NEWSದೇಶ-ವಿದೇಶವಿದೇಶ

ಆಫ್ಘಾನಿಸ್ತಾನ ವಶಪಡಿಸಿಕೊಂಡ ತಾಲಿಬಾನಿಗಳ ಅಟ್ಟಹಾಸ ಇನ್ನೂ ನಿಂತಿಲ್ಲ

ವಿಜಯಪಥ ಸಮಗ್ರ ಸುದ್ದಿ

ಕಾಬೂಲ್: ಆಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿರುವ ತಾಲಿಬಾನಿಗಳ ಅಟ್ಟಹಾಸ ಇನ್ನೂ ನಿಂತಿಲ್ಲ. ಭಾರತದ ರಾಜತಾಂತ್ರಿಕ ಕಚೇರಿಯಲ್ಲಿ ಮಹತ್ವದ ದಾಖಲೆಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ರಾಜತಾಂತ್ರಿಕ ಕಚೇರಿಯಲ್ಲಿದ್ದ ವಾಹನಗಳನ್ನು ಅವರು ವಶಪಡಿಸಿಕೊಂಡಿದ್ದು ಮಹತ್ವದ ದಾಖಲೆಗಳಿಗಾಗಿ ಹುಡುಕಾಟ ಮುಂದುವರಿಸಿದ್ದಾರೆ. ಹೆರತ್ ಮತ್ತು ಕಂದಹಾರ್‌ನಲ್ಲಿರುವ ಎರಡು ರಾಜತಾಂತ್ರಿಕ ಕಚೇರಿಯಲ್ಲಿ ತೀವ್ರ ಶೋಧ ನಡೆಸಿದ್ದಾರೆ. ಭಾರತದ 450 ಮಂದಿ ಇನ್ನು ಅಲ್ಲೆ ಇದ್ದು ಅವರ ಸ್ಥಿತಿ ಅತಂತ್ರವಾಗಿದೆ. ಅವರನ್ನು ಕರೆತರಲು ಸರ್ಕಾರಕ್ಕೆ ಸವಾಲಾಗಿದೆ.

ಅಮೆರಿಕ ಮತ್ತು ಇತರ ರಾಯಭಾರ ಕಚೇರಿಯ ಮೂಲಕ ಅವರನ್ನು ಕರೆಸಿಕೊಳ್ಳುವಲ್ಲಿ ವಿದೇಶಾಂಗ ಸಚಿವಾಲಯ ಪ್ರಯತ್ನ ನಡೆಸಿದೆ. ಅಲ್ಲಿನ ಭಾರತೀಯರನ್ನು ವಿಮಾನ ನಿಲ್ದಾಣದವರೆಗೂ ಕರೆತರುವುದು ಬಹಳ ಕಷ್ಟದಾಯಕವಾಗಿದೆ.

ಪ್ರತಿ ಚೆಕ್ ಪೋಸ್ಟ್‌ನಲ್ಲೂ ಬಂದೂಕುಧಾರಿ ತಾಲಿಬಾನಿಗಳು ತಪಾಸಣೆ ನಡೆಸುತ್ತಿದ್ದಾರೆ. ಅವರ ಒಪ್ಪಿಗೆ ಇಲ್ಲದೆ ಕಾಬೂಲನ್ನು ಬಿಟ್ಟು ಹೊರ ಬರಲಿಕ್ಕಾಗದೇ ಭಾರತೀಯರು ಮನೆಯೊಳಗೆ ಯಾತನೆ ಅನುಭವಿಸುತ್ತಿದ್ದಾರೆ.

ಕಾಬೂಲ್ ಏರ್‌ಪೋರ್ಟ್‌ ನಿಂದ ಭಾರತದ ರಾಯಭಾರ ಕಚೇರಿ ಹತ್ತು ಕಿಮೀ ದೂರ ಇದೆ. ಸದ್ಯಕ್ಕೆ ಏರ್‌ಪೋರ್ಟ್‌ ಸುತ್ತ ಅಮೆರಿಕ ಸೈನಿಕರ ಪಹರೆ ಇದೆ. ಆದರೆ ಏರ್ಪೋರ್ಟ್‌ ಬಿಟ್ಟು ಉಳಿದ ಕಡೆ ಅವರು ಇಲ್ಲ.

ಹಾಗಾಗಿ ತಾಲಿಬಾನಿಗಳ ಕಣ್ತಪ್ಪಿಸಿ ಬರಲು ಬಹಳ ಕಷ್ಟ. ಹೀಗಾಗಿ ತಾಲಿಬಾನಿಗಳ ಸ್ಥಳೀಯ ನಾಯಕರನ್ನು ಸಂಪರ್ಕಿಸುವುದು ಸವಾಲಾಗಿದೆ ಎಂದು ವರದಿಯಾಗಿದೆ. ಅದೂ ಅಲ್ಲದೆ ತಾಲಿಬಾನ್ ವಿರುದ್ಧ ಹೋರಾಡಿದ್ದ ಆಫ್ಘನ್‍ನ ಗುಪ್ತಚರ ಸಂಸ್ಥೆ ಸೈನಿಕರನ್ನು ತಾಲಿಬಾನಿಗಳು ಮನೆ ಮನೆಯಲ್ಲೂ ಹುಡುಕುತ್ತಿದ್ದಾರೆ. ಇದರಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

Leave a Reply

error: Content is protected !!
LATEST
ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ