CrimeNEWSನಮ್ಮಜಿಲ್ಲೆ

ಮೈಸೂರು: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿದ ವಕೀಲನಿಗೇ 1.10 ಲಕ್ಷ ರೂ. ದಂಡ ಹಾಕಿದ ಕೋರ್ಟ್‌

ವಿಜಯಪಥ ಸಮಗ್ರ ಸುದ್ದಿ

ಮೈಸೂರು : ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲರೊಬ್ಬರಿಗೆ ಜಿಲ್ಲಾ ನ್ಯಾಯಾಲಯ 1.10 ಲಕ್ಷ ರೂಪಾಯಿ ದಂಡ ವಿಧಿಸಿದ್ದು ಅದನ್ನು ಪಾವತಿಸಲು ವಿಫಲರಾದರೆ 6 ತಿಂಗಳು ಸೆರೆವಾಸ ಅನುಭವಿಸಬೇಕು ಎಂದು ತೀರ್ಪು ನೀಡುವ ಮೂಲಕ ಎಲ್ಲರ ಹುಬ್ಬೇರಿವಂತೆ ಮಾಡಿದೆ !

ಒಂದನೇ ಹೆಚ್ಚುವರಿ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ಸಿ ನ್ಯಾಯಾಲಯ ವಕೀಲ ಟಿ. ಶ್ರೀನಿವಾಸ್ ಎಂಬುವರಿಗೆ ದಂಡ ವಿಧಿಸಿ ಆದೇಶ ನೀಡಿರುವುದು.

ವಯೋವೃದ್ಧರಾದ ಮಹದೇವಪ್ಪ ಎಂಬುವರು ಯಾವುದೇ ಬಡ್ಡಿ ಇಲ್ಲದೆ ವಕೀಲ ಶ್ರೀನಿವಾಸ್ ಅವರಿಗೆ ಒಂದು ಲಕ್ಷ ರೂಪಾತಿ ಸಾಲ ಕೊಟ್ಟಿದ್ದರು. ಅದಕ್ಕಾಗಿ ಶ್ರೀನಿವಾಸ್ ಅವರು ನೀಡಿದ್ದ ಚೆಕ್ಕನು ಬ್ಯಾಂಕಿಗೆ ಹಾಜರುಪಡಿಸಿದಾಗ ಅದು ಬೌನ್ಸ್ ಆಗಿತ್ತು.

ಹಾಗಾಗಿ, ಸಾಲದ ಹಣವನ್ನು ನೀಡುವಂತೆ ನೋಟಿಸ್ ನೀಡಿದಾಗ, ಶ್ರೀನಿವಾಸ ನಾನು ಹಣವನ್ನು ವಾಪಸ್ ಮಾಡಿದ್ದೇನೆ ಎಂದು ಹೇಳಿ ನಕಲಿ ದಾಖಲೆ ಸೃಷ್ಟಿಸಿ, ಮಹದೇವಪ್ಪ ಅವರ ಸಹಿಯನ್ನು ಫೋರ್ಜರಿ ಮಾಡಿದ್ದು, ಆ ಎಲ್ಲ ದಾಖಲೆಗಳನ್ನು ನ್ಯಾಯಾಲಯಕ್ಕೂ ಸಲ್ಲಿಸಿದ್ದರು.

ಆದರೆ ಅವುಗಳನ್ನು ರುಜುವಾತು ಮಾಡಲು ವಕೀಲ ಟಿ. ಶ್ರೀನಿವಾಸ್ ವಿಫಲರಾದರು. ಅಲ್ಲದೇ, ಶ್ರೀನಿವಾಸ ಅವರು ನೀಡಿರುವ ಯಾವುದೇ ದಾಖಲೆಗಳು ಸಮಂಜಸವಾಗಿಲ್ಲ ಎಂದು ನಿರ್ಧರಿಸಿ, ನ್ಯಾಯಾಲಯ ಶ್ರೀನಿವಾಸ ಅವರಿಗೆ 1.10 ಲಕ್ಷ ರೂ ದಂಡ ವಿಧಿಸಿದೆ. ದಂಡವನ್ನು ಪಾವತಿಸದಿದ್ದರೆ ಆರು ತಿಂಗಳ ಸರಳ ಸೆರೆವಾಸ ಅನುಭವಿಸಬೇಕೆಂದು ಆದೇಶ ನೀಡಿದೆ.

ಕಕ್ಷಿದಾರರ ವಯೋವೃದ್ಧರಾದ ಮಹದೇವಪ್ಪ ಅವರ ಪರವಾಗಿ ವಕೀಲ ಪ್ರಸಾದ್ ವಾದ ಮಂಡಿಸಿದ್ದರು.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್