NEWSನಮ್ಮಜಿಲ್ಲೆ

SEP 5 – ಸಾರಿಗೆ ನೌಕರರ ಬೇಡಿಕೆ ಕುರಿತು ಚರ್ಚಿಸಲು ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಎಂಡಿಗಳ ಸಭೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರಿಗೆ ಇಲಾಖೆ ಸರ್ಕಾರದ ಕಾರ್ಯದರ್ಶಿ ಅವರ ಅಧ್ಯಕ್ಷತೆಯಲ್ಲಿ ಸಾರಿಗೆ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆ ಸಂಬಂಧ ಇದೇ ಸೆ.5ರಂದು ಎಲ್ಲ ನಿಗಮಗಳ ಎಂಡಿಗಳೊಂದಿಗೆ ವಿಡಿಯೋ‌ ಸಂವಾದ ಆಯೋಜಿಸಲಾಗಿದೆ.

ಈ ಸಂಬಂಧ ನಾಳೆ (ಸೆ.5) ಮಧ್ಯಾಹ್ನ 4.30ಕ್ಕೆ ನೌಕರರ ಬೇಡಿಕೆಗಳ ಕುರಿತು ಚರ್ಚಿಸಲು ಕರೆದಿರುವ ಸಭೆಗೆ ಅಗತ್ಯ ಮಾಹಿತಿಯೊಂದಿಗೆ ಭಾಗವಹಿಸಿದಬೇಕು ಎಂದು ಸಾರಿಗೆ ಇಲಾಖೆ ಅರ್ಕಾರದ ಅಧೀನ ಕಾರ್ಯದರ್ಶಿ ವಿ.ಎಸ್‌.ಪುಷ್ಪ ತಿಳಿಸಿದ್ದಾರೆ.

ನೌಕರರ ಬೇಡಿಕೆಗಳ ಕುರಿತು ಈಗಾಗಲೇ ಸರ್ಕಾರ ಮತ್ತು ಅಧಿಕಾರಿಗಳ ಮಟ್ಟದಲ್ಲಿ ಹಲವಾರು ಸಭೆಗಳು ಜರುಗಿವೆ ಆದರೆ, ಆ ಸಭೆಯಲ್ಲಿ ಏನು ನಿರ್ಣಯ ತೆಗೆದುಕೊಳ್ಳಲಾಯಿತು ಎಂಬುದರ ಬಗ್ಗೆ ಮಾತ್ರ ಇದುವರೆಗೂ ಯಾವುದೇ ಮಾಹಿತಿ ಲಭ್ಯವಾಗುತ್ತಿಲ್ಲ.

ಇನ್ನು ಕಳೆದ 2020ರ ಜನವರಿ 1ರ ಅನ್ವಯ ನೌಕರರಿಗೆ ಅಗ್ರಿಮೆಂಟ್‌ ಮೂಲಕ ವೇತನ ಹೆಚ್ಚಳವಾಗಬೇಕಿತ್ತು. ಆದರೆ, ಮತ್ತೊಂದು ಅಗ್ರಿಮೆಂಟ್‌ ಟೈಮ್‌ ಬರುತ್ತಿದ್ದರೂ ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಇನ್ನೂ ಚರ್ಚೆಯಲ್ಲೇ ತೊಡಗಿದ್ದು, ನೌಕರರಿಗೆ ಯಾವುದೇ ರೀತಿಯ ವೇತನ ಮಾತ್ರ ಹೆಚ್ಚಳವಾಗಿಲ್ಲ.

ಇತ್ತ ಸಾರಿಗೆ ನೌಕರರ ಕೆಲ ಸಂಘಟನೆಗಳ ಮುಖಂಡರು ಅಗ್ರಿಮೆಂಟ್‌ ಆಗಬೇಕು ಎಂದು ಹೇಳುತ್ತಿದ್ದರೆ. ಇನ್ನು ಕೆಲ ಸಂಘಟನೆಗಳ ಮುಖಂಡರು ನಮಗೆ ವೇತನ ಆಯೋಗ ಅಳವಡಿಸಿ ಸರ್ಕಾರಿ ನೌಕರರಂತೆ ಸರಿ ಸಮಾನ ವೇತನ ಕೊಡಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಆದರೆ, ಕಳೆದ 3-4 ದಶಕದಿಂದಲೂ ಅಗ್ರಿಮೆಂಟ್‌ ಮಾಡಿಕೊಂಡು ಬರಲಾಗುತ್ತಿದೆ. ಇದು ಕೇವಲ ಸರ್ಕಾರದ ಮಟ್ಟದಲ್ಲಿ ಮಾತ್ರವಾಗುತ್ತಿದ್ದು, ಆ ಅಗ್ರಿಮೆಂಟ್‌ಗೆ ಇದುವರೆಗೂ ಸಂಬಂಧಪಟ್ಟ ನೌಕರರ ಸಂಘಟನೆಗಳು ಒಪ್ಪಿಗೆ ಸೂಚಿಸಿ ಒಪ್ಪಂದ ಪತ್ರಕ್ಕೆ ಸಹಿ ಮಾಡಿಲ್ಲ.

ಅಂದರೆ ಇದು ನೌಕರರ ವಿರುದ್ಧವಾಗಿ ಈವರೆಗೂ ಸರ್ಕಾರ ಮತ್ತು ಆಡಳಿತ ಮಂಡಳಿ ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಂಡಿದೆ. ಹೀಗಾಗಿ ಅವರು ಮಾಡಿರುವ ಅಗ್ರಿಮೆಂಟ್‌ನಿಂದ ನಮಗೆ ಮತ್ತು ನಮ್ಮ ನೌಕರರಿಗೆ ತೃಪ್ತಿಯಾಗಿಲ್ಲ ಎಂದು ನೂರಾರು ಬಾರಿ ನೌಕರರ ಯೂನಿಯನ್‌ಗಳ ಮುಖಂಡರೇ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದಾರೆ. ಈಗಲೂ ನೀಡುತ್ತಿರುತ್ತಾರೆ.

ಈ ಎಲ್ಲವನ್ನು ಗಮನಿಸಿರುವ ಸರ್ಕಾರ ಮತ್ತು ಸಾರಿಗೆ ನಿಗಮಗಳ ಆಡಳಿತ ಮಂಡಳಿ ಇನ್ನು ಮುಂದಾದರೂ ಈ ರೀತಿ ಕಿರಿಕಿರಿಯಾಗದಿರುವಂತ ನಿರ್ಣಯವನ್ನು ತೆಗೆದುಕೊಂಡು ನೌಕರರ ಮತ್ತು ಅಧಿಕಾರಿಗಳ ನಡುವೆ ಉತ್ತಮ ಭಾಂದವ್ಯ ಬೆಸೆಯಬೇಕಿದೆ.

Leave a Reply

error: Content is protected !!
LATEST
ಫ್ರಿಡ್ಜ್‌ನಲ್ಲಿದ್ದ ಮಹಾಲಕ್ಷ್ಮೀ ದೇಹದ 32 ಪೀಸ್‌ಗಳು ಹೇಳುತ್ತಿವೆ ಭಯಾನಕ ಸತ್ಯ ಬಡವರು-ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ವಿತರಣೆ: ಡಾ.ಬಸ್ತಿ ರಂಗಪ್ಪ KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ