NEWSನಮ್ಮರಾಜ್ಯರಾಜಕೀಯ

ಅಡ್ಜೆಸ್ಟ್‌ಮೆಂಟ್ ಮಾಡಿಕೊಳ್ಳುವುದಾದರೆ ಸರ್ಕಾರವನ್ನೇ ಉರುಳಿಸಬಹುದಿತ್ತು: ಎಚ್‌ಡಿಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ನಾವು ಅಡ್ಜೆಸ್ಟ್‌ಮೆಂಟ್ ಮಾಡಿಕೊಳ್ಳುವುದಾದರೆ ಸರ್ಕಾರವನ್ನೇ ಉರುಳಿಸಬಹುದಿತ್ತು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶಾಸಕ ಪ್ರೀತಂಗೌಡ ಅವರಿಗೆ ತಿರುಗೇಟು ನೀಡಿದ್ದಾರೆ.

ಬಿಜೆಪಿ ಜತೆ ಅಡ್ಜೆಸ್ಟ್‌ಮೆಂಟ್‌ಗಾಗಿ ಜೆಡಿಎಸ್ ಕಾಯುತ್ತಿದೆ ಎಂಬ ಪ್ರೀತಂ ಗೌಡ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ನಾವು ಯಾವ ಅಡ್ಜೆಸ್ಟ್‌ಮೆಂಟ್ ಗಾಗಿಯೂ ಕಾಯುತ್ತಿಲ್ಲ. ಅದರ ಅವಶ್ಯಕತೆ ನಮಗಿಲ್ಲ, ಯಾರೋ ಮಾತನಾಡಿದರೆ ಅವರಿಗೆ ಉತ್ತರ ಕೊಡುವ ಅವಶ್ಯಕತೆಯೂ ನಮಗಿಲ್ಲ ಎಂದು ಹೇಳಿದರು.

ಇನ್ನು ಮೇಕೆದಾಟು ಬಗ್ಗೆ ಕೇಂದ್ರ ಸರ್ಕಾರ ಪಾರ್ಲಿಮೆಂಟ್ ನಲ್ಲಿ ಏನೋ ಉತ್ತರ ನೀಡಿದೆ. ರಾಜ್ಯ ಸರ್ಕಾರ ನಾವು ಮಾಡೇ ಮಾಡುತ್ತೇವೆ ಎನ್ನುತ್ತಿದೆ. ಯಾವಾಗ ಪ್ರಾರಂಭವಾಗುತ್ತದೆ ಎಂಬುದನ್ನು ಕಾದು ನೋಡೋಣ ಎಂದರು.

ಇನ್ನು ನೂತನ ಸಿಎಂ ಉಳಿದಿರುವ 28 ತಿಂಗಳು ರಾಜ್ಯದ ಮುಖ್ಯಮಂತ್ರಿಯಾಗಿ ಕೆಲಸ ನಿರ್ವಹಿಸಲಿ. ಅವರು ಮುಂದುವರಿಯುವುದು, ಸಮಸ್ಯೆಗಳು ಎದುರಾಗುವುದು ಬಿಜೆಪಿ ಪಕ್ಷದಲ್ಲಿನ ವಿಚಾರ. ಈ ಬಗ್ಗೆ ನಾನು ಭವಿಷ್ಯ ನುಡಿಯಲ್ಲ ಎಂದು ತಿಳಿಸಿದರು.

ನನ್ನ ಆತ್ಮೀಯ ಸ್ನೇಹಿತರು ಸಂಪೂರ್ಣ ಅವಧಿಯನ್ನು ಮುಗಿಸಬೇಕು ಎನ್ನುವುದು ನಮ್ಮೆಲ್ಲರ ಆಶಯ. ಅಲ್ಲದೆ ನಾಡಿನ ಜನರ ಸಮಸ್ಯೆಗಳಿಗೆ ಸರ್ಕಾರದಲ್ಲಿ ಉತ್ತಮ ರೀತಿಯ ಕಾರ್ಯಕ್ರಮ ರೂಪಿಸಲಿ ಎಂದರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ