NEWSನಮ್ಮರಾಜ್ಯರಾಜಕೀಯ

ಎಲ್‌ಪಿಜಿ ಬೆಲೆ ಏರಿಕೆ ಖಂಡಿಸಿ, ಸರ್ಕಾರಗಳ ವಿರುದ್ಧ ಎಎಪಿ ಆಟೋ ಚಾಲಕರ ಘಟಕದಿಂದ ಬೃಹತ್‌ ಪ್ರತಿಭಟನೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ
  • ಉದ್ಯಮಿಗಳು ಕೊಡುವ ಹಣದ ಆಸೆಗಾಗಿ ಸಾಮಾನ್ಯ ಜನರ ಜೀವನವನ್ನು ಶೋಚನೀಯ ಸ್ಥಿತಿಗೆ ತಳ್ಳಲಾಗುತ್ತಿದೆ

  • ನರೇಂದ್ರ ಮೋದಿಯವರ ಕೇಂದ್ರ ಸರ್ಕಾರವು ದೇಶ ಕಂಡ ಅತ್ಯಂತ ಜನವಿರೋಧಿ ಸರ್ಕಾರವಾಗಿದೆ

ಬೆಂಗಳೂರು: ಆಟೋ ರಿಕ್ಷಾಗಳಿಗೆ ಬಳಸುವ ಎಲ್‌ಪಿಜಿ ಬೆಲೆಯು ಕಳೆದ ಒಂದು ವರ್ಷದಲ್ಲಿ ಎರಡು ಪಟ್ಟು ಏರಿಕೆಯಾಗಿರುವುದನ್ನು ಖಂಡಿಸಿ ಆಮ್‌ ಆದ್ಮಿ ಪಾರ್ಟಿಯ ಆಟೋ ಚಾಲಕರ ಘಟಕವು ಬೆಂಗಳೂರಿನ ಮೈಸೂರು ಬ್ಯಾಕ್‌ ವೃತ್ತದಲ್ಲಿ ಮಂಗಳವಾರ ಬೃಹತ್‌ ಪ್ರತಿಭಟನೆ ನಡೆಸಿತು.

ಪ್ರತಿಭಟನೆಯಲ್ಲಿ ಮಾತನಾಡಿದ ಆಮ್‌ ಆದ್ಮಿ ಪಾರ್ಟಿಯ ಆಟೋ ಘಟಕದ ರಾಜ್ಯಾಧ್ಯಕ್ಷ ಅಯೂಬ್‌ ಖಾನ್‌, “ಪದೇಪದೆ ಎಲ್‌ಪಿಜಿ ಬೆಲೆ ಏರಿಕೆ ಮಾಡುವ ಕೇಂದ್ರ ಸರ್ಕಾರವು ಆಟೋ ಚಾಲಕರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ವರ್ಷ ಇದೇ ಸಮಯದಲ್ಲಿ ಲೀಟರ್‌ಗೆ 38 ರೂಪಾಯಿಯಿದ್ದ ಎಲ್‌ಪಿಜಿ ಬೆಲೆ ಈಗ 66 ರೂಪಾಯಿ ತಲುಪಿದೆ. ಅಂದರೆ, ಕೇವಲ ಒಂದು ವರ್ಷದಲ್ಲಿ 28 ರೂಪಾಯಿ ಏರಿಕೆಯಾಗಿದೆ. ಕಳೆದ ವಾರ ಒಂದೇ ಸಲ 6 ರೂಪಾಯಿ ಹೆಚ್ಚಿಸಲಾಗಿದೆ ಇದು ಖಂಡನೀಯ ಎಂದರು.

ಪ್ರಯಾಣಿಕರು ನೀಡುವ ಹಣವು ಎಲ್‌ಪಿಜಿಗೇ ಖರ್ಚಾಗುತ್ತಿದ್ದು, ಆದಾಯವಿಲ್ಲದೇ ಚಾಲಕರ ಬದುಕು ದುಸ್ತರವಾಗಿದೆ. ಆಟೋ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗುತ್ತಿರುವ ಸಂದರ್ಭದಲ್ಲಿ ಇಂಧನ ಬೆಲೆ ಏರಿಕೆಯು ಗಾಯದ ಮೇಲೆ ಬರೆ ಎಳೆದಂತಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಎಲ್‌ಪಿಜಿ ಪೂರೈಸುವ ಕಂಪನಿಗಳ ಉದ್ಯಮಿಗಳಿಗೆ ಲಾಭ ಮಾಡಿಕೊಡುವ ಉದ್ದೇಶದಿಂದ ಬೆಲೆ ಏರಿಕೆ ಮಾಡಲಾಗುತ್ತಿದೆ. ಈ ಸರ್ಕಾರಕ್ಕೆ ಆಟೋ ಚಾಲಕರು ಹಾಗೂ ಪ್ರಯಾಣಿಕರ ಹಿತ ಬೇಕಾಗಿಲ್ಲ. ಉದ್ಯಮಿಗಳು ಕೊಡುವ ಹಣದ ಆಸೆಗಾಗಿ ಸಾಮಾನ್ಯ ಜನರ ಜೀವನವನ್ನು ಶೋಚನೀಯ ಸ್ಥಿತಿಗೆ ತಳ್ಳಲಾಗುತ್ತಿದೆ. ಉಳ್ಳವರ ಪರವಾಗಿರುವ ಈ ಸರ್ಕಾರವನ್ನು ಆಡಳಿತದಿಂದ ಕಿತ್ತೊಗೆಯುವವರೆಗೂ ಜನಸಾಮಾನ್ಯರಿಗೆ ನೆಮ್ಮದಿ ಎಂಬುದಿಲ್ಲ ಎಂದು ಅಯೂಬ್‌ ಖಾನ್‌ ಕಿಡಿ ಕಾರಿದರು.

ಬೆಂಗಳೂರು ನಗರ ಎಎಪಿ ಆಟೋ ಚಾಲಕರ ಘಟಕದ ಅಧ್ಯಕ್ಷ ವೆಂಕಟೇಗೌಡ ಮಾತನಾಡಿ, ಎಲ್‌ಪಿಜಿ ಬೆಲೆಯನ್ನು ಮನಸೋ ಇಚ್ಛೆ ಹೆಚ್ಚಿಸುತ್ತಿರುವ ನರೇಂದ್ರ ಮೋದಿಯವರ ಕೇಂದ್ರ ಸರ್ಕಾರವು ದೇಶ ಕಂಡ ಅತ್ಯಂತ ಜನವಿರೋಧಿ ಸರ್ಕಾರವಾಗಿದೆ. ಸರ್ಕಾರಕ್ಕೆ ಆಟೋ ಚಾಲಕರ ಬಗ್ಗೆ ಕಾಳಜಿಯಿದ್ದರೆ ಈಗಲಾದರೂ ಬೆಲೆ ಇಳಿಕೆ ಮಾಡಲಿ ಎಂದು ತಾಕೀತು ಮಾಡಿದರು.

ಬೆಂಗಳೂರು ನಗರದ ಎಎಪಿ ಆಟೋ ಚಾಲಕರ ಘಟಕದ ಪ್ರಧಾನ ಕಾರ್ಯದರ್ಶಿ ಉಸ್ಮಾನ್‌, ಕರ್ನಾಟಕ ಪ್ರಜಾಧಿಕಾರ ಹೋರಾಟ ಸಮಿತಿಯ ಕಾರ್ಯದರ್ಶಿ ಜಗನ್‌, ಎಎಪಿ ಮುಖಂಡರಾದ ಲಕ್ಷ್ಮೀಕಾಂತ ರಾವ್, ಅತೀಕ್ ಅಹ್ಮದ್, ಅನಂತರಾಮು, ರಾಮಕೃಷ್ಣ, ಹೇಮಂತ್ ಹಾಗೂ ಅನೇಕ ಆಟೋ ಚಾಲಕರು ಈ ಬೃಹತ್‌ ಪ್ರತಿಭಟನೆಯಲ್ಲಿ ಭಾಗವಹಿಸಿ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ