NEWSದೇಶ-ವಿದೇಶಶಿಕ್ಷಣ-

ಗುಣಮಟ್ಟದ ಶಿಕ್ಷಣಕ್ಕೆ ಶ್ರಮಿಸಿರುವ ಡಿಸಿಎಂ ಸಿಸೋಡಿಯಾ ಭಾರತ ರತ್ನಕ್ಕೆ ಅರ್ಹರು : ಸಿಎಂ ಅರವಿಂದ್ ಕೇಜ್ರಿವಾಲ್

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ದೆಹಲಿಯ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ಶ್ರಮಿಸಿರುವ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಭಾರತ ರತ್ನ ನೀಡಬೇಕು, ಆದರೆ ರಾಜಕೀಯ ಉದ್ದೇಶದಿಂದ ಕೇಂದ್ರ ಸರ್ಕಾರವು ಬೇಟೆಯಾಡುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ಹೇಳಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ದೆಹಲಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಅಬಕಾರಿ ತನಿಖೆಯಲ್ಲಿ ಮನೀಶ್ ಸಿಸೋಡಿಯಾ ಅರೆಸ್ಟ್ ಆಗಬಹುದು. ಯಾರಿಗೆ ಗೊತ್ತು ನಾನು ಸಹ ಅರೆಸ್ಟ್ ಆಗಬಹುದು. ಇದೆಲ್ಲವೂ ಗುಜರಾತಿನ ಚುನಾವಣೆ ಗೆಲ್ಲಲು ಬಿಜೆಪಿ ಮಾಡುತ್ತಿರುವ ತಂತ್ರಗಳು ಎಂದು ಆರೋಪಿಸಿದರು.

ಸಿಸೋಡಿಯಾ ಗುಣಮಟ್ಟದ ಸರ್ಕಾರಿ ಶಾಲೆಗಳನ್ನು ರೂಪಿಸಿ ಪವಾಡ ಮೆರೆದಿದ್ದಾರೆ. ಅಂತಹ ವ್ಯಕ್ತಿಗೆ ಭಾರತ ರತ್ನ ಸಿಗಬೇಕು. ಇಡೀ ದೇಶದ ಶಿಕ್ಷಣ ವ್ಯವಸ್ಥೆಯನ್ನೇ ಅವರ ಕೈಗೆ ಕೊಡಬೇಕು. ಬದಲಿಗೆ ಅವರ ವಿರುದ್ಧ ಸಿಬಿಐ ದಾಳಿ ನಡೆದಿದೆ. ಇದು ಬಿಜೆಪಿ ಅವರಿಗೇ ನಾಚಿಕೆ ಆಗಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ದೆಹಲಿಯ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸಲು ಅವರು ಮಾಡಿದ ಎಲ್ಲ ಕೆಲಸಗಳಿಗಾಗಿ ಸಿಸೋಡಿಯಾ ಅವರು ಭಾರತ ರತ್ನಕ್ಕೆ ಅರ್ಹರಾಗಿದ್ದಾರೆ ಎಂದು ಹೇಳಿದರು. ಅಂತಹ ವ್ಯಕ್ತಿಗೆ ಭಾರತ ರತ್ನ ಸಿಗಬೇಕು, ಇಡೀ ದೇಶದ ಶಿಕ್ಷಣ ವ್ಯವಸ್ಥೆಯನ್ನು ಅವರ ಕೈಗೆ ಕೊಡಬೇಕು, ಬದಲಿಗೆ ಅವರ ವಿರುದ್ಧ ಸಿಬಿಐ ದಾಳಿ ನಡೆಸಿತು.

ಇತ್ತ ದೇಶದಲ್ಲಿ ಶಿಕ್ಷಣ ಕ್ರಾಂತಿಗೆ ಮುಂದಾಗುತ್ತಿರುವ ಸಿಸೋಡಿಯಾ ಅವರನ್ನು ಮೆಚ್ಚುವ ಬದಲು ಅವರನ್ನು ಗುರಿಯಾಗಿಸಲಾಗುತ್ತಿದೆ. ಶೀಘ್ರದಲ್ಲೇ ಸಿಸೋಡಿಯಾ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಕೇಜ್ರಿವಾಲ್ ಆತಂಕ ವ್ಯಕ್ತಪಡಿಸಿದರು.

ಗುಜರಾತ್‌ನಲ್ಲಿ ಕಳೆದ 27 ವರ್ಷಗಳ ಬಿಜೆಪಿ ಆಡಳಿತದ ದುರಹಂಕಾರದ ಭಾರವನ್ನು ಗುಜರಾತ್‌ನ ಜನರು ಅನುಭವಿಸುತ್ತಿದ್ದಾರೆ. ಗುಜರಾತ್‌ನಲ್ಲಿ ತಮ್ಮ ಆಮ್ ಆದ್ಮಿ ಪಕ್ಷ ಸರ್ಕಾರ ಅಧಿಕಾರಕ್ಕೆ ಬಂದರೆ ಅಲ್ಲಿನ ಜನತೆಗೆ ಗುಣಮಟ್ಟದ ಶಿಕ್ಷಣ ಮತ್ತು ಆರೋಗ್ಯ ರಕ್ಷಣೆ ನೀಡುವುದಾಗಿ ಭರವಸೆ ನೀಡಿದರು.

ಕೇಜ್ರಿವಾಲ್ ಜಿ ನನ್ನ ಗುರು. ಅವರು ನನ್ನ ಮಾರ್ಗದರ್ಶಕ. ನಾನು ಮುಖ್ಯಮಂತ್ರಿಯಾಗಲು ರಾಜಕೀಯಕ್ಕೆ ಬಂದಿಲ್ಲ… ಸಾರ್ವಜನಿಕರಿಗೆ ಒಳ್ಳೆಯದನ್ನು ಮಾಡಲು ರಾಜಕೀಯಕ್ಕೆ ಬಂದಿದ್ದೇನೆ. ಇದು ಬಿಜೆಪಿಗೆ ನನ್ನ ತೀಕ್ಷ್ಣ ಪ್ರತಿಕ್ರಿಯೆಯಾಗಿದೆ ಎಂದು ಮನೀಶ್ ಸಿಸೋಡಿಯಾ ಹೇಳಿದ್ದಾರೆ.

ಕೇಜ್ರಿವಾಲ್ ಜಿ ಕೆಲಸ ಮಾಡುವುದನ್ನು ತಡೆಯಲು ಈ ಎಲ್ಲ ವಿಷಯವನ್ನು (ಅಬಕಾರಿ ನೀತಿ ತನಿಖೆ) ಎತ್ತಲಾಗಿದೆ. ಅದರಲ್ಲೂ ಅವರು ಗುಜರಾತ್‌ನಲ್ಲಿ ಹೊಸ ಭರವಸೆ ಮೂಡಿಸಿದ್ದಾರೆ. ನನಗೆ ಸಂದೇಶಗಳು ಬಂದಾಗ ನನಗೆ ಆಶ್ಚರ್ಯವಾಯಿತು.

ಇನ್ನು ಸಂದೇಶಗಳಲ್ಲಿ ನನಗೆ ಎರಡು ಆಫರ್‌ಗಳು ಬಂದಿವೆ – ನೀವು ಎಎಪಿಯನ್ನು ವಿಭಜಿಸಿದರೆ, ಎಲ್ಲ ಸಿಬಿಐ ಮತ್ತು ಇಡಿ ಪ್ರಕರಣಗಳನ್ನು ಕೈಬಿಡಲಾಗುವುದು. ಮತ್ತು ನಿನ್ನನ್ನು ಮುಖ್ಯಮಂತ್ರಿಯನ್ನಾಗಿ ಮಾಡಲಾಗುವುದು ಎಂದು ಹೇಳಿದ್ದಾರೆ.

ಹೊಸ ಮದ್ಯನೀತಿಗೆ ಸಂಬಂಧಿಸಿದಂತೆ ಮನೀಶ್ ಸಿಸೋಡಿಯಾ ನಿವಾಸ ಮತ್ತು ಕಚೇರಿಗಳ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದರು. ದಾಳಿ ಬೆನ್ನಲ್ಲೇ ಆಮ್ ಅದ್ಮಿ ನಾಯಕರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Leave a Reply

error: Content is protected !!
LATEST
ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ