CrimeNEWSದೇಶ-ವಿದೇಶನಮ್ಮಜಿಲ್ಲೆ

ಐಸಿಸ್ ಉಗ್ರರ ಜೊತೆ ನಂಟು ಆರೋಪ: ಮಾಜಿ ಶಾಸಕರ ಪುತ್ರನ ಮನೆ ಮೇಲೆ ಎನ್‍ಐಎ ದಾಳಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮಂಗಳೂರು: ಸಿರಿಯಾ ಮೂಲದ ಐಸಿಸ್ ಉಗ್ರರ ಜೊತೆ ನಂಟು ಹೊಂದಿರುವ ಆರೋಪದಡಿ ಮಂಗಳೂರಿನ ಮಾಜಿ ಶಾಸಕ ಬಿ.ಎಂ ಇದಿನಬ್ಬ ಅವರ ಮಗ ಬಿ.ಎಂ ಭಾಷಾ ಅವರ ಮನೆ ಮೇಲೆ ಎನ್‍ಐಎ ತಂಡ ದಾಳಿ ಮಾಡಿದೆ.

ಬಿ.ಎಂ ಭಾಷಾ ಮಂಗಳೂರಿನ ಉಳ್ಳಾಲದ ನಿವಾಸಿಯಾಗಿದ್ದು, ಅವರಿಗೆ ಸಿರಿಯಾ ಮೂಲದ ಐಸಿಸ್ ಉಗ್ರರ ಜೊತೆ ನಂಟು ಇರುವ ಬಗ್ಗೆ ಅನುಮಾನ ವ್ಯಕ್ತವಾಗಿದ್ದು ಈ ಪರಿಣಾಮ ಇಂದು ಬೆಳಗ್ಗೆ ಬೆಂಗಳೂರಿನಿಂದ ಬಂದ ಎನ್‍ಐಎ ಅಧಿಕಾರಿಗಳ ತಂಡ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ.

ಮಂಗಳೂರಿನಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿರುವ ಬಿ.ಎಂ. ಭಾಷಾ ಅವರ ಪುತ್ರ ವಿದೇಶದಲ್ಲಿ ಕೆಲಸದ ಮೇಲಿದ್ದಾರೆ. ಇವರ ಕುಟುಂಬ ಸದಸ್ಯರು ಐಸಿಸ್ ಸಂಬಂಧಿಸಿದ ಯೂಟ್ಯೂಬ್ ಚಾನಲ್‍ಗಳನ್ನು ಸಬ್ ಸ್ಕ್ರೈಬ್ ಮಾಡಿ ಅವರೊಂದಿಗೆ ಮೃದು ಧೋರಣೆ ಇಟ್ಟುಕೊಂಡಿದ್ದಾರೆ ಮತ್ತು ಹಲವು ಗೌಪ್ಯ ಮಾಹಿತಿ ಹಿನ್ನೆಲೆ ದಾಳಿ ನಡೆಸಲಾಗಿದೆ ಎನ್ನಲಾಗಿದೆ.

ಕಳೆದ 10 ವರ್ಷಗಳ ಹಿಂದೆ ಇದಿನಬ್ಬ ಅವರ ಪುತ್ರಿ ಐಸಿಸ್ ಜೊತೆ ಸಂಪರ್ಕ ಹೊಂದಿ ಕೇರಳದಿಂದ ನಾಪತ್ತೆಯಾಗಿದ್ದರು. ಕವಿ, ಪತ್ರಕರ್ತ, ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಬಿ.ಎಂ ಇದಿನಬ್ಬ ಬಳಿಕ ರಾಜಕಾರಣಿಯಾಗಿ ಉಳ್ಳಾಲ ಕ್ಷೇತ್ರದಿಂದ ಮೂರು ಬಾರಿ ವಿಧಾನಸಭೆ ಪ್ರವೇಶಿಸಿದರು.

ರಾಜಕೀಯದಲ್ಲಿ ಏಳು-ಬೀಳುಗಳು ಸಹಜ: ನಿರಾಸೆಯ ಮಾತನಾಡಿದ ಸಿಪಿವೈ

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...