NEWSನಮ್ಮಜಿಲ್ಲೆರಾಜಕೀಯ

ಮನುಷ್ಯತ್ವ ಇಲ್ಲದ ಪಡ್ಡೆಗಳು ಸಂಸದರಾಗಿದ್ದು ದುರಂತ – ಮುಕುಂದ ಗೌಡ

ಮಳೆಯಿಂದ ಜನ ಹೈರಾಣರಾಗಿದ್ದರೂ, ಹೋಟೆಲ್ ದೋಸೆ ಸವಿಯಲು ಆಹ್ವಾನಿಸಿದ ಸಂಸದ ತೇಜಸ್ವಿ ಸೂರ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಗರದಲ್ಲಿ ಕಳೆದ ಕೆಲವು ದಿನಗಳಿಂದ ಪ್ರತಿದಿನ ಸುರಿಯುತ್ತಿರುವ ಮಳೆಯಿಂದಾಗಿ ನಗರದ ಹಲವು ಭಾಗಗಳು ಕೆರೆಯಂತಾಗಿವೆ. ಒಂದೆಡೆ ಜನ ಸಂಕಷ್ಟಗಳಿಂದ ಹೈರಾಣಾಗಿದ್ದಾರೆ, ಮತ್ತೊಂದೆಡೆ ಆಡಳಿತ ಯಂತ್ರ ಕುಸಿದಿದ್ದು, ಸಮಪರ್ಕವಾಗಿ ಕಾರ್ಯನಿರ್ವಹಿಸದಿರುವ ಬಗ್ಗೆ ಜನರು ಟೀಕಿಸುತ್ತಿದ್ದಾರೆ.

ಇತ್ತ ಕನ್ನಡನಾಡಿಗೆ ಕಷ್ಟ ಬಂದಾಗಲೆಲ್ಲಾ ಬಿಜೆಪಿಯವರು ಸೌಜನ್ಯ ಮರೆತು,‌ ಮನುಷ್ಯತ್ವ ಇಲ್ಲದೇ ನಡೆದುಕೊಳ್ಳುತ್ತಾರೆ ಎಂಬುದನ್ನು ತೇಜಸ್ವಿ ಸೂರ್ಯ ಮತ್ತೆ ತೋರಿಸಿಕೊಟ್ಟಿದ್ದಾರೆ ಎಂದು ಆಪ್ ಯುವ ಘಟಕದ ಅಧ್ಯಕ್ಷ ಮುಕುಂದ್ ಗೌಡ ತಮ್ಮ ಟ್ವೀಟ್ ನಲ್ಲಿ ಕಿಡಿಕಾರಿದ್ದಾರೆ.

ಸಾಮಾಜಿಕ ಜಾಲತಣದಲ್ಲಿ ಕಾಣಿಸುತ್ತಿರುವ ಅವರ ವಿಡಿಯೋ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಅವರು, “ಬೆಂಗಳೂರಿನ ಬಹುಭಾಗ ಮಳೆಹಾನಿಯಿಂದ ತತ್ತರಿಸಿ ಹೋಗಿರುವಾಗ ಯಾವುದೋ ಹೋಟೆಲ್ ನ ಊಟ ಸವಿದು ಅದರ ಪ್ರಚಾರ ಮಾಡಲು ಹೊರಟಿರುವುದು ಅತಿರೇಕ ಮತ್ತು ಅಸಹ್ಯದ ವರ್ತನೆ ನಾಚಿಕೆಗೇಡಿನದ್ದು. ಬಿಜೆಪಿಯ ಬಾಲಿಶ ರಾಜಕಾರಣಕ್ಕೆ ಇದಕ್ಕಿಂತ ಉದಾಹರಣೆ ಬೇಕಾಗಿಲ್ಲ ಎಂದಿದ್ದಾರೆ.

ಇಡೀ ಬಿಜೆಪಿ ಶಾಸಕರು ಸಚಿವರೊಂದಿಗೆ ಸಂಸದರೂ 40% ಕಮಿಷನ್ ಫಲಾನುಭವಿಗಳಾಗಿ ಇಂದು ನಗರ ಕೊಚ್ಚಿಹೋಗಲು ಕಾರಣರಾಗಿದ್ದಾರೆ, ಇಂಥವರನ್ನು ಪಡೆದದ್ದು ಬೆಂಗಳೂರಿನ ದೌರ್ಭಾಗ್ಯ ಎಂದು ಹೇಳಿದ್ದಾರೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ