Breaking NewsNEWSನಮ್ಮರಾಜ್ಯ

ಸಾರಿಗೆ ನೌಕರರ ಸಮಸ್ಯೆ ನಿವಾರಿಸದಿದ್ದರೆ ನಾನು ಬೀದಿಗಿಳಿಯುವೆ : ಸಚಿವ ಶ್ರೀರಾಮುಲುಗೆ ಯತ್ನಾಳ್‌ ಎಚ್ಚರಿಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರಿಗೆ ಸಚಿವ ಬಿ.ಶ್ರೀರಾಮುಲು ಅವರು ನಗರದ ತಮ್ಮ ಶಾಸಕರೊಬ್ಬರ ಮನೆಗೆ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಎಂಡಿಗಳನ್ನು ಕರೆಸಿಕೊಂಡು ಮುಷ್ಕರದ ಸಮಯದಲ್ಲಿ ಮಾಡಿರುವ ವಜಾ, ವರ್ಗಾವಣೆ ಸೇರಿದಂತೆ ಎಲ್ಲ ಪ್ರಕರಣಗಳನ್ನು ವಾಪಸ್‌ ಪಡೆದುಕೊಳ್ಳಬೇಕು ಎಂದು ತಾಕೀತು ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಅವರ ಬೆಂಗಳೂರಿನ ಶಿವಾಜಿನಗರದಲ್ಲಿರುವ ಮನೆಗೆ ಇಂದು (ನ.12) ಮಧ್ಯಾಹ್ನ ಸಚಿವ ಶ್ರೀರಾಮುಲು, ಕೆಎಸ್‌ಆರ್‌ಟಿಸಿ ಎಂಡಿ ಶಿವಯೋಗಿ ಕಳಸದ ಮತ್ತು ಬಿಎಂಟಿಸಿ ಎಂಡಿ ಅನ್ಬುಕುಮಾರ್‌ ಆಗಮಿಸಿ ನೌಕರರಿಗೆ ಆಗುತ್ತಿರುವ ಸಮಸ್ಯೆ ಬಗ್ಗೆ ಸುಮಾರು 2ಗಂಟೆಗಳ ಕಾಲ ಗೌಪ್ಯವಾಗಿ ಚರ್ಚೆ ನಡೆಸಿದ್ದಾರೆ.

ಈ ವೇಳೆ ಮುಷ್ಕರದಲ್ಲಿ ಆಗಿರುವ ಸಮಸ್ಯೆಯನ್ನು ಶೀಘ್ರ ಸರಿಪಡಿಸುವಂತೆ ಯತ್ನಾಳ್‌ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅದಕ್ಕೆ ಅಧಿಕಾರಿಗಳು ಕೊಟ್ಟ ಉತ್ತರದಿಂದ ಬೇಸರಗೊಂಡ ಯತ್ನಾಳ್‌ ಅವರು, ಸಚಿವ ಶ್ರೀರಾಮುಲು ಅವರ ಕಡೆಗೆ ನೋಡುತ್ತ ನೀವು ಅಧಿಕಾರಿಗಳು ಹೇಳಿದಂತೆ ಕೇಳಿಕೊಂಡು ಕುಳಿತುಕೊಂಡರೆ ನಾನು ನೌಕರರೊಂದಿಗೆ ಬೀದಿಗಿಳಿದು ಮುಷ್ಕರ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಮಾತನ್ನು ಕೇಳಿ ತಬ್ಬಿಬ್ಬಾದಂತೆ ಕಂಡ ಸಚಿವರು ಇಲ್ಲ ಬೇಡಬೇಡ ನೀವು ನಮ್ಮ ಪಕ್ಷದ ಶಾಸಕರಾಗಿ ಈ ಮಾತನ್ನು ಹೇಳಬೇಡಿ ನಾನು ಇನ್ನು 10 ದಿನದೊಳಗೆ ವಜಾಗೊಂಡಿರುವ ಎಲ್ಲ ನೌಕರರನ್ನು ಒಂದೇ ಬಾರಿಗೆ ಮರು ನಿಯೋಜನೆ ಮಾಡಿಸುತ್ತೇನೆ ಈ ಬಗ್ಗೆ ನೀವು ಚಿಂತೆ ಮಾಡಬೇಡಿ ಎಂದು ಅಭಯ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಅಧಿಕಾರಿಗಳು ಅಮಾಯಕ ನೌಕರರಿಗೆ ವಜಾ, ವರ್ಗಾವಣೆ, ಅಮಾನತು ಶಿಕ್ಷೆ ಜತೆಗೆ ಪೊಲೀಸ್‌ ಪ್ರಕರಣಗಳನ್ನು ದಾಖಲಿಸಿ ಕಿರುಕುಳ ನೀಡುತ್ತಿದ್ದಾರೆ. ಹೀಗಾಗಿ ಆ ಎಲ್ಲ ಪ್ರಕರಣಗಳನ್ನು ಬೆಣ್ಣೆಯಲ್ಲಿ ಕೂದಲು ತೆಗೆದಂತೆ ವಾಪಸ್‌ ಪಡೆಯುವ ಮೂಲಕ ನೌಕರರಿಗೆ ಆಗುತ್ತಿರುವ ಸಮಸ್ಯೆಯನ್ನು ನಿವಾರಿಸಬೇಕು ಎಂದು ತಿಳಿಸಿದರು.

ಅಲ್ಲದೆ ನನಗೆ ಮೈಸೂರು, ಚಾಮರಾಜನಗರ, ಬಳ್ಳಾರಿ, ಮಂಗಳೂರು ಸೇರಿದಂತೆ ರಾಜ್ಯದ ಎಲ್ಲ ಕಡೆಗಳಿಂದಲೂ ನೌಕರರು ದೂರು ನೀಡುತ್ತಿದ್ದಾರೆ. ನಾವು ಏನು ತಪ್ಪು ಮಾಡದಿದ್ದರೂ ವಜಾ, ವರ್ಗಾವಣೆ ಶಿಕ್ಷೆ ಸೇರಿ ಹಲವು ರೀತಿ ಕಿರುಕುಳ ನೀಡುತ್ತಿದ್ದಾರೆ ಎಂದು. ಈ ಸಮಸ್ಯೆಗಳು ಮುಂದೆ ಸಾರಿಗೆ ನೌಕರರ ವಲಯದಿಂದ ಕೇಳಿ ಬರದಂತೆ ನೋಡಿಕೋಳ್ಳಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಸಚಿವ ಶ್ರೀರಾಮುಲು ಅವರು ನೌಕರರ ಬಗ್ಗೆ ಈ ವೇಳೆ ಕಾಳಜಿ ವ್ಯಕ್ತಪಡಿಸಿದ್ದು, ಅವರಿಗೆ ಯಾವುದೇ ತೊಂದರೆ ಆಗದಂತೆ ನಾನು ಇಲಾಖೆಯ ಸಚಿವನಾಗಿ ಇರುವವರೆಗೂ ನೋಡಿಕೊಳ್ಳುತ್ತೇನೆ ಎಂದು ಯತ್ನಾಳ್‌ ಅವರಿಗೆ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಕೆಲ ಅಧಿಕಾರಿಗಳು ನಿಮ್ಮ ದಾರಿ ತಪ್ಪಿಸುತ್ತಿದ್ದಾರೆ ಈ ಬಗ್ಗೆ ನೀವು ಎಚ್ಚರಿಕೆ ಹೆಜ್ಜೆ ಇಡಬೇಕು ಎಂದು ಯತ್ನಾಳ್‌ ಅವರು ಕಿವಿ ಮಾತು ಹೇಳಿದರು ಎನ್ನಲಾಗಿದೆ. ಒಟ್ಟಾರೆ ಶ್ರೀರಾಮುಲು ಅವರು ವಜಾಗೊಂಡಿರುವ ನೌಕರರನ್ನು ಈ ನವೆಂಬರ್‌ ತಿಂಗಳು ಕಳೆಯುವುದರೊಳಗಾಗಿ ಮರು ನಿಯೋಜನೆ ಮಾಡಿಕೊಳ್ಳುತ್ತಾರೆ ಎಂಬುವುದು ಬಹುತೇಕ ಸ್ಪಷ್ಟವಾಗಿದೆ.

2 Comments

  • 2020 ra agreements.. Agilla.. 4tingala ninda 1/2 salary kodtidare..5yesrs ayitu payment jasati agilla.. Yella depot gallinda earning target kina jastine bartide..adke..KSRTC nalli 6th pay jaari maadi..plz

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ