NEWSನಮ್ಮಜಿಲ್ಲೆನಮ್ಮರಾಜ್ಯ

KSRTC- ಪ್ರಾಣ ಪಣಕ್ಕಿಟ್ಟು ಪ್ರಯಾಣಿಕರ ರಕ್ಷಿಸಿದ ಚಾಲನಾ ಸಿಬ್ಬಂದಿ : ಸ್ಮಾರ್ಟ್ ಫೋನ್ ಕೊಟ್ಟು ಅಭಿನಂದಿಸಿದ ಎಂಡಿ ಅನ್ಬುಕುಮಾರ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಂಡು ಕೇಳರಿಯದ ಮಹಾ ಮಳೆಗೆ ಊರಿಗೆ ಊರೇ ನೀರಿನಲ್ಲಿ ಮುಳುಗುತ್ತಿದ್ದು, ಹೆದ್ದಾರಿಗಳೆಲ್ಲಾ ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತವಾಗುತ್ತಿದೆ. ಈ ರಕ್ಕಸ ಮಳೆಯಲ್ಲಿ ಸಾರಿಗೆ ಬಸ್ಸುಗಳನ್ನು ಚಾಲನೆ ಮಾಡುವ ದೊಡ್ಡ ಸವಾಲು ನಮ್ಮ ಚಾಲನಾ ಸಿಬ್ಬಂದಿಗಳದ್ದಾಗಿದೆ.

ಈ ನಡುವೆ ಮಳೆಯ ನೀರಿನಿಂದ ತುಂಬಿಹೋಗಿದ್ದ ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ ಸಿಲುಕಿದ್ದ ಕೆಎಸ್‌ಆರ್‌ಟಿಸಿ ಬಸ್‌ ಚಾಲಕರು ತಮ್ಮ ಬಸ್‌ನಲ್ಲಿದ್ದ ಚಪ್ರಯಾಣಿಕರನ್ನು ಪ್ರಾಣ ಪಣಕ್ಕಿಟ್ಟು ರಕ್ಷಿಸಿರುವುದು ನಿಗಮದ ವ್ಯವಸ್ಥಾಪಕ ನಿರ್ದೇಶಕರ ಗಮನಕ್ಕೆ ಬಂದಿದೆ.

ಹೌದು! ಕಳೆದ ಆಗಸ್ಟ್‌ 29 ರಂದು ರಾಮನಗರ ಮೈಸೂರು – ಬೆಂಗಳೂರು ಹೆದ್ದಾರಿ ಅಕ್ಷರಶಃ ನೀರಿನಿಂದ ಮುಳುಗಿ ಹೋಗಿತ್ತು. ಆ ವೇಳೆ ಸಂಸ್ಥೆಯ ವಾಹನ ಸಂಖ್ಯೆ ಕೆಎ42-ಎಫ್0502 ಅನುಸೂಚಿ ಸಂಖ್ಯೆ-117 (ಉರಗಹಳ್ಳಿ – ರಾಮನಗರ) ಮಾರ್ಗದಲ್ಲಿ ಚಾಲನೆಯಲ್ಲಿದ್ದಾಗ, ರಾಮನಗರ ರೈಲ್ವೇ ಬ್ರಿಡ್ಜ್ ಅಂಡರ್ ಪಾಸ್ ಬಳಿ ಬರುತ್ತಿದ್ದ ಬಸ್‌ ಮಳೆ ನೀರಿಗೆ ಸಿಲುಕಿ ಮುಳುಗಡೆಯಾಗಿತ್ತು. ಸ್ವಲ್ಪ ಮುಂದೆ ಅದೇ ಮಾರ್ಗದಲ್ಲಿ ಮತ್ತೊಂದು ಖಾಸಗಿ ವಾಹನ ಕೆಟ್ಟು ನಿಂತಿದ್ದರಿಂದ ಬಸ್ಸನ್ನು ಮುಂದೆ ಚಲಾಯಿಸಲು ಸಾಧ್ಯವಾಗಲೇ ಇಲ್ಲ.

ಈ ಸಂದರ್ಭದಲ್ಲಿ, ನೀರಿನ ಮಟ್ಟ ಜಾಸ್ತಿಯಾಗುತ್ತಿದ್ದರೂ, ತಮಗೆ ಈಜಲು ಬಾರದಿದ್ದರೂ ಸಹ ಎದೆಗುಂದದೆ ಧೈರ್ಯದಿಂದ ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರನ್ನು ಸಾರ್ವಜನಿಕರ ಸಹಾಯದೊಂದಿಗೆ ರಕ್ಷಿಸಿ ಸುರಕ್ಷಿತ ಸ್ಥಳ ಸೇರಿಸಿದರು.

ಅಂದರೆ ಆ ಸಮಯದಲ್ಲಿ ಬಸ್‌ ಡೋರ್‌ ಮೂಲಕ ಇಳಿಯಲು ಸಾಧ್ಯವಾಗಲಿಲ್ಲ. ಆದರೆ ಪ್ರಯಾಣಿಕರನ್ನು ಹೇಗಾದರೂ ಮಾಡಿ ರಕ್ಷಿಸಬೇಕು ಎಂದು ಹೊರಟ ರಾಮನಗರ ವಿಭಾಗ ರಾಮನಗರ ಘಟಕದ ಚಾಲನಾ ಸಿಬ್ಬಂದಿ ಲಿಂಗರಾಜು, (ಚಾಲಕ.ಕಂ.ನಿರ್ವಾಹಕ. ಬಿಲ್ಲೆ ಸಂಖ್ಯೆ 2621) ಹಾಗೂ ವೆಂಕಟೇಶ (ಚಾಲಕ ಕಂ ನಿರ್ವಾಹಕ ಬಿಲ್ಲೆ ಸಂಖ್ಯೆ 2863) ಹೇಗೂ ಒಂದು ಏಣಿಯನ್ನು ಹುಡುಕಿ ತಂದು ಓರ್ವ ವೃದ್ಧೆ ಸೇರಿದಂತೆ ಕೆಲ ಪ್ರಯಾಣಿಕರನ್ನು ಸುರಕ್ಷಿತವಾಗಿ ಮಳೆನೀರಿನಿಂದ ರಕ್ಷಿಸಿದ್ದರು.

ಬಳಿಕ ಆ ಚಾಲನಾ ಸಿಬ್ಬಂದಿ ಕೇಂದ್ರ‌ ಕಚೇರಿಯಲ್ಲಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್‌ ಅವರನ್ನು ಭೇಟಿ ಮಾಡಿ ನಡೆದ ಘಟನೆಯನ್ನು ವಿವರಿಸಿದರು. ಈಜು ಬಾರದ ನಾವಿಬ್ಬರೂ, ಬಸ್ಸಿನಲ್ಲಿ ಸಿಲುಕಿರುವ ಪ್ರಯಾಣಿಕರನ್ನು ಉಳಿಸಲು ಕಷ್ಟಪಟ್ಟಿದ್ದೇವೆ. ಅದೇ ರೀತಿ ಪ್ರಯಾಣಿಕರು ಕೂಡ ನಮ್ಮನ್ನು ಉಳಿಸಿದರು ಹಾಗೂ ಈ ಸಂದರ್ಭದಲ್ಲಿ ತಮ್ಮ ಮೊಬೈಲ್ ಫೋನ್‌ಗಳು ಕೂಡ ನೀರು ತುಂಬಿ ಹಾಳಾಗಿ ಹೋಗಿವೆ. ಯಾವ ಅಧಿಕಾರಿಗಳನ್ನು ಸಂರ್ಪಕಿಸಲು ಸಾಧ್ಯವಾಗದ ಪರಿಸ್ಥಿತಿ ಇತ್ತು. ನಮಗೆ ಆ ಸಮಯದಲ್ಲಿ ನಮ್ಮ ಪ್ರಯಾಣಿಕರನ್ನು ಪ್ರಾಣಾಪಾಯದಿಂದ ಪಾರು ಮಾಡಬೇಕೆಂಬುದು ಮಾತ್ರ ಉದ್ದೇಶವಾಗಿತ್ತೆಂದು ತಿಳಿಸಿದರು.

ಆ ಮಾತನ್ನು ಕೇಳಿದ ವ್ಯವಸ್ಥಾಪಕ ನಿರ್ದೇಶಕರು ಚಾಲಕರನ್ನು ಮನತುಂಬಿ ಹಾರೈಸಿ, ತಮ್ಮ ಈ ಉತ್ಕೃಷ್ಟ ಕಾರ್ಯತತ್ಪರತೆ ಇತರರಿಗೆ ಮಾದರಿ ಹಾಗೂ ಸ್ಫೂರ್ತಿದಾಯಕವಾಗಿದೆ. ದೇವರು ತಮಗೆ ಮತ್ತು ತಮ್ಮ ಪರಿವಾರದವರಿಗೆ ಒಳ್ಳೆಯದು ಮಾಡಲಿ ಎಂದು ಹಾರೈಸಿದರು.

ಈ ಸಮಯದಲ್ಲಿ ಸಿಬ್ಬಂದಿಗಳ ಮೊಬೈಲ್ ಹಾಳಾಗಿದ್ದಕ್ಕೆ , ಇಬ್ಬರಿಗೂ ಒಂದೊಂದು ಸ್ಮಾರ್ಟ್ ಮೊಬೈಲ್ ಫೋನ್ ಅನ್ನು ನಿಗಮದ ವತಿಯಿಂದ ಉಡುಗೊರೆಯಾಗಿ ನೀಡಿ, ಅವರ ಮಾನವೀಯ ನೆಲೆಯಲ್ಲಿನ ಸೇವಾ ಮನೋಭಾವವು ನಿಜಕ್ಕೂ ಅನನ್ಯ, ಅನುಕರಣೀಯವೆಂದು ಬಣ್ಣಿಸಿದರು. ಚಾಲನಾ ಸಿಬ್ಬಂದಿಗಳ ಕಾರ್ಯವನ್ನು ಪ್ರಶಂಸಿಸಿ, ಅಭಿನಂದನಾ ಪತ್ರವನ್ನು ನೀಡಿ ಶ್ಲಾಘಿಸಿದರು.

Leave a Reply

error: Content is protected !!
LATEST
ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ