ತು ಎಷ್ಟು ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬುದು ಬಹುತೇಕ ಇಂದೇ ತೀರ್ಮಾನವಾಗಲಿದೆ. ಎಲ್ಲವೂ ನಿಗದಿಯಂತೆ ನಡೆದರೆ ಆಗಸ್ಟ್ 5 ರಂದು ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ.

ಸದ್ಯದ ಮಾಹಿತಿ ಪ್ರಕಾರ ಇದೇ ಆಗಸ್ಟ್ 5 ರಂದು ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿಯಾಗಿದೆ ಎಂದು ಹೇಳಲಾಗುತ್ತಿದ್ದು, ಒಂದೇ ಬಾರಿಗೆ ಸಂಪುಟ ವಿಸ್ತರಣೆ ಮಾಡಿ ಮುಗಿಸಲು ಹೈಕಮಾಂಡ್ ತೀರ್ಮಾನ ಮಾಡಿದೆ. ಹೀಗಾಗಿ ಮೊದಲ ಹಂತದಲ್ಲಿ 25 ರಿಂದ 30 ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿ ಬಲ್ಲ ಮೂಲಗಳು ತಿಳಿಸಿವೆ.

ವರಿಷ್ಠರು ಇಂದೇ ನೂತನ ಸಚಿವರ ಪಟ್ಟಿ ಪ್ರಕಟಿಸುತ್ತಾರೆ. ನಂತರ ಸಚಿವರ ಪ್ರಮಾಣ ವಚನ ದಿನಾಂಕ ಪ್ರಕಟಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇನ್ನು ಡಿಸಿಎಂ ಸ್ಥಾನ ಯಾರಿಗೂ ಕೊಡುವುದಿಲ್ಲ ಎಂಬ ಬಗ್ಗೆ ಹೇಳಲಾಗುತ್ತಿದ್ದು, ಆ ಬಗ್ಗೆಯೂ ಇಂದೇ ತೀರ್ಮಾನ ಆಗಲಿದೆ. ಎರಡು ಮೂರು ಪಟ್ಟಿ ನೀಡಲಾಗಿದೆ. ಹೈಕಮಾಂಡ್ ಚರ್ಚೆಯ ನಂತರ ಸರ್ವ ಸಮ್ಮತ ತೀರ್ಮಾನ ಹೊರ ಹೊಮ್ಮಲಿದೆ. ಇಂದಿನ ಸಂಸತ್ ಕಲಾಪದ ನಂತರ ವರಿಷ್ಠರು ಸಭೆ ಸೇರಿ ಸಚಿವರ ನೇಮಕ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ.

ಮೇಕೆದಾಟು ಯೋಜನೆಯ ತ್ವರಿತಗತಿಗೆ ಆಗ್ರಹಿಸಿ ಆ.5ರಂದು ಎಎಪಿಯಿಂದ ಉಪವಾಸ ಸತ್ಯಾಗ್ರಹ

Leave a Reply

error: Content is protected !!
LATEST
ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...