CrimeNEWSರಾಜಕೀಯ

2.84 ಕೋಟಿ ರೂ. ವಂಚನೆ: ಕಟ್ಟಾ ಸುಬ್ರಹ್ಮಣ್ಯ ನಾಯ್ಡು ವಿರುದ್ಧ ಎಫ್ಐಆರ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಿವೇಶನ ಹಾಗೂ ಫ್ಲ್ಯಾ ಟ್ ಖರೀದಿ ವಿಚಾರವಾಗಿ 2.84 ಕೋಟಿ ರೂ. ವ್ಯವಹಾರ ನಡೆಸಿ ವಂಚಿಸಿರುವ ಆರೋಪದಡಿ ಬಿಜೆಪಿ ಮುಖಂಡ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಇಂಡ್ ಸಿಂಗ್ ಡೆವಲಪರ್ಸ್ ಕಂಪನಿ ನಿರ್ದೇಶಕ ಎಂ. ಕೃಷ್ಣ ಎಂಬುವರ ದಾಖಲಿಸಿದ್ದ ಖಾಸಗಿ ದೂರಿನ ಮೇರೆಗೆ ವಿಚಾರಣೆ ನಡೆಸಿದ್ದ 4ನೇ ಎಸಿಎಂಎಂ ನ್ಯಾಯಾಲಯ, ಆರೋಪಿ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುವಂತೆ ಸೂಚಿಸಿತ್ತು.

ಅದರನ್ವಯ ಕೃಷ್ಣ ಅವರಿಂದ ದೂರು ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ತನಿಖೆಮುಂದುವರಿದಿದ್ದು, ಆರೋಪಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಹಾಗೂ ಎಂ. ಕೃಷ್ಣ, ಹಲವು ವರ್ಷಗಳಿಂದ ಪರಿಚಿತರು. ಅವರ ನಡುವೆ ಹಣಕಾಸಿನ ವ್ಯವಹಾರ ಇತ್ತು . ನಿವೇಶನ ಹಾಗೂ ಫ್ಲ್ಯಾಟ್‌ಗಳನ್ನು ಖರೀದಿಮಾಡುವ ಸಲುವಾಗಿ ಆರೋಪಿ, ಕೃಷ್ಣ ಅವರಿಂದ ಹಂತಹಂತವಾಗಿ 2.84 ಕೋಟಿ ರೂ. ಪಡೆದಿದ್ದರು. ಕೆಲ ದಿನ ಬಿಟ್ಟು ದುಪ್ಪಟ್ಟು ಲಾಭ ನೀಡುವುದಾಗಿಯೂ ಭರವಸೆ ನೀಡಿದ್ದರು.

ಹಲವು ದಿನ ಕಳೆದರೂ ಆರೋಪಿ ಹಣ ವಾಪಸ್‌ ಕೊಟ್ಟಿರಲಿಲ್ಲ . ಈ ಬಗ್ಗೆ ಕೃಷ್ಣ ವಿಚಾರಿಸಿದಾಗ 2 ಲಕ್ಷರೂ.ಗಳನ್ನು ಮಾತ್ರ 2018ರಲ್ಲಿ ಹಿಂದಿರುಗಿಸಿದ್ದರು. ಬಾಕಿ ಹಣ ನೀಡುವಂತೆ ಕೃಷ್ಣ ಒತ್ತಾಯಿಸಿದ್ದರು. ಹಣ ನೀಡಲು ಸುಬ್ರಹ್ಮಣ್ಯ ಹಿಂದೇಟು ಹಾಕಿದ್ದರು ಎಂದು ದೂರಿನಲ್ಲಿದೆ ಕೊಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಮ್ಮ ಮೇಲಿನ ಆರೋಪಕ್ಕೆ ಪ್ರತಿಕ್ರಿಯಿಸಿ ‘ಫೇಸ್ಬುಕ್’ನಲ್ಲಿ ಪೋಸ್ಟ್ ಪ್ರಕಟಿಸಿರುವ ಕಟ್ಟಾ ಸುಬ್ರಮಹ್ಮಣ್ಯ ನಾಯ್ಡು , ರಾಜಕೀಯ ದುರುದ್ದೇ ಶದಿಂದ ನನ್ನ ಮೇಲೆ ಸುಳ್ಳು ಆರೋಪ ಹೊರಿಸಲಾಗುತ್ತಿದೆ. ನನಗೆ ನ್ಯಾಯಾಲಯದಲ್ಲಿ ನಂಬಿಕೆಯಿದ್ದು , ಕಾನೂನು ಹೋರಾಟ ನಡೆಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ