NEWSನಮ್ಮರಾಜ್ಯರಾಜಕೀಯ

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌ನಿಂದ 20 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಕುಟುಂಬಕ್ಕೂ ಹೊಸಬರಿಗೂ ಮಣೆ

ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್‌
Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿಧಾನ ಪರಿಷತ್ನ ಸ್ಥ ಳೀಯ ಸಂಸ್ಥೆ ಗಳ 20 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಪ್ರಕಟಿಸಿದ್ದು, ಹಾಲಿ ಸದಸ್ಯ ರಲ್ಲಿ ನಾಲ್ವರಿಗೆ ಮಾತ್ರ ಟಿಕೆಟ್ ನೀಡಲಾಗಿದೆ. ಅದರ ಜತೆಯಲ್ಲೇ ಟಿಕೆಟ್ ಹಂಚಿಕೆಯಲ್ಲಿ ಕುಟುಂಬ ರಾಜಕಾರಣದ ನಂಟು ಮುಂದುವರಿದಿದೆ.

ಪರಿಷತ್ನ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ ಅವರ ಹೆಸರು ಪಟ್ಟಿ ಯಲ್ಲಿಲ್ಲ . ವಿಜಯಪುರ– ಬಾಗಲಕೋಟೆ ದ್ವಿ ಸದಸ್ಯ ಕ್ಷೇ ತ್ರ ಕ್ಕೆ ಒಂದು ಅಭ್ಯ ರ್ಥಿಯನ್ನು ಮಾತ್ರ ಪ್ರ ಕಟಿಸಿದ್ದು , ಹಾಲಿ ಸದಸ್ಯ ಸುನೀಲ ಗೌಡ ಪಾಟೀಲರಿಗೆ ಮತ್ತೆ ಅವಕಾಶ ನೀಡಲಾಗಿದೆ. ಇವರು ವಿಜಯಪುರ ಶಾಸಕ ಎಂ.ಬಿ. ಪಾಟೀಲರ ತಮ್ಮ.

25 ಕ್ಷೇ ತ್ರ ಗಳಿಗೆ ಚುನಾವಣೆ ನಡೆಯುತ್ತಿದೆ. ಎಂಟು ಕ್ಷೇ ತ್ರ ಗಳಿಗೆ ಕಾಂಗ್ರೆಸ್ ಇನ್ನೂ ಅಭ್ಯ ರ್ಥಿಗಳನ್ನು ಪ್ರ ಕಟಿಸಿಲ್ಲ. ವಿಧಾನ ಪರಿಷತ್ನ ಹಾಲಿ ಸದಸ್ಯ ರಾದ ಎಸ್. ರವಿ, ಬಳ್ಳಾ ರಿಯ ಕೆ.ಸಿ. ಕೊಂಡಯ್ಯ ಮತ್ತು ಶಿವಮೊಗ್ಗದ ಆರ್. ಪ್ರಸನ್ನ ಕುಮಾರ್ ಅವರಿಗೆ ಮತ್ತೆ ಸ್ಪರ್ಧೆಗೆ ಅವಕಾಶ ನೀಡಲಾಗಿದೆ.

ಎಸ್.ರವಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸೋದರ ಸಂಬಂಧಿ. ಮತ್ತೆ ಸ್ಪರ್ಧಿಸಲು ಪ್ರಬಲ ಆಕಾಂಕ್ಷಿಯಾಗಿದ್ದ ಮೈಸೂರಿನ ಆರ್. ಧರ್ಮಸೇನ ಅವರಿಗೆ ಟಿಕೆಟ್  ಕೈ ತಪ್ಪಿದೆ. ಜಿಲ್ಲಾ ಆರೋಗ್ಯಾ ಧಿಕಾರಿಯಾಗಿ ನಿವೃತ್ತರಾಗಿರುವ ಡಾ.ಡಿ. ತಿಮ್ಮಯ್ಯ ಅವರಿಗೆ ಅವಕಾಶ ನೀಡಲಾಗಿದೆ.

ರಾಯಚೂರು ಕ್ಷೇ ತ್ರ ದಲ್ಲಿ ಕುಷ್ಟ ಗಿ ವಿಧಾನಸಭಾ ಕ್ಷೇ ತ್ರ ದ ಶಾಸಕ ಅಮರೇಗೌಡ ಬಯ್ಯಾ ಪುರ ಅವರ ಸಹೋದರನ ಮಗ ಶರಣ ಗೌಡ ಅನ್ನ ದಾನ ಗೌಡ ಪಾಟೀಲ, ಬೆಳಗಾವಿ ಕ್ಷೇ ತ್ರ ದಲ್ಲಿ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇ ತ್ರ ದ ಶಾಸಕಿ ಲಕ್ಷ್ಮಿ ಹೆಬ್ಬಾ ಳಕರ ಅವರ ತಮ್ಮ ಚನ್ನ ರಾಜ ಹಟ್ಟಿ ಹೊಳಿಗೆ ಟಿಕೆಟ್ ಘೋಷಿಸಲಾಗಿದೆ.

ಹುಬ್ಬಳ್ಳಿ –ಧಾರವಾಡ–ಗದಗ–ಹಾವೇರಿ ಕ್ಷೇ ತ್ರ ದಲ್ಲಿ ಕೆಪಿಸಿಸಿ ಕಾರ್ಯಾಧ್ಯ ಕ್ಷ ಸಲೀಂ ಅಹ್ಮದ್ ಅವರನ್ನೇ ಕಣಕ್ಕಿ ಳಿಸಲಾಗುತ್ತಿದೆ. ಚಿಕ್ಕಮಗಳೂರಿನಲ್ಲಿ ಒಮ್ಮೆ ಪರಿಷತ್ ಸದಸ್ಯ ರಾಗಿದ್ದು , ಹಿಂದಿನ ಬಾರಿಸೋತಿದ್ದ ಗಾಯತ್ರಿ ಶಾಂತೇಗೌಡ ಅವರಿಗೆ ಮತ್ತೆ ಸ್ಪ ರ್ಧೆಗೆ ಅವಕಾಶ ನೀಡಲಾಗಿದೆ.

ತುಮಕೂರು ಕ್ಷೇತ್ರದಲ್ಲಿ ಮಧುಗಿರಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಎನ್. ರಾಜಣ್ಣ ಅವರ ಮಗ ಆರ್. ರಾಜೇಂದ್ರ ಕಣಕ್ಕಿಳಿಯಲಿದ್ದಾರೆ. ಹಿಂದಿನ ಚುನಾವಣೆಯಲ್ಲಿ ಇವರು ಸೋತಿದ್ದರು.

ಕಾಂಗ್ರೆಸ್‌ನಲ್ಲಿ ಶಾಸಕರಾಗಿದ್ದು , ನಂತರ ಬಿಜೆಪಿ ಸೇರಿರುವ ಹಾಸನದ ಎ. ಮಂಜು ಅವರ ಮಗ ಡಾ. ಮಂಥರ್ ಗೌಡ ಅವರಿಗೆ ಕೊಡಗು ಕ್ಷೇತ್ರದ ಟಿಕೆಟ್‌ ದೊರಕಿದೆ. ಸಚಿವ ಎಸ್.ಟಿ. ಸೋಮಶೇಖರ್ ವಿಶೇಷಾಧಿಕಾರಿಯಾಗಿದ್ದ ಎಂ.ಜಿ.ಗೂಳಿಗೌಡ (ದಿನೇಶ್ ಗೂಳಿಗೌಡ) ಅವರನ್ನು ಮಂಡ್ಯದಲ್ಲಿ ಅಭ್ಯ ರ್ಥಿಯಾಗಿ ಕಣಕ್ಕಿಳಿಸಲಾಗುತ್ತಿದೆ.

ಪಕ್ಷಕ್ಕೆ ದುಡಿದವರಿಗೆ ಅವಕಾಶ: ಅಭ್ಯ ರ್ಥಿಗಳ ಆಯ್ಕೆಯಲ್ಲಿ ವೈಯಕ್ತಿಕ ತೀರ್ಮಾನವಿಲ್ಲ. ಪಕ್ಷದ ವರಿಷ್ಠ ರು ಮತ್ತು ರಾಜ್ಯ ಮುಖಂಡರು ಸಮಾಲೋಚಿಸಿ, ಪಕ್ಷಕ್ಕಾಗಿ ದುಡಿದವರಿಗೆ ಅವಕಾಶ ನೀಡಲಾಗಿದೆ ಎಂದು ಕೆಪಿಸಿಸಿ ಅಧ್ಯ ಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ಅಭ್ಯರ್ಥಿಗಳ ಪಟ್ಟಿ ಪ್ರಕಟವಾದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಎಸ್.ಆರ್. ಪಾಟೀಲ ಅವರನ್ನು ಕಡೆಗಣಿಸಲಾಗಿದೆ ಎಂಬುದು ಸರಿಯಲ್ಲ. ಅವರನ್ನು ಕೈಬಿಡುವ ಪ್ರಶ್ನೆಯೇ ಇಲ್ಲ. ಬೇರೆ ಕಾರ್ಯಸೂಚಿ ಪಕ್ಷದ ಮುಂದೆ ಇದೆ ಎಂದರು.

ಸ್ಥಳೀಯ ಮುಖಂಡರ ವಿರೋಧದ ನಡುವೆಯೂ ಕೆ.ಸಿ. ಕೊಂಡಯ್ಯ ಅವರಿಗೆ ಟಿಕೆಟ್ ನೀಡಲಾಗಿದೆ ಎಂಬ ಆರೋಪವೂ ಆಧಾರರಹಿತ. ಕೆಲವು ಮುಖಂಡರು ಹಾಗೆ ಹೇಳಿರಬಹುದು. ಆದರೆ, ಎಲ್ಲ ಮುಖಂಡರ ಅಭಿಪ್ರಾಯ ಆಲಿಸಿ ತಿರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಕಳೆದ ಬಾರಿಗಿಂತ ಹೆಚ್ಚು ಸ್ಥಾನ ಗಳಿಸುವ ನಿರೀಕ್ಷೆ ಇದೆ. ಪಕ್ಷದ ಸ್ಥ ಳೀಯಮುಖಂಡರು ಮತ್ತು ಮತದಾರರ ಅಪೇಕ್ಷೆಯಂತೆ ಹೊಸಬರಿಗೆ ಸ್ಪರ್ಧೆಗೆ ಅವಕಾಶ ನೀಡಲಾಗಿದೆ ಎಂದರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ