CrimeNEWSನಮ್ಮಜಿಲ್ಲೆ

24 ಗಂಟೆಯಲ್ಲಿ ಬಿಎಂಟಿಸಿಯ ಮೂವರು ನೌಕರರು ಮೃತ – ಬನಶಂಕರಿ ಡಿಪೋ ಚಾಲಕನಿಗೆ ಹೃದಯಾಘಾತ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬನಶಂಕರಿ ಘಟಕ 20ರ ಚಾಲಕರೊಬ್ಬರು ಅಧಿಕಾರಿಗಳ ಕಿರುಕುಳದಿಂದ  ಒತ್ತಡಕ್ಕೆ ಒಳಗಾಗಿದ್ದ ಚಾಲಕರೊಬ್ಬರಿಗೆ ಲಕ್ವ ಹೊಡೆದು ಹೃದಯಾಘಾತದಿಂದ  ಇಂದು ಮುಂಜಾನೆ ಮೃತಪಟ್ಟಿದ್ದಾರೆ.

ಪರುವಯ್ಯನ ಪಾಳ್ಯದ ಬಿಎಂಟಿಸಿ ಚಾಲಕ ಬಸವರಾಜು ಎಂಬುವರೆ  ಹೃದಯಾಘಾತದಿಂದ ಮೃತಪಟ್ಟವರು.

ಕರ್ತವ್ಯಕ್ಕೆ ಬರಬೇಕಾದರೆ ಲಂಚಕೊಡಬೇಕು ಇಲ್ಲದಿದ್ದರೆ ರೂಟ್‌ಗಳನ್ನು ಕೊಡುತ್ತಿರಲಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಈ ಸಂಬಂಧ ಕಳೆದ 2-3 ದಿನದ ಹಿಂದೆ ಬಸವರಾಜು ಸಂಬಂಧಿಗಳು ಕೂಡ ಡಿಪೋಗೆ ಬಂದು ಡಿಎಂ ಜತೆ ಮಾತನಾಡಿದ್ದರು ಎಂದು ಹೇಳಲಾಗುತ್ತಿದೆ.

ಒಟ್ಟಾರೆ ಸಾರಿಗೆ ನಿಗಮಗಳಲ್ಲಿ ಅಧಿಕಾರಿಗಳ ಕಿರುಕುಳಕ್ಕೆ ಅಮೂಲ್ಯವಾದ ಜೀವಗಳು ಹೋಗುತ್ತಿವೆ. ಆದರೂ ಸರ್ಕಾರ ಈ ಬಗ್ಗೆ ಗಮನಹರಿಸದಿರುವುದು ನಾಚಿಕೆಗೇಡಿನ ಸಂಗತಿ.

ಕಳೆದ 24 ಗಂಟೆಯಲ್ಲಿ ಬಿಎಂಟಿಸಿಯಲ್ಲಿ ಅಧಿಕಾರಿಗಳ ಕಿರುಕುಳದಿಂದ ಮೂವರು ನೌಕರರು ಜೀವಕಳೆದು ಕೊಂಡಿದ್ದಾರೆ. ಆದರೂ ಈ ಬಗ್ಗೆ ಸಾರಿಗೆ ಸಚಿವರು ತುಟಿ ಬಿಚ್ಚದಿರುವುದಕ್ಕೆ ನೌಕರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇನ್ನು ಮೃತರ ಕುಟುಂಬಕ್ಕೆ ತಲಾ 50 ಲಕ್ಷ ರೂ.ಗಳ ಪರಿಹಾರ ನೀಡಬೇಕು ಎಂದು ಪಟ್ಟು ಹಿಡಿದು ಹೋರಾಟ ಮಾಡುತ್ತಿದ್ದಾರೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ