CrimeNEWS

ವೆಹಿಕಲ್ ಟೋಯಿಂಗ್ ಮಾಡುತ್ತಿದ್ದ ಹುಡುಗರ ಅಟ್ಟಾಡಿಸಿ ಹೊಡೆದ ಪಬ್ಲಿಕ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಗರದಲ್ಲಿ ವೆಹಿಕಲ್ ಟೋಯಿಂಗ್ ಮಾಡುತ್ತಿದ್ದ ಹುಡುಗರನ್ನು ಸಾರ್ವಜನಿಕರು ಅಟ್ಟಾಡಿಸಿಕೊಂಡು ಹೊಡೆದಿರುವ ಘಟನೆ ಇಂದಿರಾ ನಗರದಲ್ಲಿ ನಡೆದಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಇದು ನಗರದಲ್ಲಿ ನಡೆದಿರುವ ಎರಡನೇ ಘಟನೆಯಾಗಿದ್ದು, ಕಳೆದ ತಿಂಗಳು ಯಲಹಂಕದಲ್ಲಿ ಬೈಕ್ ಟೋಯಿಂಗ್ ಮಾಡೋ ವಿಚಾರವಾಗಿ ಇಬ್ಬರಿಗೆ ಹೆಲ್ಮೆಟ್‍ನಿಂದ ಹಿಗ್ಗಾಮುಗ್ಗ ಸಾರ್ವಜನಿಕರು ಥಳಿಸಿದ್ದರು. ಘಟನೆ ಸಂಬಂಧ ಹಲ್ಲೆಮಾಡಿದವರ ಮೇಲೆ ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಇಬ್ಬರನ್ನು ಬಂಧಿಸಲಾಗಿತ್ತು.

ಈ ಘಟನೆ ಮಾಸುವ ಮುನ್ನವೇ ನಗರದಲ್ಲಿ ಮತ್ತೊಂದು ಘಟನೆ ಹಲಸೂರು ಸಂಚಾರಿ ಪೊಲೀಸ್ ಠಾಣಾ ಟೋಯಿಂಗ್ ಹುಡುಗರ ಮೇಲೆ ಹಲ್ಲೆ ನಡೆದಿದೆ. ಇಂದಿರಾ ನಗರದಲ್ಲಿ ಸಂಜೆ ನಾಲ್ಕು ಗಂಟೆಗೆ ಬೈಕ್ ಟೋಯಿಂಗ್ ಮಾಡುವ ವಿಚಾರವಾಗಿ ಸಾರ್ವಜನಿಕರು ಹಾಗೂ ಟೋಯಿಂಗ್ ಸಿಬ್ಬಂದಿ ನಡುವೆ ಗಲಾಟೆ ಆಗಿದೆ. ಗಲಾಟೆ ವಿಕೋಪಕ್ಕೆ ಹೋದಾಗ ಸಾರ್ವಜನಿಕರು ಟೋಯಿಂಗ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ.

ಈ ಘಟನೆ ಸಂಬಂಧ ಇಂದಿರಾ ನಗರ ಪೊಲೀಸ್ ಠಾಣೆಯಲ್ಲಿ ನಾಲ್ವರ ವಿರುದ್ಧ ಹಲಸೂರು ಸಂಚಾರಿ ಪೊಲೀಸ್ ಠಾಣಾ ಎಸ್.ಐ ರಾಜೇಂದ್ರ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ