NEWSನಮ್ಮರಾಜ್ಯರಾಜಕೀಯ

ರಾಷ್ಟ್ರ ರಾಜಕಾರಣದ ಬಗ್ಗೆ ಸಿದ್ದರಾಮಯ್ಯಗೆ ಪುಕ್ಕಲುತನವಿದೆ: ಎಚ್‌.ವಿಶ್ವನಾಥ್‌

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ರಾಷ್ಟ್ರ ರಾಜಕಾರಣದ ಬಗ್ಗೆ ಪುಕ್ಕಲುತನವಿದೆ. ಆದ್ದರಿಂದಲೇ ರಾಷ್ಟ್ರ ಮಟ್ಟದ ರಾಜಕೀಯ ಚಟುವಟಿಕೆಗಳಲ್ಲಿ ಭಾಗಿಯಾಗಲು ಹಿಂಜರಿಯುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ವ್ಯಂಗ್ಯವಾಡಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಸೋಮವಾರ ಮೈಸೂರು ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿಯಾಗಿದ್ದ ಎಚ್.ಡಿ ದೇವೇಗೌಡ ಅವರು ದೇಶದ ಪ್ರಧಾನಿಯಾದರು. ಮೂರು ಬಾರಿ ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಪ್ರಧಾನಿಯಾದರು. ಪ್ರಧಾನಿ ಹುದ್ದೆ ಎನ್ನುವುದು ರಾಷ್ಟ್ರದ ಕಾರ್ಯಾಂಗದ ಅತ್ಯುನ್ನತ ಹುದ್ದೆ ಎಂದರು.

ಪ್ರಧಾನಿ ಅಭ್ಯರ್ಥಿ ಮಾಡುವುದಾದರೆ ರಾಷ್ಟ್ರ ರಾಜಕಾರಣಕ್ಕೆ ಬರುತ್ತೇನೆಂದು ಕಾಂಗ್ರೆಸ್ ವರಿಷ್ಠರಿಗೆ ಸಿದ್ದರಾಮಯ್ಯ ಹೇಳಬೇಕಿತ್ತು. ಹೇಳಲಿಲ್ಲ. ದೇವೇಗೌಡರು, ನರೇಂದ್ರ ಮೋದಿ ಪ್ರದರ್ಶಿಸಿದ ಧೈರ್ಯ ಸಿದ್ದರಾಮಯ್ಯ ಅವರಿಗೆ ಇಲ್ಲ. ಮತ್ತೇಕೆ ಪ್ರಧಾನಿ ಮೋದಿ ಅವರ ವಿರುದ್ಧ ಟೀಕೆ ಮಾಡಬೇಕು ಎಂದು ಪ್ರಶ್ನಿಸಿದರು.

ದೇವೇಗೌಡರು ಪ್ರಧಾನಿಮಂತ್ರಿಯಾದ ಸಂದರ್ಭದಲ್ಲಿ ತಾನು ಕಾಂಗ್ರೆಸ್ ಪಕ್ಷದಲ್ಲಿದ್ದೆ. ಆದರೂ ಕನ್ನಡಿಗರೊಬ್ಬರು ಪ್ರಧಾನಿಯಾದರು ಎಂದು ಎಲ್ಲರಿಗೂ ಸಿಹಿ ಹಂಚಿದ್ದೆ. ಇದರಲ್ಲಿ ಅಸೂಯೆ ಪಡುವಂಥದ್ದು ಇಲ್ಲ. ಕನ್ನಡಿಗರು ಪ್ರಧಾನಿಯಾಗೋದು ಹೆಮ್ಮೆಯ ವಿಚಾರ ಎಂದು ಸ್ಮರಿಸಿದರು.

‘ಯಡಿಯೂರಪ್ಪ ಮುಖ್ಯ ಮಂತ್ರಿಯಿದ್ದಾಗ ನಿತ್ಯವೂ ಭ್ರಷ್ಟ ಎಂದು ವಾಗ್ದಾಳಿ ನಡೆಸುತ್ತಿದ್ದ ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾ ಮಿ; ಜಲಸಂಪನ್ಮೂಲ ಇಲಾಖೆಗೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ, ಇದರಲ್ಲೇನೋ ರಾಜಕೀಯ ವಾಸನೆ ಇದೆ.

ವಿಜಯೇಂದ್ರ , ಯಡಿಯೂರಪ್ಪ ಹಣಿಯುವ ತಂತ್ರಗಾರಿಕೆ ನಡೆದಿದೆ ಎನ್ನುತ್ತಿರುವುದು ಬೂಟಾಟಿಕೆಯ ಹೇಳಿಕೆ. ನೀವಿಬ್ಬರೂ ಭ್ರಷ್ಟಾಚಾರದ ಪರವೋ? ವಿರುದ್ಧವೋ? ಎಂಬುದನ್ನು ಮೊದಲು ಸ್ಪ ಷ್ಟ ಪಡಿಸಿ’ ಎಂದು ವಿಶ್ವನಾಥ್ ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ಭ್ರಷ್ಟಾಚಾರದ ವಿರುದ್ಧ ಮಾತನಾಡುವುದರಲ್ಲಿ ಅರ್ಥವಿಲ್ಲ. ಇವರು ಮುಖ್ಯಮಂತ್ರಿಯಾಗಿದ್ದಾಗ 326 ಐಎಎಸ್, ಐಪಿಎಸ್, ಕೆಎಎಸ್ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿಬಂದಿತ್ತು. ಅವರ ಸಚಿವ ಸಂಪುಟ ಆ ವಿಚಾರವನ್ನೇ ತಳ್ಳಿಹಾಕಿತು. ಈಗ ಸಿದ್ದರಾಮಯ್ಯ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ. ನೀವು ಯಾರ ಪರ ಇದ್ದೀರಿ ಅಂತ ಸ್ಪಷ್ಟವಾಗಿ ಹೇಳಿ ಎಂದು ಒತ್ತಾಯಿಸಿದರು.

ಲೋಕಾಯುಕ್ತ ಶಕ್ತಿಗೊಳಿಸಿ: ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ನಿಷ್ಕ್ರಿಯಗೊಳಿಸಿದ ಲೋಕಾಯುಕ್ತ ಸಂಸ್ಥೆ ಹಾಗೂ ಯಶಸ್ವಿನಿ ರೈತ ಆರೋಗ್ಯ ವಿಮೆಯನ್ನು ಮತ್ತೆ ಸದೃಢಗೊಳಿಸಿ ಎಂದು ವಿಶ್ವನಾಥ್‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದರು.

ನಿಮ್ಮಪ್ಪ ಅಧಿಕಾರದಲ್ಲಿದ್ದಾಗ ರೂಪುಗೊಂಡ ಸಂಸ್ಥೆ ಲೋಕಾಯುಕ್ತ. ಈ ಸಂಸ್ಥೆಗೆ ಹಿಂದಿನ ಅಧಿಕಾರವನ್ನೇ ನೀಡಿ. ಭ್ರಷ್ಟರಿಗೆ ಕೊಂಚವಾದರೂ ಭಯವಿರಲಿ ಎಂದರು.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ