NEWSಕ್ರೀಡೆ

ಸೆ. 14, 15 ರಂದು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಕ್ರೀಡಾಪಟುಗಳ ಆಯ್ಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ದಸರಾ ಕ್ರೀಡೆಯ ಆಯ್ಕೆಗಳನ್ನು ಸೆಪ್ಟೆಂಬರ್ 14 ಮತ್ತು 15 ರಂದು ದೊಡ್ಡಬಳ್ಳಾಪುರ ನಗರದ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ.

ನಿಯಮ ಮತ್ತು ನಿಬಂಧನೆಗಳು : • ಕ್ರೀಡಾಪಟುಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಯವರೇ ಆಗಿರಬೇಕು. •ಈಗಾಗಲೇ ನಡೆದಿರುವ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಫಲಿತಾಂಶ ಪಟ್ಟಿಯಂತೆ ವೈಯಕ್ತಿಕ ಕ್ರೀಡೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಹಾಗೂ ಗುಂಪು ಕ್ರೀಡೆಗಳಲ್ಲಿ(ರಿಲೇ ಸಹಿತ ) ಪ್ರಥಮ ಸ್ಥಾನ ಪಡೆದವರು ಭಾಗವಹಿಸಬಹುದು ಜಿಲ್ಲಾ ಮಟ್ಟದಲ್ಲಿನ ಆಯ್ಕೆ ಕ್ರೀಡೆಗಳಿಗೆ ನೇರವಾಗಿ ಭಾಗವಹಿಸಬಹುದು. (ಟೆನ್ನಿಸ್, ನೆಟ್ ಬಾಲ್ ಮತ್ತು ಈಜು).

• ಕ್ರೀಡಾಪಟುಗಳು ಕಡ್ಡಾಯವಾಗಿ ಆಧಾರ್ ಕಾರ್ಡ್ ಒರಿಜಿನಲ್ ಮತ್ತು ಜೆರಾಕ್ಸ್ ಪ್ರತಿ, ಪಾಸ್ ಪೋರ್ಟ್ ಸೈಜ್ ಫೋಟೋ ಮತ್ತು ಬ್ಯಾಂಕ್ ಖಾತೆಯ ವಿವರಗಳನ್ನು ಕಡ್ಡಾಯವಾಗಿ ತರುವುದು ಮತ್ತು ವಿದ್ಯಾರ್ಥಿಗಳಾಗಿದ್ದರೆ ಆಧಾರ್ ಮತ್ತು ಶಾಲೆ/ಕಾಲೇಜು ಗುರುತಿಸಿ ಚೀಟಿ ತರುವುದು.

•ಕಡ್ಡಾಯವಾಗಿ ಕ್ರೀಡಾಪಟುಗಳು ಬೆಳಗ್ಗೆ 9 ಗಂಟೆಗೆ ಕ್ರೀಡಾಂಗಣದಲ್ಲಿ ಹಾಜರಿದ್ದು ನೋಂದಣಿ ಮಾಡಿಕೊಳ್ಳುವುದು. ನಂತರ ಬಂದಂತಹ ಕ್ರೀಡಾಪಟುಗಳಿಗೆ ಅವಕಾಶವಿಲ್ಲ. •ತೀರ್ಪುಗಾರರ ತೀರ್ಪಿಗೆ ಬದ್ಧರಾಗಿರಬೇಕು. ಅಸಭ್ಯವಾಗಿ ವರ್ತಿಸಿದವರನ್ನು ಕ್ರೀಡಾಕೂಟದಿಂದ ರದ್ದು ಗೊಳಿಸಲಾಗುವುದು.

•ವಿವಾದತ್ಮಕ ವಿಷಯ ಮತ್ತು ವಿಶೇಷ ಪ್ರಕರಣ / ಸಂದರ್ಭದಲ್ಲಿ ಆಯೋಜಕರ(ಬೆ. ಗ್ರಾ.ಜಿಲ್ಲಾ ಕ್ರೀಡಾ ಇಲಾಖೆಯ ) ತೀರ್ಮಾನ ಅಂತಿಮ. ಹೆಚ್ಚಿನ ಮಾಹಿತಿಗಾಗಿ, ಮೊಬೈಲ್: 9632778567 /9845608598 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಹಾಯಕ ನಿರ್ದೇಶಕರಾದ ಆರ್.ಗೀತಾ ತಿಳಿಸಿದ್ದಾರೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ