NEWSನಮ್ಮರಾಜ್ಯ

ಸಾರಿಗೆ ಮಹಿಳಾ ಅಧಿಕಾರಿ, ಸಿಬ್ಬಂದಿಗಳ ಸ್ವ ರಕ್ಷಣೆಗೆ ಆದ್ಯತೆ: ಅಧ್ಯಕ್ಷ ನಂದೀಶ್ ರೆಡ್ಡಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಜಾಗ್ವಾರ್ ಸ್ಪೋರ್ಟ್ಸ್ ಅಕಾಡೆಮಿ ವತಿಯಿಂದ ಬೋಧಿಸುವ ಸ್ವರಕ್ಷಣ ಕೌಶಲ್ಯವನ್ನು ಆಸಕ್ತಿಯಿಂದ ಕಲಿತಲ್ಲಿ ತಮ್ಮನ್ನು ತಾವೇ ರಕ್ಷಣೆ ಮಾಡಿಕೊಳ್ಳಲು ಅನುಕೂಲವಾಗಲಿದೆ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಅಧ್ಯಕ್ಷ ಎನ್‌.ಎಸ್. ನಂದೀಶ್ ರೆಡ್ಡಿ ಸಂಸ್ಥೆಯ ಮಹಿಳಾ ನೌಕರರಿಗೆ ಸಲಹೆ ನೀಡಿದರು.

ನಿರ್ಭಯ ಯೋಜನೆಯಡಿಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಕೇಂದ್ರ ಕಚೇರಿ ನಾಲ್ಕನೇ ಮಹಡಿಯಲ್ಲಿರುವ ಸಭಾಂಗಣದಲ್ಲಿ ಸಂಸ್ಥೆಯ ಎಲ್ಲ ಮಹಿಳಾ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಆಯೋಜಿಸಿರುವ ಸ್ವರಕ್ಷಣೆ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇದರ ಜತೆಗೆ ದೈನಂದಿನ ಬದುಕಿನಲ್ಲಿ ಪ್ರತಿದಿನ ಪ್ರಾಣಾಯಾಮಗಳನ್ನು ಮಾಡುವುದರಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ದೃಢತೆ ಹೊಂದಲು ಸಾಧ್ಯವಿದೆ. ಇದನ್ನು ಅಳವಡಿಸಿಕೊಳ್ಳಲು ಮುಂದಾಗಿ ಎಂದು ಸಲಹೆ ನೀಡಿದರು.

ಮಹಿಳಾ ಅಧಿಕಾರಿ ಸಿಬ್ಬಂದಿಗಳಿಗೆ ಸ್ವ ರಕ್ಷಣಾ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ನಿರ್ಭಯ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರವು ಶೇ. 60ರಷ್ಟು ಮತ್ತು ರಾಜ್ಯ ಸರ್ಕಾರ ಶೇ.40 ರಷ್ಟು ಒಟ್ಟು 1.80 ಕೋಟಿ ರೂ. ಅನುದಾನವನ್ನು ಒದಗಿಸಿದೆ. ಅದನ್ನು ಸಂಸ್ಥೆಯ 3000 ಮಹಿಳಾ ಅಧಿಕಾರಿ, ನೌಕರರು ಸ್ವ ರಕ್ಷಣೆಯ ತರಬೇತಿ ಪಡೆಯಲಿದ್ದು ತರಬೇತಿಯು 64 ಗಂಟೆಗಳು, 32 ದಿನಗಳ ಪ್ರಾಯೋಗಿಕ ಮತ್ತು ಬೋಧನಾ ತರಬೇತಿಯನ್ನು ಒಳಗೊಂಡಿದೆ ಎಂದು ತಿಳಿಸಿದರು.

ಬಿಎಂಟಿಸಿ ಉಪಾಧ್ಯಕ್ಷ ಡಾ. ಎನ್.ಆರ್. ವೆಂಕಟೇಶ್ ಮಾತನಾಡಿ, ಸಂಸ್ಥೆಯು ಮಹಿಳೆಯರಿಗೆ ಆಯೋಜಿಸುತ್ತಿರುವ ಸ್ವ ರಕ್ಷಣ ತರಬೇತಿಯು ಪ್ರಾಯೋಗಿಕ ಹಾಗೂ ಬೋಧನೆ ಆಧಾರಿತ ತರಬೇತಿ ಯಾಗಿದೆ. karate-do, ಮಾರ್ಸಲ್ ಮುಂತಾದ ಪ್ರಾಯೋಗಿಕ ತರಬೇತಿ ಹಾಗೂ ಕಾನೂನು ಅರಿವನ್ನು ಮೂಡಿಸಲಾಗುತ್ತದೆ ಎಂದು ತಿಳಿಸಿದರು.

ಇನ್ನು ನಿತ್ಯ ಜನವದಲ್ಲಿ ಒಡನಾಟ ಹೊಂದುವ ಸಾರ್ವಜನಿಕರೊಂದಿಗೆ ಸಂವಹನೆ, ಸಮಾಲೋಚನೆ, ಕೌಶಲ್ಯ, ಲಿಂಗ ಸಂವೇದನೆ ಅಂತಹ ವಿಷಯಗಳ ಬಗ್ಗೆಯೂ ಸಹ ತರಬೇತಿಯನ್ನು ನೀಡಲಾಗುತ್ತದೆ. ಇದನ್ನು ಎಲ್ಲಾ ವಯೋಮಾನದ ಮಹಿಳೆಯರು ಸುಲಭವಾಗಿ ಅಳವಡಿಸಿಕೊಳ್ಳಬಹುದಾಗಿದೆ. ಮಹಿಳೆಯರು ತಮ್ಮ ದೈನಂದಿನ ಜೀವನದಲ್ಲಿ ತೊಂದರೆಗಳನ್ನು ಸಮರ್ಥವಾಗಿ ಎದುರಿಸಲು ಇದು ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು..

ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಎಂ.ಟಿ. ರೆಜು ಮಾತನಾಡಿ, ಮಹಿಳಾ ನೌಕರರು ಸ್ವ ರಕ್ಷಣ ತರಬೇತಿ ಪಡೆಯುವುದರಿಂದ ಅನಿರೀಕ್ಷಿತ ಘಟನೆಗಳು ಸಂಭವಿಸಿದಾಗ ತಮ್ಮನ್ನು ತಾವೇ ರಕ್ಷಿಸಿಕೊಳ್ಳಬಹುದು. ಜೊತೆಗೆ ಮಹಿಳಾ ಪ್ರಯಾಣಿಕರ ರಕ್ಷಣೆಗೆ ಸಹಾಯ ಮಾಡಲು ಈ ತರಬೇತಿ ಅನುಕೂಲವಾಗಲಿದೆ ಎಂದು ತಿಳಿಸಿದರು.

ಸಮಾರಂಭದಲ್ಲಿ ಸಂಸ್ಥೆಯ ನಿರ್ದೇಶಕ ಡಾ. ಅರುಣ್, ಮಂಡಳಿ ನಿರ್ದೇಶಕರಾದ ಟಿ.ಪಿ, ಪ್ರಕಾಶ್, ಶ್ರೀಧರ್ ಕಲ್ಲೂರು, ಕೆ.ಪಿ ಭೃಗೇಶ್‌, ಅಧಿಕಾರಿ ಜಾಗ್ವರ್ ಸ್ಪೋರ್ಟ್ಸ್ ಅಕಾಡೆಮಿಯ ಮುಖ್ಯ ತರಬೇತುದಾರ ಪ್ರೊ. ಪ್ರಸಾದ್‌, ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

error: Content is protected !!
LATEST
ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...