NEWSದೇಶ-ವಿದೇಶನಮ್ಮರಾಜ್ಯ

ಕಾರಿಗೆ  170 ಇದ್ದ ಟೋಲ್ ದರ 180 ರೂ.ಗೆ ಏರಿಕೆ – ಸವಾರರು ಕಂಗಾಲು

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ರಾಜ್ಯದ ಜನರಿಗೆ ಹಲವಾರು ರೀತಿಯಲ್ಲಿ ತೆರಿಗೆ ಹೊರೆ ಹೇರುತ್ತಿರುವ ನಡುವೆಯೇ ಇಂದಿನಿಂದ ವಾಹನ ಸವಾರರಿಗೆ ಟೋಲ್ ದರ ಏರಿಕೆ ಬಿಸಿ ಕೂಡಾ ತಟ್ಟಲಿದೆ. ಹೌದು! ಶೇ. 5ರಷ್ಟು ಟೋಲ್ ದರ ಏರಿಕೆಯಾಗಿದ್ದು, ರಾಜ್ಯದ ಜನರ ಮೇಲೆ ಮತ್ತೊಂದಷ್ಟು ವಸೂಲಿಗೆ ಇಳಿದಿವೆ ಸರ್ಕಾರಗಳು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ (NHAI) ವಾರ್ಷಿಕ ಟೋಲ್ ದರ ಏರಿಕೆಯು ಇಂದಿನಿಂದ (ಏ.1) ಅನ್ವಯವಾಗಲಿದೆ. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೆಯಲ್ಲೂ ಪರಿಷ್ಕೃತ ದರ ಜಾರಿ ಆಗಿದೆ. ಬೆಂಗಳೂರಿನಿಂದ ನಿಢಗಟ್ಟದವರೆಗಿನ 56ಕಿ.ಮೀಗೆ ಶೇ.5ರಷ್ಟು ಟೋಲ್ ದರ ಏರಿಕೆಯಾಗಿದ್ದು, ಬಿಡದಿ ಸಮೀಪದ ಶೇಷಗಿರಿಹಳ್ಳಿ ಹಾಗೂ ಕಣಮಿಣಕಿ ಟೋಲ್‌ನಲ್ಲೂ ದರ ಏರಿಕೆ ಮಾಡಲಾಗಿದೆ.

ಕಾರು/ಜೀಪು: ಏಕಮುಖ ಸಂಚಾರದ ಹೊಸ ದರ 180 ರೂ. ಆಗಿದ್ದು, ಹಳೆ ದರ 170 ರೂ. ಇತ್ತು. ಇದೀಗ 10 ರೂ. ಹೆಚ್ಚಳವಾಗಿದೆ. ದ್ವಿಮುಖ ಸಂಚಾರದ ಹೊಸ ದರ 270 ರೂ. ಆಗಿದ್ದು, ಹಳೆ ದರ 255 ರೂ. ಇತ್ತು. 15 ರೂ. ಹೆಚ್ಚಿಸಲಾಗಿದೆ.

ಲಘು ವಾಣಿಜ್ಯ ವಾಹನ: ಏಕಮುಖ ಸಂಚಾರ ಹೊಸ ದರ 290 ರೂ. ಆಗಿದ್ದು, ಹಳೆ ದರ 275 ರೂ. ಇತ್ತು. 15 ರೂ. ಹೆಚ್ಚಳವಾಗಿದೆ. ದ್ವಿಮುಖ ಸಂಚಾರದ ಹೊಸ ದರ 430 ರೂ. ಆಗಿದ್ದು, ಹಳೆ ದರ 415 ರೂ. ಇತ್ತು. ಇದೀಗ 15 ರೂ. ಹೆಚ್ಚಿಸಲಾಗಿದೆ.

ಬಸ್/ಟ್ರಕ್: ಏಕಮುಖ ಸಂಚಾರ ಹೊಸ ದರ 605 ರೂ. ಆಗಿದ್ದು, ಹಳೆ ದರ 580 ರೂ. ಇತ್ತು. 25 ರೂ. ಹೆಚ್ಚಳವಾಗಿದೆ. ದ್ವಿಮುಖ ಸಂಚಾರದ ಹೊಸ ದರ 905 ರೂ. ಆಗಿದ್ದು, ಹಳೆ ದರ 870 ರೂ. ಇತ್ತು. ಇದೀಗ 35 ರೂ. ಹೆಚ್ಚಳವಾಗಿದೆ.

ಮೂರು ಆಕ್ಸಲ್ ವಾಣಿಜ್ಯ ವಾಹನ: ಏಕಮುಖ ಸಂಚಾರದ ಹೊಸ ದರ 660 ರೂ. ಆಗಿದ್ದು, ಹಳೆ ದರ 635 ರೂ. ಇತ್ತು. ಇದೀಗ 25 ರೂ. ಹೆಚ್ಚಿಸಲಾಗಿದೆ. ದ್ವಿಮುಖ ಸಂಚಾರದ ಹೊಸ ದರ 990 ರೂ. ಆಗಿದ್ದು, ಹಳೆ ದರ 950 ರೂ. ಇತ್ತು. ಇದೀಗ 40 ರೂ. ಹೆಚ್ಚಳವಾಗಿದೆ.

ಮಲ್ಟಿ ಆಕ್ಸಲ್ ವೆಹಿಕಲ್ಸ್(4-6 ಆಕ್ಸಲ್): ಏಕಮುಖ ಸಂಚಾರದ ಹೊಸ ದರ 945 ರೂ. ಆಗಿದ್ದು, ಹಳೆ ದರ 910 ರೂ. ಇತ್ತು. ಇದೀಗ 35 ರೂ. ಹೆಚ್ಚಳವಾಗಿದೆ. ದ್ವಿಮುಖ ಸಂಚಾರದ ಹೊಸ ದರ 1,420 ರೂ. ಆಗಿದ್ದು, ಹಳೆ ದರ 1,365 ಇತ್ತು. ಇದೀಗ 55 ರೂ. ಹೆಚ್ಚಿಸಲಾಗಿದೆ.

ಭಾರಿ ವಾಹನಗಳು (7 ಆಕ್ಸೆಲ್ ಅಥವಾ ಅಧಿಕ): ಏಕಮುಖ ಸಂಚಾರದ ಹೊಸ ದರ 1,155 ರೂ. ಆಗಿದ್ದು, ಹಳೆ ದರ 1,110 ಇತ್ತು. 55 ರೂ. ಹೆಚ್ಚಳವಾಗಿದೆ. ದ್ವಿಮುಖ ಸಂಚಾರದ ಹೊಸ ದರ 1,730 ರೂ. ಆಗಿದ್ದು, ಹಳೆ ದರ 1,660 ರೂ. ಇತ್ತು. ಇದೀಗ 100 ರೂ. ಹೆಚ್ಚಿಸಲಾಗಿದೆ.

ಒಟ್ಟಾರೆ ಇತ್ತ ರಾಜ್ಯ ಸರ್ಕಾರ ಜನರ ಮೇಲೆ ಆರ್ಥಿಕ ಹೊರೆ ಹೇರುತ್ತಿದ್ದರೆ ಅತ್ತ ಕೇಂದ್ರ ಸರ್ಕಾರ ಕೂಡ ರಾಜ್ಯದ ಜನರಲ್ಲಿ ಇನ್ನಷ್ಟು ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸುವ ಕೆಲಸದಲ್ಲಿ ಮುಂದುವರಿಯೂತ್ತಲೇ ಇದೆ. ಇದು ಕೆಳ ಮಧ್ಯಮ ವರ್ಗದ ಜನರಿಗೆ ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸುತ್ತಿದೆ.

Deva
the authorDeva

Leave a Reply

error: Content is protected !!
Latest news
KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ... ಪ್ರಾಮಾಣಿಕತೆ ಮೆರೆದ KSRTC ಸಿಬ್ಬಂದಿ - ಆಭರಣ ಅಡವಿಟ್ಟು ತಂದಿದ್ದ ಹಣ ಕಳೆದು ಕೊಂಡ ಪ್ರಯಾಣಿಕನಿಗೆ ಮರಳಿ ಕೊಟ್ಟ ನೌಕರರ... KSRTC: ಚಾಲನಾ ಸಿಬ್ಬಂದಿ ವಿರುದ್ಧ ಮೆಮೊ ನೀಡುವುದಕಷ್ಟೇ ತಮ್ಮ ಕಾರ್ಯ ವ್ಯಾಪ್ತಿಯ ಸೀಮಿತಗೊಳಿಸಿಕೊಂಡ ತನಿಖಾಧಿಕಾರಿಗಳು?...