NEWSರಾಜಕೀಯ

9 ತಿಂಗಳ ಬಳಿಕ ಹಿಂಡಲಗಾ ಜೈಲಿನಿಂದ ಹೊರಬಂದ ಮಾಜಿ ಸಚಿವ ವಿನಯ್ ಕುಲಕರ್ಣಿ : ಹೆಂಗಳೆಯರಿಂದ ಪೂರ್ಣಕುಂಭ ಸ್ವಾಗತ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದ ಆರೋಪಡಿ 9 ತಿಂಗಳಿನಿಂದ ಜೈಲು ವಾಸ ಅನುಭವಿಸಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ ಬೆಳಗಾವಿಯ ಹಿಂಡಲಗಾ ಜೈಲಿನಿಂದ ಶನಿವಾರ ಬಿಡುಗಡೆಯಾಗಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಅವರನ್ನು ಹಿಂಡಲಗಾ ಜೈಲಧಿಕಾರಿಗಳು ಪ್ರಕ್ರಿಯೆ ಮುಗಿಸಿ ಬಿಡುಗಡೆ ಮಾಡಿದ್ದಾರೆ. ನಿನ್ನೆಯೇ ಅವರ ಬಿಡುಗಡೆಯಾಗಬೇಕಿತ್ತು. ಆದರೆ, ಕೋರ್ಟ್‌ ನೀಡಿರುವ ಆದೇಶ ಜೈಲ್‌ ಅಧಿಕಾರಿಗಳಿಗೆ ತಲುಪಲು ಮತ್ತು ಶುಕ್ರವಾರ ಸಾರ್ವತ್ರಿಕ ರಜೆ ಇದ್ದ ಕಾರಣ ಬಿಡುಗಡೆಯಾಗಲಿಲ್ಲ. ಹೀಗಾಗಿ ಇಂದು ಜೈಲಧಿಕಾರಿಗಳು ಎಲ್ಲ ಪ್ರಕ್ರಿಯೆ ಮುಗಿಸಿ ಬಿಡುಗಡೆ ಮಾಡಿದ್ದಾರೆ.

ಇನ್ನು ಅವರು ಬಿಡುಗಡೆಯಾಗುತ್ತಿದ್ದಾರೆ ಎಂಬ ವಿಷಯ ತಿಳಿದು ಜೈಲಿನ ಹೊರಗೆ ಭಾರಿ ಸಂಖ್ಯೆಯಲ್ಲಿ ಅಪಾರ ಅಭಿಮಾನಿಗಳು, ಕುಟುಂಬಸ್ಥರು ಕಾದು ಕುಳಿತು ಅವರನ್ನು ಸ್ವಾಗತಿಸಿದರು. ಹೆಣ್ಣುಮಕ್ಕಳು ಪೂರ್ಣಕುಂಭ ಸ್ವಾಗತ ಕೋರಿದರು.

ಈ ವೇಳೆ ನೂಕುನುಗ್ಗಲು ಉಂಟಾಯಿತು, ಜನರು ಕೊರೊನಾ ನಿಯಮ ಮರೆತು ತಳ್ಳಾಡುತ್ತಿರುವುದು ಕಂಡುಬಂತು. ಪೊಲೀಸರು ಗುಂಪನ್ನು ಚದುರಿಸಲು ಹರಸಾಹಸಪಡಬೇಕಾಯಿತು.

ಮುಂಬರುವ ದಿನಗಳಲ್ಲಿ ನಾನು ಹೇಗಿರಬೇಕೆಂದು ಎಂದು ಪಾಠ ಕಲಿತಿದ್ದೇನೆ, ಇಂದು ಜಾಮೀನು ಸಿಕ್ಕಿದ್ದು, ಮುಂದಿನ ದಿನಗಳಲ್ಲಿ ನಿರಪರಾಧಿಯಾಗಿ ಹೊರಬರುತ್ತೇನೆ, ನನಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್ ಗೆ ಧನ್ಯವಾದ ಹೇಳುತ್ತೇನೆ ಎಂದು ವಿನಯ್ ಕುಲಕರ್ಣಿ ಹೇಳಿದರು.

ಜೈಲ್‌ನಿಂದ ಹೊರಬಂದ ಕೂಡಲೇ ಸುದ್ದಿಗಾರರೊಂದಿಗೆ ಮಾತನಾಡಿ, ಇನ್ನು ಮುಂದೆ ನಾನು ಬೇರೆಯದೇ ರೀತಿಯ ರಾಜಕಾರಣಿಯಾಗುತ್ತೇನೆ ಎಂದು ಹೇಳಿದರು.

ವಿನಯ್ ಕುಲಕರ್ಣಿ ಬೆಳಗಾವಿಯ ಶಿವಬಸವ ನಗರದಲ್ಲಿರುವ ನಾಗನೂರು ರುದ್ರಾಕ್ಷಿಮಠಕ್ಕೆ ಭೇಟಿ ನೀಡಿ ಮಠದ ಅಲ್ಲಮಪ್ರಭು ಶ್ರೀಗಳ ಆಶೀರ್ವಾದ ಪಡೆಯಲಿದ್ದಾರೆ. ರುದ್ರಾಕ್ಷಿಮಠಕ್ಕೆ ಭೇಟಿ ಬಳಿಕ ಮಧ್ಯಾಹ್ನ ಬೆಂಗಳೂರಿಗೆ ತೆರಳುವ ಸಾಧ್ಯತೆ ಇದೆ ಎನ್ನಲಾಗಿದೆ. ಸಾಂಬ್ರಾ ಏರ್‍ಪೋರ್ಟ್‍ಗೆ ತೆರಳಿ ಮಧ್ಯಾಹ್ನ 3.40ರ ಫ್ಲೈಟ್‍ಗೆ ಬೆಂಗಳೂರಿಗೆ ತೆರಳುವ ಸಾಧ್ಯತೆ ಇದೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...