NEWSನಮ್ಮರಾಜ್ಯರಾಜಕೀಯ

ಜಮೀರ್ ಬಗ್ಗೆ ಯಾರು ದೂರು ನೀಡಿದ್ದಾರೆಂದು ಇಡಿ ಅವರೇ ಹೇಳಬೇಕು: ಮಾಜಿ ಮುಖ್ಯಮಂತ್ರಿ ಎಚ್‌ಡಿಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ರಾಮನಗರ: ನನ್ನ ರಾಜಕೀಯ ವಿರೋಧಿಗಳು ನನ್ನ ಬಗ್ಗೆ 3-4 ಕಂಪ್ಲೇಂಟ್ ನೀಡಿದ್ದಾರೆ ಎಂಬ ಹೇಳಿಕೆಯನ್ನು ಶಾಸಕ ಜಮೀರ್ ಅಹ್ಮದ್ ಖಾನ್‍ ನೀಡಿದ್ದರು. ಈ ಬೆನ್ನಲ್ಲೇ ಜಮೀರ್ ಬಗ್ಗೆ ಯಾರು ದೂರು ನೀಡಿದ್ದಾರೆಂದು ಇಡಿ ಅವರೇ ಹೇಳಬೇಕು. ನಾನಂತೂ ಯಾರ ಬಗ್ಗೆ ಕೂಡ ದೂರು ನೀಡಿಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಬಿಡದಿ ಬಳಿಯ ಕೇತಗಾನಹಳ್ಳಿಯ ತಮ್ಮ ತೋಟದ ಮನೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮೀರ್ ಮನೆ ಬಗ್ಗೆ ಯಾರು ದೂರು ನೀಡಿದ್ದಾರೆಂದು ನನಗೆ ಗೊತ್ತಿಲ್ಲ. ನಾನಂತೂ ಯಾರ ಬಗ್ಗೆಯೂ ದೂರು ನೀಡಿಲ್ಲ. ಯಾರು ದೂರು ಕೊಟ್ಟಿದ್ದಾರೋ ಅವರೇ ಸಮರ್ಥವಾಗಿ ಉತ್ತರ ಕೊಟ್ಟುಕೊಳ್ಳುತ್ತಾರೆ ನಮಗೇಕೆ ಆ ವಿಚಾರ ಬಿಡಿ ಎಂದು ತಿಳಿಸಿದರು.

ಇನ್ನು ಕೇಂದ್ರ ಸರ್ಕಾರಲ್ಲಿರುವಂತಹ ಕೆಲವು ಸಂಸ್ಥೆಗಳು, ಮೂಗರ್ಜಿಗಳನ್ನು ಬರೆದು, ಈ ರೀತಿಯ ಸಂದರ್ಭದಲ್ಲಿ ತನಿಖೆ ಮಾಡಿಕೊಂಡು ಬಂದಿರುವಂತದ್ದು, ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ನಮ್ಮ ಮೇಲೂ ಹಲವಾರು ಬಾರಿ ತನಿಖೆಯಾಗಿಲ್ವಾ, ಇದೇ ಜಮೀನಿನ ಮೇಲೆ 25 ವರ್ಷ, 30 ವರ್ಷ ನಮಗೆಷ್ಟು ಕಾಟ ನೀಡಿದ್ದಾರೆಂಬುದು ನಮಗೆ ಮಾತ್ರ ಗೊತ್ತು ಎಂದು ಹೇಳಿದರು.

ಇನ್ನು ರಾಜಕೀಯದಲ್ಲಿ ಇರುವಾಗ ಹಲವಾರು ರೀತಿಯ ರಾಜಕೀಯ ತೊಂದರೆಗಳನ್ನು ನಾವು ಅನುಭವಿಸಲೇ ಬೇಕು. ಆದರೆ ನಾವು ಸರಿಯಾಗಿದ್ದರೆ ಯಾರು ಏನೂ ಮಾಡಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದರು.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...