NEWSಕೃಷಿನಮ್ಮರಾಜ್ಯ

ವಿದ್ಯುತ್ ಖಾಸಗೀಕರಣಕ್ಕೆ ಕಬ್ಬು ಬೆಳೆಗಾರರ ಸಂಘ ಖಂಡನೆ : ಅತ್ತಹಳ್ಳಿ ದೇವರಾಜ್

ವಿಜಯಪಥ ಸಮಗ್ರ ಸುದ್ದಿ

ತಿ.ನರಸೀಪುರ: ಕೇಂದ್ರ ಸರ್ಕಾರ ವಿದ್ಯುತ್ ಖಾಸಗೀಕರಣದ ಬಗ್ಗೆ ತೆಗೆದುಕೊಂಡಿರುವ ತೀರ್ಮಾನ ಗ್ರಾಮೀಣ ಬಡ ಜನರ ಹಾಗೂ ರೈತದ್ರೋಹಿ ತೀರ್ಮಾನ ವಾಗಲಿದೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್ ಖಂಡಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ವಿದ್ಯುತ್ ಉತ್ಪಾದನೆಯನ್ನು ಖಾಸಗಿ ಕಂಪನಿಗಳು ನಿರ್ವಹಣೆ ಮಾಡಿದರೆ ದೇಶದ ಗ್ರಾಮೀಣ ಬಡ ಜನರು ಕಗ್ಗತ್ತಲಿಗೆ ಸಿಲುಕಲಿದ್ದಾರೆ ಹಾಗೂ ರೈತರು ಕೃಷಿ ಚಟುವಟಿಕೆ ನಡೆಸಲು ಅಸಾಧ್ಯವಾಗಲಿದೆ, ಕೃಷಿ ಚಟುವಟಿಕೆ ಕುಂಠಿತವಾಗುತ್ತದೆ. ಉಚಿತ ವಿದ್ಯುತ್ ಬಳಕೆ ಮಾಡಿಯೂ ಲಾಭವಿಲ್ಲದೆ ರೈತರು ಕೃಷಿಯಿಂದ ದೂರವಾಗುತ್ತಿದ್ದಾರೆ ಎಂದು ಹೇಳಿದ್ದಾರೆ.

ಬಡ ಜನತೆಗೆ ಭಾಗ್ಯ ಜೊತಿ, ಕುಟೀರ ಜ್ಯೋತಿ ಇತ್ಯಾದಿ ವಿದ್ಯುತ್ ಸೌಲಭ್ಯ ಗಳಿಂದ ವಂಚಿತರಾಗುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಖಾಸಗೀಕರಣ ಮಾಡಿದರೆ ನಾವು ಫೋನ್ ಮತ್ತು ಟಿವಿ ಚಾನಲ್ ಗಳಿಗೆ ಕರೆನ್ಸಿ ಹಾಕಿಸುವ ರೀತಿಯಲ್ಲಿ ಪಂಪ್ ಸೆಟ್, ಗೃಹ ಬಳಕೆಗೆ ಮುಂಗಡ ಹಣ ನೀಡಿ ವಿದ್ಯುತ್ ಬಳಕೆ ಮಾಡಲು ಅಸಾಧ್ಯ. ಆದ್ದರಿಂದ ಸರ್ಕಾರ ವಿದ್ಯುತ್ ಖಾಸಗೀಕರಣ ನಿರ್ಧಾರವನ್ನು ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನು ಸರ್ಕಾರ ಖಾಸಗೀಕರಣದ ನಿರ್ಧಾರದಿಂದ ಹಿಂದೆ ಸರಿಯದಿದ್ದರೆ ಮುಂದಿನ ದಿನಗಳಲ್ಲಿ ವಿದ್ಯುತ್ ಬಳಕೆ ದಾರರು, ರೈತರು ಹಾಗೂ ರೈತಪರ ಸಂಘಟನೆಗಳಿಂದ ಉಗ್ರ ಪ್ರತಿಭಟನೆ ಎದುರಿಸ ಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

Leave a Reply

error: Content is protected !!
LATEST
ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ