NEWSನಮ್ಮರಾಜ್ಯರಾಜಕೀಯ

ನಮ್ಮ ಕಷ್ಟ ಆಲಿಸಲಿದ್ದಾರೆ ಸಚಿವ ಶ್ರೀರಾಮುಲು: ಸಾರಿಗೆ ನೌಕರರ ವಿಶ್ವಾಸ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಸಚಿವ ಸಂಪುಟದಲ್ಲಿ ನೂತನವಾಗಿ ಸಾರಿಗೆ ಸಚಿವರಾಗಿರುವ ಬಿ. ಶ್ರೀರಾಮುಲು ಅವರು ನೌಕರರ ಕಷ್ಟ ಆಲಿಸಿ ಶೀಘ್ರಗತಿಯಲ್ಲಿ ಸಮಸ್ಯೆ ಪರಿಹರಿಸುವರು ಎಂಬ ವಿಶ್ವಾಸ ನಮಗಿದೆ ಎಂದು ನೊಂದ ಎಲ್ಲ 1.20 ಲಕ್ಷ ನೌಕರರು ಹೇಳುತ್ತಿದ್ದಾರೆ.

ಬಿ. ಶ್ರೀರಾಮುಲು ಅವರು ಸಾರಿಗೆ ಸಚಿವರಾಗಿರುವುದು ಕರ್ನಾಟಕ ರಾಜ್ಯದ 4 ಸಾರಿಗೆ ನಿಗಮಗಳ ನೌಕರರ ಸಂತಸವಾಗಿದ್ದು, ಅವರು ನೊಂದವರ ಪರ ನಿಲ್ಲುವ ಮನಸ್ಸುಳ್ಳವರಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ಸೇರಿದಂತೆ ನೌಕರರ ಸಂಟನೆಗಳ ಪದಾಧಿಕಾರಿಗಳು ಹಲವೆಡೆ ಸಿಹ ಹಂಚಿ ಸಂಭ್ರಮಿಸುತ್ತಿದ್ದಾರೆ.

ರಾಜ್ಯದ ಎಲ್ಲಾ ಸಾರಿಗೆನೌಕರರ ಬೇಡಿಕೆಗಳನ್ನು ಈಡೇರಿಸಲು ಹಾಗೂ ನೌಕರರ ಕಷ್ಟ ಸುಖಗಳ ಬಗ್ಗೆ ಚಿಂತನೆ ಮಾಡುವ ಮೂಲಕ ಉತ್ತಮ ಸಚಿವರೆಂದು ಹೆಸರು ಗಳಿಸಿಕೊಳ್ಳುವ ಕೆಲಸ ಮಾಡುವಿರೆಂದು ನಂಬುತ್ತೇವೆ ಎಂದು ತಮ್ಮ ಸಾಜಾಜಿಕ ಜಾಲ ತಾಣಗಳಾದ ಫೇಸ್‌ಬುಕ್‌, ಟ್ವೀಟರ್‌ಗಳಲ್ಲಿ ಬರೆದುಕೊಳ್ಳುತ್ತಿದ್ದಾರೆ.

ಇನ್ನು ಹಿಂದಿನ ಸಾರಿಗೆ ಸಚಿವರು ಕೊಟ್ಟ ಮಾತನ್ನು ಉಳಿದುಕೊಳ್ಳಲು ವಿಫಲರಾದರು. ತಾವು ಈ ರೀತಿಯಾಗಿ ನಡೆದುಕೊಳ್ಳದೇ ಕೊಟ್ಟ ಮಾತನ್ನು ಉಳಿಸಿಕೊಳ್ಳುವ ಶ್ರೀರಾಮ ಆಗಬೇಕೆಂದು ನಮ್ಮೆಲ್ಲರ ಬಹುದಿನಗಳ ಕೊರಿಕೆಯಾಗಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರು, ಮೈಸೂರು, ಬಳ್ಳಾರಿ, ಕಲಬುರಗಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳು ಸೇರಿ ರಾಜ್ಯಾದ್ಯಂತ ಸಾರಿಗೆ ನೌಕರರು ಒಂದು ರೀತಿ ಬಡವರ ಉದ್ಧಾರಕ ಬಂದಿದ್ದಾರೆ ಎಂದು ಸಂತಸ ಹಂಚಿಕೊಳ್ಳುತ್ತ ಶುಭ ಕೋರಿದ್ದಾರೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ