NEWSನಮ್ಮರಾಜ್ಯ

ಸಾರಿಗೆ ನೌಕರರು: ಕ್ವಾರ್ಟರ್ಸ್‌ ಖಾಲಿ ಮಾಡುವುದಕ್ಕೆ ತಡೆಯಾಜ್ಞೆ ಕೋರಿ ಸಲ್ಲಿಸಿರುವ ಅರ್ಜಿ ಮಾನ್ಯ- ಆ.23ಕ್ಕೆ ತೀರ್ಪು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮುಷ್ಕರದ ವೇಳೆ ವಜಾ ಮಾಡಿರುವ ನೌಕರರಿಗೆ ಕ್ವಾರ್ಟರ್ಸ್‌ ಖಾಲಿ ಮಾಡಬೇಕು ಎಂದು ಅಂತಿಮ ನೋಟಿಸ್‌ ನೀಡಿರುವುದಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಸಲ್ಲಿಸಿರುವ ಪಿಟಿಷನ್‌ ಅರ್ಜಿಯನ್ನು ಮಾನ್ಯ ಮಾಡಿರುವ ಬೆಂಗಳೂರು ಸಿಟಿ ಸಿವಿಲ್‌ ನ್ಯಾಯಾಲಯ ತೀರ್ಪನ್ನು ಸೋಮವಾರಕ್ಕೆ (ಆ23) ಕಾಯ್ದಿರಿಸಿದೆ.

ಶನಿವಾರ ಬೆಳಗ್ಗೆ ನ್ಯಾಯಾಲಯದಲ್ಲಿ ಕಲಾಪ ಆರಂಭವಾಗುತ್ತಿದ್ದಂತೆ ಬಿಎಂಟಿಸಿ ನೌಕರ ಜಯಪ್ರಕಾಶ್‌ ಅವರ ಪರ ಸುಪ್ರೀಂ ಕೋರ್ಟ್‌ ಹಾಗೂ ಹೈ ಕೋರ್ಟ್‌ ವಕೀಲರಾದ ಎಚ್‌.ಬಿ.ಶಿವರಾಜು ಅವರು ನೋಟಿಸಿ ನೀಡುವುದಕ್ಕೆ ತಡೆಯಾಜ್ಞೆ ನೀಡುವಂತೆ ಅರ್ಜಿ ಸಲ್ಲಿಸಿದರು. ಆ ಪಿಟಿಷನ್‌ ಅರ್ಜಿಯನ್ನು ಸಿಟಿ ಸಿವಿಲ್‌ ನ್ಯಾಯಾಲಯದ 56ನೇ ಕೋರ್ಟ್‌ ಹಾಲ್‌ನ ನ್ಯಾಯಾಧೀಶರಾದ ಕೃಷ್ಣಮೂರ್ತಿ ಆರ್‌. ಪಡಸಲಗಿ ಅವರಿದ್ದ ನ್ಯಾಯಪೀಠ ಮಾನ್ಯ ಮಾಡಿತು.

ನಂತರ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಪೀಠ ಬಿಎಂಟಿಸಿ ನೌಕರ ಜಯಪ್ರಕಾಶ್‌ ಪರ ವಕೀಲ ಶಿವರಾಜು ಅವರು ಸುಮಾರು ಒಂದು ಗಂಟೆ ಕಾಲ ಮಂಡಿಸಿದ ವಾದವನ್ನು ಆಲಿಸಿ, ತೀರ್ಪನ್ನು ಆಗಸ್ಟ್‌ 23ಕ್ಕೆ ಕಾಯ್ದಿರಿಸಿತು.

ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಾರಿಗೆ ನೌಕರರು ನಡೆಸುತ್ತಿದ್ದ ಮುಷ್ಕರದ ವೇಳೆ 3 ಸಾವಿರಕ್ಕೂ ಹೆಚ್ಚು ನೌಕರರನ್ನು ವಜಾ ಮಾಡಲಾಗಿದೆ. ಈ ನಡುವೆ ಕ್ವಾರ್ಟರ್ಸ್‌ ಖಾಲಿ ಮಾಡಬೇಕು ಎಂದು ಬಿಎಂಟಿಸಿ ಅಧಿಕಾರಿಗಳು ಅಂತಿಮ ನೋಟಿಸ್‌ ನೀಡಿದ್ದಾರೆ.

ಈ ಸಂಬಂಧ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರು (ಎಂಡಿ) ಮತ್ತು ಇತರರ ವಿರುದ್ಧ ನೌಕರ ಜಯಪ್ರಕಾಶ್‌ ಎಂಬುವರು  ನ್ಯಾಯಾಲಯದಲ್ಲಿ ಇಂದು ಅರ್ಜಿಸಲ್ಲಿಸಿದ್ದಾರೆ.

ಏನೂತಪ್ಪು ಮಾಡದ ನಮ್ಮನ್ನು ಏಕಾಏಕಿ ಕೆಲಸದಿಂದ ವಜಾ ಮಾಡಿದ್ದು ಅಲ್ಲದೇ ಈಗ ಕ್ವಾರ್ಟರ್ಸ್‌ ಖಾಲಿ ಮಾಡುವಂತೆ ಒತ್ತಡ ಹೇರುತ್ತಿರುವ ಅಧಿಕಾರಿಗಳ ವಿರುದ್ಧ ಸದ್ಯಕ್ಕೆ ಜಯ ಪ್ರಕಾಶ್‌ ಅವರು ಸಮರ ಸಾರಿದ್ದು ಮಾಡು ಇಲ್ಲವೇ ಮಡಿ ಎಂಬ ಹೋರಾಟಕ್ಕೆ ದುಮುಕಿದಂತ್ತಾಗಿದೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...