NEWSದೇಶ-ವಿದೇಶ

ಚೀನಾವನ್ನು ಗಡಿಯಿಂದ ಯಾವಾಗ ದಬ್ಬುತ್ತೀರಿ: ಶಾಗೆ ಕಾಂಗ್ರೆಸ್ ಪ್ರಶ್ನೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಗಡಿ ಭಾಗಗಳಲ್ಲಿ ಭಾರತದಭೂಪ್ರದೇಶಗಳಿಂದ ಚೀನಾವನ್ನು ಯಾವಾಗ ಹೊರದಬ್ಬುತ್ತೀರಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕಾಂಗ್ರೆಸ್ ಪ್ರಶ್ನಿಸಿದೆ.

ದೇಶದ ಬಾಹ್ಯ ಮತ್ತು ಆಂತರಿಕ ಭದ್ರ ತೆಯ ವಿಚಾರದಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ. ಸುಮ್ಮನೇ ಎದೆತಟ್ಟಿಕೊಳ್ಳುವ ಅಮಿತ್ ಶಾ ಅವರು ದೇಶದ ಬದಲು ಬಾಹ್ಯ ಮತ್ತು ಆಂತರಿಕ ಭದ್ರತೆಯ ಬಗ್ಗೆ ಗಮನಹರಿಸಲಿ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲ ಹೇಳಿದ್ದಾರೆ.

ಐದು ವರ್ಷಗಳ ಹಿಂದೆ ಪಾಕಿಸ್ತಾನದ ವಿರುದ್ಧ ಸರ್ಜಿಕಲ್ ಸ್ಟ್ರೈ ಕ್ ಕೈಗೊಳ್ಳು ವಮೂಲಕ ತನ್ನ ಗಡಿಯಲ್ಲಿ ಯಾರೂ ಹಸ್ತಕ್ಷೇ ಪಮಾಡಲು ಸಾಧ್ಯವಿಲ್ಲ ಎಂದು ಜಗತ್ತಿಗೆ ಪ್ರ ಬಲವಾದ ಸಂದೇಶವನ್ನು ಭಾರತ ರವಾನಿಸಿದೆ ಎಂದು ಅಮಿತ್ ಶಾ ಗೋವಾದ ಪಣಜಿಯಲ್ಲಿ ಹೇಳಿದ್ದರು.

ಅಮಿತ್ ಶಾ ಅವರು ಮೊದಲು ಚೀನಾದ ಹೆಸರು ಉಚ್ಚರಿಸಲಿ. ಆ ದೇಶದ ಬಗ್ಗೆ ಮೋದಿ ಸರ್ಕಾರಕ್ಕೆ ಹೆದರಿಕೆ ಇದೆ. ಚೀನಾ ಹೆಸರೆತ್ತಿದ ಬಳಿಕ ಆ ದೇಶದಯೋಧರನ್ನು ನಮ್ಮ ಭೂ ಪ್ರದೇಶಗಳಿಂದ ಯಾವಾಗ ಹೊರಗೆ ಕಳುಹಿಸುತ್ತೀರಿ ಎಂಬುದನ್ನು ತಿಳಿಸಲಿ.

ಚೀನಾ ಸೇನೆಯುತನ್ನ ಲಜ್ಜೆ ಗೆಟ್ಟ ನಡೆಯಿಂದ ಆತಿಕ್ರಮಿಸಿಕೊಂಡಿರುವ ನಮ್ಮ 900 ಕಿಲೋಮೀಟರ್ಭೂಪ್ರದೇಶವನ್ನು ಮರಳಿ ಪಡೆಯಲು ಅವರು ಗಡುವು ವಿಧಿಸಿಕೊಳ್ಳಲಿ ಎಂದು ಸುರ್ಜೇವಾಲ ಹೇಳಿದ್ದಾರೆ.

Leave a Reply

error: Content is protected !!
LATEST
ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...