NEWSಕ್ರೀಡೆದೇಶ-ವಿದೇಶ

ಕೇನ್ ವಿಲಿಯಮ್ಸನ್ ಭಾರತ ವಿರುದ್ಧದ ಟ್ವೆಂಟಿ 20 ಅಂತಾರಾಷ್ಟ್ರೀಯ ಸರಣಿಯಿಂದ ದೂರ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವೆಲ್ಲಿಂಗ್ಟನ್: ಕಾನ್ಪುರದಲ್ಲಿ ನವೆಂಬರ್ 25 ರಂದು ಆರಂಭವಾಗುವ ಮುಂದಿನ ಟೆಸ್ಟ್ ಸರಣಿಯ ಮೇಲೆ ಕೇಂದ್ರೀಕರಿಸಲು ನ್ಯೂಜಿಲ್ಯಾಂಡ್ ನಾಯಕ ಕೇನ್ ವಿಲಿಯಮ್ಸನ್ ಭಾರತ ವಿರುದ್ಧದ ಟ್ವೆಂಟಿ 20 ಅಂತಾರಾಷ್ಟ್ರೀಯ ಸರಣಿಯಿಂದ ದೂರ ಉಳಿಯಲಿದ್ದಾರೆ.

ವಿಲಿಯಮ್ಸನ್ ಅನುಪಸ್ಥಿತಿಯಲ್ಲಿ ನವೆಂಬರ್ 17 ರಂದು ನಡೆಯಲಿರುವ ಆರಂಭಿಕ ಟ್ವೆಂಟಿ-20 ಪಂದ್ಯಕ್ಕೆ ವೇಗದ ಬೌಲರ್ ಟಿಮ್ ಸೌಥಿ ಅವರನ್ನು ನಾಯಕನಾಗಿ ನೇಮಿಸುವುದರೊಂದಿಗೆ ನ್ಯೂಝಿಲ್ಯಾಂಡ್ ಕ್ರಿಕೆಟ್ ಮಂಡಳಿಯು ಸೋಮವಾರ ಭಾರತ ವಿರುದ್ಧದ ಸರಣಿಗಾಗಿ ಟಿ20 ತಂಡವನ್ನು ಪ್ರಕಟಿಸಿತು.

“ನವೆಂಬರ್ 25 ರಂದು ಕಾನ್ಪುರದಲ್ಲಿ ಆರಂಭವಾಗುವ ಟೆಸ್ಟ್ ಸರಣಿಗೆ ತಯಾರಿ ನಡೆಸುತ್ತಿರುವ ಕಾರಣ ಬ್ಲ್ಯಾಕ್‌ಕ್ಯಾಪ್ಸ್ ನಾಯಕ ಕೇನ್ ವಿಲಿಯಮ್ಸನ್ ಈ ವಾರದ ಭಾರತ ವಿರುದ್ಧದ ಮೂರು ಪಂದ್ಯಗಳ ಟಿ 20 ಸರಣಿಯನ್ನು ಕಳೆದುಕೊಳ್ಳಲಿದ್ದಾರೆ” ಎಂದು ನ್ಯೂಝಿಲ್ಯಾಂಡ್ ಕ್ರಿಕೆಟ್ ಹೇಳಿಕೆಯಲ್ಲಿ ತಿಳಿಸಿದೆ.

“ಬುಧವಾರ ಸಂಜೆ ಟಿ 20 ಸರಣಿಯ ಆರಂಭಿಕ ಪಂದ್ಯದೊಂದಿಗೆ, ಶುಕ್ರವಾರ ಹಾಗೂ ಭಾನುವಾರ ರಾತ್ರಿ ಪಂದ್ಯಗಳು ನಡೆಯಲಿವೆ. ವಿಲಿಯಮ್ಸನ್ ಅವರು ಈಗಾಗಲೇ ಜೈಪುರದಲ್ಲಿ ತರಬೇತಿ ಪಡೆಯುತ್ತಿರುವ ಟೆಸ್ಟ್ ಸ್ಪೆಷಲಿಸ್ಟ್ ಗ್ರೂಪ್‌ಗೆ ಸೇರಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ