CrimeNEWS

38 ದಿನದ ಗಂಡು ಮಗು ಮಾರಾಟ: ಮೂವರ ಬಂಧನ- ಮತ್ತೆ ತಾಯಿಮಡಿಲು ಸೇರಿದ ಕಂದಮ್ಮ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: 38 ದಿನದ ಗಂಡು ಮಗುವಿನ ಮಾರಾಟ ಪ್ರಕರಣದಲ್ಲಿ ಮೂವರನ್ನು ವಿಲ್ಸನ್ ಗಾರ್ಡನ್ ಪೊಲೀಸರು ಬಂಧಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ತರನ್ನಂ ಬಾನು (38), ನಿಶಾತ್ ಕೌಸರ್ (45) ಮತ್ತು ಕೆ. ಸವುದ್ ಬಂಧಿತ ಆರೋಪಿಗಳು. ಕಳೆದ ಸೋಮವಾರ ಅಗಡಿ ಆಸ್ಪತ್ರೆ ಬಳಿ ಪುರುಷ ಹಾಗೂ ಮಹಿಳೆಯೊಬ್ಬರು ಜಗಳವಾಡುತ್ತಿದ್ದಾಗ ಗಸ್ತಿನಲ್ಲಿದ್ದ ಪೊಲೀಸರು ವಿಚಾರಿಸಿದ್ದಾರೆ. ಆ ವೇಳೆ ವಿಷಯ ತಿಳಿಸಲು ತಡಬಡಾಯಿಸಿದ ಮಹಿಳೆಯನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಪೊಲೀಸರು ವಿಚಾರಣೆ ಮಾಡುತ್ತಿದ್ದಂತೆ ಪುರುಷ ಅಲ್ಲಿಂದ ಪರಾರಿಯಾಗಿದ್ದು, ಮಹಿಳೆಯನ್ನು ಬಂಧಿಸಲಾಗಿದೆ. ಆಡುಗೋಡಿ ನಿವಾಸಿ ತರನ್ನಂ ಬಾನು ಕೆಲವು ದಿನಗಳ ಹಿಂದೆ ಆಕೆಯ ಮನೆ ಕೆಲಸದಾಕೆ ಗಂಡು ಮಗುವಿಗೆ ಜನ್ಮ ನೀಡಿದ್ದು, ಅದನ್ನು ದೂರದ ಸಂಬಂಧಿಗೆ ಮಾರಾಟ ಮಾಡಿದ್ದಾಗಿ ತಿಳಿಸಿದ್ದಾಳೆ.

ಮಗುವಿನ ತಂದೆ ಮುಬಾರಕ್ ಪಾಷಾ ಮಗುವಿನ ಮಾರಾಟ ಮಾಡಲು ನಿರ್ಧರಿಸಿ ಬಾನು ಜೊತೆಗೆ ವ್ಯವಹಾರ ಕುದುರಿಸಿದ್ದ. ತಾಯಿಯನ್ನು ಮನವೊಲಿಸಿದ ಬಳಿಕ ಮಗುವನ್ನು ಹೊರಗಡೆ ತಂದು ಬಾನುಗೆ ಹಸ್ತಾಂತರಿಸಿದ್ದ. ಅದನ್ನು ಆಕೆ ಮದುವೆಯಾಗಿ 15 ವರ್ಷ ಕಳೆದರೂ ಮಕ್ಕಳಿಲ್ಲದ ತನ್ನ ಸಂಬಂಧಿ ಸವುದ್ ಎಂಬುವರಿಗೆ ಮಾರಾಟ ಮಾಡಿದ್ದಳು ಎಂದು ಪೊಲೀಸರು ಹೇಳಿದ್ದಾರೆ.

ಆ ಮಗುವಿಗೆ 1.30 ಲಕ್ಷ ರೂ. ಕೊಡಲು ಒಪ್ಪಿದ ಸವುದ್, ಮುಂಗಡವಾಗಿ 50 ಸಾವಿರ ರೂ. ಗಳನ್ನು ಬಾನುಗೆ ನೀಡಿದ್ದರು. ಆದರೆ, ಬಾನು ಆ ಹಣದಲ್ಲಿ ಪಾಷಾನಿಗೆ ಪಾಲು ನೀಡಿರಲಿಲ್ಲವಂತೆ. ಇದಕ್ಕಾಗಿ ಪಾಷಾ, ಅಗಡಿ ಆಸ್ಪತ್ರೆ ಮುಂಭಾಗ ಬಾನು ಜೊತೆಗೆ ಜಗಳವಾಡುತ್ತಿದ್ದ. ಈ ವೇಳೆ ಆಕೆಯನ್ನು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಬಾನು ನೀಡಿದ ಹೇಳಿಕೆ ಆಧಾರದ ಮೇಲೆ ಸವುದ್ ಮತ್ತು ಕೌಶರ್ ಅವರನ್ನು ಬಂಧಿಸಲಾಗಿದೆ. ಇನ್ನು 38 ದಿನಗಳ ಗಂಡುಮಗುವನ್ನು ತಾಯಿ ಮಡಿಲಿಗೆ ಮತ್ತೆ ಸೇರಿಸಲಾಗಿದೆ. ಪಾಷಾನಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ