NEWSನಮ್ಮರಾಜ್ಯಸಂಸ್ಕೃತಿ

‘ಅರಮನೆ’ಯೊಳಗಿನ ಜಂಬೂಸವಾರಿಗೆ ಕ್ಷಣಗಣನೆ, 2ನೇ ಬಾರಿಗೆ ಅಂಬಾರಿ ಹೊತ್ತು ಸಾಗಲಿರುವ ಅಭಿಮನ್ಯು

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ವಿವಿಧೆಡೆಯಿಂದ ಪ್ರವಾಸಿಗರು ದಾವಿಸುತ್ತಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಈ ನಡುವೆ ಅರಮನೆಗೆ ಪ್ರವೇಶ ಪಡೆಯಬೇಕು ಎಂದರೆ ಕೋವಿಡ್‌ ಪರೀಕ್ಷೆ ಕಡ್ಡಾಯವಾಗಿದೆ. ಅದೇನೆ ಇರಲಿ ಕಳೆದ 8ದಿನದಿಂದ ವಿವಿಧ ಕಾರ್ಯಕ್ರಮಗಳೊಂದಿಗೆ ಮನರಂಜಿಸುತ್ತಿದ್ದ ಸಾಂಸ್ಕೃತಿ ಕಾರ್ಯಕ್ರಮಗಳಿಗೆ ತೆರೆದಿಬಿದೆ. ಇನ್ನು ದೀಪಾಲಂಕಾರದ ವೈಭವದಲ್ಲಿ ಝಗಮಗಿಸುತ್ತಿರುವ ಸಾಂಸ್ಕೃತಿಕ ನಗರಿಯತ್ತ ಎಲ್ಲರ ಚಿತ್ತ ನೆಟ್ಟಿದೆ.

ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ದಸರಾ ಮಹೋತ್ಸವದ ಕೊನೆಯ ದಿನವಾದ ಶುಕ್ರವಾರ (ಅ.15) ಅರಮನೆ ಆವರಣಕ್ಕೆ ಸೀಮಿತವಾಗಿ ವಿಜಯದಶಮಿ ಮೆರವಣಿಗೆ ನಡೆಯಲಿದೆ.

ಕೋವಿಡ್–19 ಕಾರಣ ಸತತ ಎರಡನೇ ವರ್ಷವೂ ಜಂಬೂಸವಾರಿಯನ್ನು ನೇರವಾಗಿ ಕಣ್ತುಂ ಬಿಕೊಳ್ಳಲು ಜನಸಾಮಾನ್ಯರಿಗೆ ಅವಕಾಶವಿಲ್ಲ. ಆವರಣದಲ್ಲಿ 500 ಜನರನ್ನು ಸೇರಿಸಲು ಮಾತ್ರ ಸರ್ಕಾರ ಅನುಮತಿ ನೀಡಿದ್ದು , ಸಾಮಾಜಿಕ ಜಾಲತಾಣದಲ್ಲಿ ನೇರ ಪ್ರಸಾರಮಾಡುತ್ತಿದೆ.

ಅಂದು ಸಂಜೆ 4.36ಕ್ಕೆ ಅರಮನೆಯ ಬಲರಾಮ ದ್ವಾರದಲ್ಲಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸಲಿದ್ದಾರೆ. ಸಂಜೆ 5ಕ್ಕೆ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.

ಅಂಬಾರಿಯಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ನಾಡದೇವತೆ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ. ಅದಕ್ಕೂ ಮುನ್ನ ಉತ್ಸವಮೂರ್ತಿಯನ್ನು ಚಾಮುಂಡಿ ಬೆಟ್ಟದಿಂದ ರಥದಲ್ಲಿ ಮೆರವಣಿಗೆಯಲ್ಲಿ ತರಲಾಗುತ್ತದೆ.

ಕಾಡಾನೆ ಹಾಗೂ ಹುಲಿ ಸೆರೆ ಕಾರ್ಯಾಚರಣೆಯ ಮುಂದಾಳು ಎನಿಸಿರುವ ಅಭಿಮನ್ಯು ಆನೆಯು ಸತತ ಎರಡನೇ ಬಾರಿ 750 ಕೆ.ಜಿಯ ಚಿನ್ನದ ಅಂಬಾರಿ ಹೊತ್ತು ಸಾಗಲಿದೆ. ಕೇವಲ 250ರಿಂದ 300 ಮೀಟರ್ ದೂರಕ್ಕೆ ಸೀಮಿತವಾಗಿ ಜಂಬೂಸವಾರಿ ನಡೆಯಲಿದೆ.

ಆರು ಆನೆಗಳು, ಆರು ಸ್ತಬ್ಧ ಚಿತ್ರ , 12 ಕಲಾ ತಂಡಗಳು, ಅಶ್ವಾ ರೋಹಿ ಪಡೆ ಪಾಲ್ಗೊಳ್ಳಲಿವೆ.

ಅರಮನೆಯಲ್ಲಿ ಆಯುಧಪೂಜೆ: ಆಯುಧಪೂಜೆ ಹಾಗೂ ವಿಜಯದಶಮಿ ಅಂಗವಾಗಿ ಅರಮನೆಯ ರಾಜವಂಶಸ್ಥರ ಖಾಸಗಿ ನಿವಾಸದಲ್ಲಿ ಗುರುವಾರ, ಶುಕ್ರವಾರ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.

ಪಟ್ಟದ ಕುದುರೆ, ಪಟ್ಟದ ಹಸು, ಪಟ್ಟದ ಆನೆ, ವಾಹನ ಹಾಗೂ ಆಯುಧಗಳಿಗೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ನೇತೃತ್ವ ದಲ್ಲಿ ಪೂಜೆ ಸಲ್ಲಿ ಸಲಾಗುತ್ತದೆ.

ಏಳು ದಿನಗಳಿಂದ ಅರಮನೆ, ರಸ್ತೆಗಳು, ವೃತ್ತಗಳು, ಪಾರಂಪರಿಕ ಕಟ್ಟಡಗಳು ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸುತ್ತಿದ್ದು, ಭಾರಿ ಸಂಖ್ಯೆಯಲ್ಲಿ ಜನ ಮಳೆ ಲೆಕ್ಕಿಸದೆ ಕುಟುಂಬ ಸಮೇತರಾಗಿ ಬಂದು ವೀಕ್ಷಿ ಸುತ್ತಿರುವುದು ಪ್ರವಾಸೋದ್ಯ ಮ ಚೇತರಿಕೆಗೆ ಪುಷ್ಟಿ ನೀಡಿದೆ.

ಆಯುಧಪೂಜೆ ಪ್ರಯುಕ್ತ ರಾಜವಂಶಸ್ಥರು ಧಾರ್ಮಿಕ ಪೂಜಾ ಕಾರ್ಯಕ್ರಮ ನಡೆಸುವುದರಿಂದ ಗುರುವಾರ (ಅ.14) ಬೆಳಗ್ಗೆ 10 ರಿಂದ ಮಧ್ಯಾ ಹ್ನ 2 ಗಂಟೆವರೆಗೆ ಅರಮನೆ ಪ್ರವೇಶಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಶುಕ್ರವಾರ (ಅ.15) ವಿಜಯದಶಮಿ ಕಾರಣ ಸಂಪೂರ್ಣ ದಿನ ಪ್ರವೇಶವಿರುವುದಿಲ್ಲ.

Leave a Reply

error: Content is protected !!
LATEST
ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ