ಒಗ್ಗಟ್ಟಿನ ಮಂತ್ರ ಜಪಿಸಿದ ಸರ್ವ ಸಂಘಟನೆಗಳ ಸಭೆ ವಿಫಲತೆ, ಗಲಾಟೆ ನಡುವೆಯೂ ತೆಗೆದುಕೊಂಡ ನಿರ್ಧಾರ!!

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಸಾರಿಗೆ ನೌಕರರ ಪರವಾಗಿ ಸರ್ಕಾರದ ಮತ್ತು ಆಡಳಿತ ಮಂಡಳಿ ಮುಂದೆ ಮಂಡಿಸಬೇಕಿರುವ ಕೆಲ ಬೇಡಿಕೆಗಳನ್ನು ಸರ್ವ ಸಂಘಟನೆಗಳ ಸಭೆ ವಿಫಲವತೆಯ ನಡುವೆಯೂ ಕೆಲ ಮುಖಂಡರು ತೆಗೆದುಕೊಂಡ ನಿರ್ಧಾರಗಳು.
ವಿಲ್ಸನ್ ಗಾರ್ಡನ್ನಲ್ಲಿ ನಡೆದ ಸರ್ವ ಸಂಘಟನೆಯ ಸಭೆಯು ಅತ್ಯಂತ ಯಶಸ್ವಿಯಾಗಿ ನಡೆಯಬೇಕಿತ್ತು. ಆದರೆ, ಬಣಗಳ ಬಡಿದಾಟದಿಂದ ಅದು ನಿರೀಕ್ಷೆಗೂ ಮೀರಿ ವಿಫಲವಾಯಿತು. ಇದರ ನಡುವೆಯೂ ಕೆಲ ಬೇಡಿಕೆಗಳ ಈಡೇರಿಸಿಕೊಳ್ಳುವುದಕ್ಕೆ ಕೆಲ ಸಂಘಟನೆಗಳ ಮುಖಂಡರು ಸಭೆಯಲ್ಲಿ ನಿರ್ಣಯ ಮಂಡಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕುಟುಂಬದ ಕ್ಷೇಮಾಭಿವೃದ್ಧಿ ಸಂಘದ ಬೆಂಗಳೂರು ವಲಯ ಅಧ್ಯಕ್ಷ ರುದ್ರೇಶ್ ಎಸ್. ನಾಯಕ ತಿಳಿಸಿದ್ದಾರೆ.
ಸರ್ವ ಸಂಘಟನೆಯ ಪ್ರಮುಖ ಕಾರ್ಮಿಕ ಮುಖಂಡರು ಸಭೆಯಲ್ಲಿ ಒಗ್ಗೂಟ್ಟಿನ ಮಂತ್ರವನ್ನು ಪಠಿಸಿದರು. ಆ ಮೂಲಕ ನಾವೆಲ್ಲ ಸಾರಿಗೆ ಮುಖಂಡರು ಸಾರಿಗೆ ನೌಕರರ ಪರವಾಗಿ ನಾವು ನಿಮ್ಮ ಜತೆಯಲ್ಲಿ ಇದ್ದೇವೆ ಎಂದು ಘೋಷಣೆ ಕೂಗುವ ಮುನ್ನವೇ ಬಣ ಬಣಗಳ ನಡುವೆ ತಿಕ್ಕಾಟ ಉಂಟಾಯಿತು.
ಈ ವೇಳೆ ಕೆಲವು ಸಣ್ಣ ಪುಟ್ಟ ಅಹಿತಕರ ಘಟನೆಗಳು ನಡೆದವು. ಅದನ್ನು ಹೊರೆತು ಪಡಿಸಿ ಸಭೆ ಸಂಪೂರ್ಣವಾಗಿ ಯಶ ಕಂಡಿಲ್ಲವಾದರೂ ಸಭೆಯಲ್ಲಿ ಕೆಲವು ಮಹತ್ವದ ಅಂಶಗಳನ್ನು ಸಾರಿಗೆ ನೌಕರರು ಚರ್ಚೆ ಮಾಡಿದ್ದರಿಂದ ಕೆಲವು ನಿರ್ಣಯಗಳನ್ನು ತೆಗೆದುಕೊಳ್ಳಲು ನೌಕರರು ಸಲಹೆ ನೀಡಿದರು.
ಆ ಅಂಶಗಳು ಏನೆಂದರೇ? 2020ರ ವೇತನ ಹೆಚ್ಚಳದ 38 ತಿಂಗಳುಗಳ ಹಿಂಬಾಕಿ ವೇತನವನ್ನು ಕೂಡಲೇ ಸರ್ಕಾರ ಬಿಡುಗಡೆ ಮಾಡಬೇಕು. ಅಲ್ಲದೆ 1.1.2024ರ ವೇತನ ಹೆಚ್ಚಳ ಮತ್ತು ಅದರ ಹಿಂಬಾಕಿ 14 ತಿಂಗಳುಗಳದ್ದುನ್ನು ಕೊಡಬೇಕು.
ಮುಷ್ಕರ ಸಮಯದಲ್ಲಿ ವಜಾಗೊಂಡಿರುವ ನೌಕರರನ್ನು, 6.4.2021ರ ಯಥಾವತ್ತಾಗಿ ಪರಿಗಣಿಸಬೇಕು. ಘಟಕಗಳ ಮಟ್ಟದಲ್ಲಿ ಮೂಲಭೂತ ಸೌಕರ್ಯಳಿಗೆ ಒತ್ತುಕೊಡಬೇಕು. ಕರ್ತವ್ಯದ ಮೇಲೆ ಪ್ರಯಾಣಿಕರು ನೌಕರರ ಮೇಲೆ ಮಾಡುತ್ತಿರು ಹಲ್ಲೆ, ದೌರ್ಜನ್ಯಕ್ಕೆ ಕಡಿವಾಣ ಹಾಕುವ ನಿಯಮ ನಿಗಗಳಲ್ಲಿ ಕೂಡಲೇ ಜಾರಿಯಾಗಬೇಕು.
ಈ ಎಲ್ಲ ವೂ ಸೇರಿದಂತೆ ಹಲವು ಸಮಸ್ಯೆಗಳಿಗೆ ವೇದಿಕೆಯ ಮೇಲೆ ಇದ್ದ ಬಹತೇಕ ಎಲ್ಲ ಸಂಘಟನೆಯ ಮುಖಂಡರು ಒಪ್ಪಿಗೆ ಸೂಚಿಸಿ ಈ ನಿರ್ಣಯಗಳನ್ನು ಮುಖ್ಯಮಂತ್ರಿಗಳು ಏ.5ರಂದು ಕರೆದಿರುವ ಸಭೆಯಲ್ಲಿ ಮಂಡಿಸಿ ಪ್ರಾಮಾಣಿಕವಾಗಿ ಈಡೇರಿಸಲು ಸಮ್ಮತದಿಂದ ತಿರ್ಮಾನಿಸಿದ್ದಾರೆ ಎಂದು ರುದ್ದೇಶ್ ಎಸ್.ನಾಯಕ ತಿಳಿಸಿದ್ದಾರೆ.
Related

You Might Also Like
KSRTC ನೌಕರರ ಸಾಮಾನ್ಯ ಮರಣ ಪ್ರಕರಣಕ್ಕಿದ್ದ 10 ಲಕ್ಷ ರೂ. ಪರಿಹಾರ ಮೊತ್ತ 14 ಲಕ್ಷ ರೂ.ಗಳಿಗೆ ಏರಿಸಿ ಎಂಡಿ ಆದೇಶ
ಪರಿಷ್ಕರಿಸಿದ 14 ಲಕ್ಷ ರೂ. ಪರಿಹಾರ ಮೊತ್ತ ಸೆಪ್ಟೆಂಬರ್ 1-2025ರಿಂದ ಜಾರಿ ಬೆಂಗಳೂರು: 10 ಲಕ್ಷ ರೂ.ಗಳಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಕುಟುಂಬ...
KSRTC- ಪ್ರತಿಷ್ಠಿತ ವಿಶ್ವ ದಾಖಲೆ ಸೇರಿದ ಶಕ್ತಿ ಯೋಜನೆ: ಅತೀವ ಸಂತಸ, ಹೆಮ್ಮೆಯ ಕ್ಷಣ- ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲಿ 2023ರ ಜೂನ್ 11ರಿಂದ ಜಾರಿಗೆ ಬಂದ ಶಕ್ತಿ ಯೋಜನೆ ಪ್ರತಿಷ್ಠಿತ ವಿಶ್ವ ದಾಖಲೆಗೆ ಸೇರ್ಪಡೆ (Golden Book...
KKRTC ವಿಜಯಪುರ: ಸಂಸ್ಥೆ ನಿಯಮವನ್ನೇ ಗಾಳಿಗೆ ತೂರಿ ಮತ್ತೆ ಮತ್ತೆ ನೌಕರರಿಂದ ಸ್ವಂತ ಕಾರನ್ನು ಸರ್ವಿಸ್ ಮಾಡಿಸಿಕೊಳ್ಳುತ್ತಿರುವ ಡಿಎಂ
ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅದರಲ್ಲೂ ವಿಜಯಪುರ ವಿಭಾಗದಲ್ಲಿ ಇವರ ಬಹುತೇಕ ಎಲ್ಲ ಘಟಕ ವ್ಯವಸ್ಥಾಪಕರು ಸೇರಿದಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳೂ ಅಂಕುಶವಿಲ್ಲದ ಆನೆಯಂತಾಗಿದ್ದಾರೆ. ಅಂದರೆ...
ಕಾವೇರಿ ನದಿಗೆ 31,550 ಕ್ಯೂಸೆಕ್ ನೀರು ಬಿಡುಗಡೆ- ನದಿ ತಟದ ಜನರಿಗೆ ಸೂಚನೆ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ವರುಣನ ಆರ್ಭಟ ಹೆಚ್ಚಾಗಿದ್ದು ಈ ಹಿನ್ನೆಲೆ ಹಳೇ ಮೈಸೂರು ಭಾಗದ ಜೀವನಾಡಿ ಕೆಆರ್ಎಸ್ ಡ್ಯಾಂಗೆ ಒಳಹರಿವು ಹೆಚ್ಚಾಗುತ್ತಿದೆ. ಹೀಗಾಗಿ ನದಿ...
BMTC: ಬ್ರೇಕ್ ಫೇಲಾಗಿ ಕಂದಕಕ್ಕೆ ನುಗ್ಗಿದ ಬಸ್- ಅದೃಷ್ಟವಶಾತ್ ಪ್ರಯಾಣಿಕರು ಸೇಫ್
ಆನೇಕಲ್: ಬ್ರೇಕ್ ಫೇಲಾಗಿ ರಸ್ತೆ ಬದಿಯ ಕಂದಕಕ್ಕೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ ನುಗ್ಗಿರುವ ಘಟನೆ ಬೆಂಗಳೂರು ಹೊರವಲಯ ಜಿಗಣಿ ಸಮೀಪದ ಹರಪ್ಪನಹಳ್ಳಿ ಬಳಿ...
ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಸಿಗುತ್ತಿದೆ ಮುಕ್ತಿ
ಬೆಂಗಳೂರು: ರಾಜ್ಯ ರಾಜಧಾನಿಯ ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಮುಕ್ತಿ ಸಿಗುತ್ತಿದೆ. ಹೌದು! ಬಹುನಿರೀಕ್ಷಿತ ಹೆಬ್ಬಾಳ ವಿಸ್ತರಿತ ಮೇಲ್ಸೇತುವೆ ಉದ್ಘಾಟನೆ ಆಗುತ್ತಿದೆ. ಇಂದು...
ಸರ್ಕಾರಿ ಬಸ್ ಗಾಜು ಒಡೆದು, ಚಾಲನಾ ಸಿಬ್ಬಂದಿ ಮೇಲೆ ಬೈಕ್ ಸವಾರನಿಂದ ಹಲ್ಲೆ
ಹುಬ್ಬಳ್ಳಿ: ಗದುಗಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸರ್ಕಾರಿ ಸಾರಿಗೆ ಬಸನ್ನು ನಗರದ ಗದಗ ರಸ್ತೆ ಬಳಿ ಬೈಕ್ ಸವಾರನೊಬ್ಬ ಅಡ್ಡಗಟ್ಟಿ ಬಸ್ ಗಾಜು ಒಡೆದು ಹಾಕಿರುವುದಲ್ಲದೆ ಚಾಲಕ ಹಾಗೂ...
ಕೊಟ್ಟ ಚಿನ್ನಾಭರಣ- ನಗದನ್ನು ವಾಪಸ್ ಕೊಡಿಸಿ ಎಂದರೆ 2 ಲಕ್ಷ ಲಂಚಕೊಡಿ ಎಂದ ಪೊಲೀಸರು: ಲೋಕಾಯುಕ್ತ ಖೆಡ್ಡಕ್ಕೆ ಬಿದ್ದರು
ಬೆಂಗಳೂರು: ಕೊಟ್ಟಿರುವ ಆಭರಣ ಮತ್ತು ನಗದನ್ನು ವಾಪಸ್ ಕೊಡಿಸಿ ಎಂದು ದೂರು ನೀಡಲು ಪೊಲೀಸ್ ಠಾಣೆಗೆ ಹೋದರೆ ನಮಗೆ 2 ಲಕ್ಷ ರೂ. ಲಂಚ ಕೊಟ್ಟರೆ ವಾಪಸ್...
ಭೀಕರ ಅಪಘಾತ: ಲಾರಿಗೆ ಸರ್ಕಾರಿ ಬಸ್ ಡಿಕ್ಕಿ -ಮೂವರ ಸಾವು, 7ಮಂದಿಗೆ ಗಂಭೀರಗಾಯ
ಯಲ್ಲಾಪುರ: ನಿಂತಿದ್ದ ಲಾರಿಗೆ ಸರ್ಕಾರಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟು 7 ಮಂದಿ ಗಂಭೀರವಾಗಿ ಗಾಯಗೊಂಡಿೆಉವ ಘಟನೆ ಉತ್ತರಕನ್ನಡ...