CRIMENEWSನಮ್ಮಜಿಲ್ಲೆ

ಬೆಳಗಾವಿ: ಸೈಬರ್‌ ಕ್ರೈಂ ವಂಚಕರ ಕಾಟ ತಾಳಲಾರದೇ ವೃದ್ಧ ದಂಪತಿ ಆತ್ಮಹತ್ಯೆ

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಸೈಬರ್‌ ಕ್ರೈಂ ವಂಚಕರ ಕಾಟ ತಾಳಲಾರದೇ ವೃದ್ಧ ದಂಪತಿ ಗುರುವಾರ ತಡರಾತ್ರಿ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ.

ಡಯಾಗೊ ಸಂತಾನ್ ನಜರೆತ್ (82) ಮತ್ತು ಫ್ಲೇವಿಯಾನಾ ನಜರೆತ್ (79) ಆತ್ಮಹತ್ಯೆಗೆ ಶರಣಾದ ದಂಪತಿ. ಆತ್ಮಹತ್ಯೆಗೆ ಮುನ್ನ ವಯಸ್ಸಾದ ದಂಪತಿ ಇಂಗ್ಲಿಷ್‌ನಲ್ಲಿ ಬರೆದ ಡೆತ್‌ನೋಟ್‌ ಲಭ್ಯವಾಗಿದೆ. ಫ್ಲೇವಿಯಾನಾ ನಜರೆತ್ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದರೆ, ಡಯಾಗೊ ಚಾಕುವಿನಿಂದ ಕುತ್ತಿಗೆ ಕೊಯ್ದುಕೊಂಡು ಸೂಸೈಡ್‌ ಮಾಡಿಕೊಂಡಿದ್ದಾರೆ.

ವಿಷಯ ತಿಳಿದ ಬಳಿಕ ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ್ ಗುಳೇದ್‌ ಪ್ರತಿಕ್ರಿಯಿಸಿ, ಸೈಬರ್ ವಂಚಕರು ಬೆದರಿಕೆ ಕರೆ ಮಾಡಿ ಡಯಾಗೊ ಅವರಿಂದ 50 ಲಕ್ಷ ರೂ.ಗೂ ಹೆಚ್ಚು ಹಣವನ್ನು ತಮ್ಮ ಖಾತೆಗೆ ವರ್ಗಾಯಿಸಿಕೊಂಡಿದ್ದಾರೆ. ಆದರೂ ಅಷ್ಟಕ್ಕೇ ಸುಮ್ಮನಾಗದೇ ಮತ್ತೆ ಮತ್ತೆ ಹಣಕ್ಕೆ ಕಿರುಕುಳ ನೀಡುತ್ತಿದ್ದರು. ಇದರಿಂದ ಮಾನಸಿಕವಾಗಿ ನೊಂದು ತಮ್ಮ ಜೀವನವನ್ನೇ ಕಳೆದುಕೊಂಡಿದ್ದಾರೆ ಎಂದು ತಿಳಿಸಿದರು.

ಇನ್ನು ತಮ್ಮ ಡೆತ್ ನೋಟ್‌ನಲ್ಲಿ, ದಂಪತಿ ಕೆಲವು ವ್ಯಕ್ತಿಗಳಿಂದ ಸಾಲ ಪಡೆದಿರುವುದಾಗಿ ಉಲ್ಲೇಖಿಸಿದ್ದಾರೆ. ಅದನ್ನು ತಮ್ಮ ಆಸ್ತಿಗಳನ್ನು ಮಾರಿ ಮರುಪಾವತಿಸಬೇಕೆಂದು ಹೇಳಿದ್ದಾರೆ ಎಂದು ಎಸ್‌ಪಿ ತಿಳಿಸಿದರು.

ಡೆತ್‌ನೋಟ್‌ನಲ್ಲಿ ಏನಿದೆ?: ಕೆಲ ದಿನಗಳ ಹಿಂದೆ ದೆಹಲಿ ಕ್ರೈಂ ಬ್ರ‍್ಯಾಂಚ್‌ನಿಂದ ನಮಗೆ ವಿಡಿಯೋ ಕರೆ ಬಂದಿತ್ತು. ಆ ಕರೆಯಲ್ಲಿ ನೀವು ಅಪರಾಧ ಒಂದರಲ್ಲಿ ಭಾಗಿಯಾಗಿದ್ದೀರಿ ಎಂದು ಬೆದರಿಕೆ ಹಾಕಲಾಗಿತ್ತು. ಬಳಿಕ 50 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ಭಯಗೊಂಡು ನಾವು ಅವರು ಹೇಳಿದ ಖಾತೆಗೆ ಹಣ ಹಾಕಿದ್ದೆವು.

ಹಣ ಪಾವತಿ ಮಾಡಿದ ಬಳಿಕವೂ ಮತ್ತೆ ವಿಡಿಯೋ ಕಾಲ್ ಮಾಡಿ ಹಣ ನೀಡಬೇಕು ಒಂದು ವೇಳೆ ಹಣ ನೀಡದಿದ್ದರೆ ಅರೆಸ್ಟ್‌ ಮಾಡುತ್ತೇವೆ ಎಂದು ಬೆದರಿಸಿದ್ದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ ಎಂದು ಬರೆದಿದ್ದಾರೆ. ಡೆತ್ ನೋಟ್‌ನಲ್ಲಿ ದಂಪತಿ ತಮ್ಮ ದೇಹವನ್ನು ವೈದ್ಯಕೀಯ ವಿಜ್ಞಾನಗಳ ಆಸ್ಪತ್ರೆಗೆ ದಾನ ಮಾಡುವಂತೆ ಮನವಿ ಮಾಡಿದ್ದಾರೆ.

ಮೃತ ಡಿಯಾಗೋ ಮಹಾರಾಷ್ಟ್ರ ಸರ್ಕಾರದಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಅಷ್ಟೇ ಅಲ್ಲದೇ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಮತ್ತು ಇತರ ಪರೀಕ್ಷೆಗಳಿಗೆ ತರಬೇತಿ ನೀಡಿದ್ದರು. ದಂಪತಿಯ ಶವವನ್ನು ಹಸ್ತಾಂತರಿಸಿದ್ದರೂ ತಾಂತ್ರಿಕ ಕಾರಣಗಳಿಂದ ಬಿಐಎಂಎಸ್ ಶವಗಳನ್ನು ಸ್ವೀಕರಿಸಲಿಲ್ಲ. ನಂತರ ದಂಪತಿಯ ಮೃತ ಶರೀರವನ್ನು ಬೀಡಿ ಸ್ಮಶಾನಕ್ಕೆ ತೆಗೆದುಕೊಂಡು ಹೋಗಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ಬೆಳಕಿಗೆ ಬಂದಿದ್ದು ಹೇಗೆ?: ವೃದ್ಧ ದಂಪತಿ ಮನೆಗೆ ಇಂದು ನೆರೆ ಮನೆಯ ಮಹಿಳೆ ಎಂದಿನಂತೆ ಬಂದಿದ್ದಾರೆ. ಎಷ್ಟು ಕರೆದರೂ ಬಾಗಿಲು ತೆಗೆಯದ ಕಾರಣ ಕಿಟಕಿಯಿಂದ ವೃದ್ಧ ದಂಪತಿಯ ಮೃತದೇಹ ನೋಡಿದ್ದಾರೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಬಂದ ‌ನಂದಗಡ‌ ಠಾಣೆ ಪೊಲೀಸರು ಪರಿಶೀಲನೆ ಮಾಡಿ ಮೃತಪಟ್ಟಿರುವುದು ಗೊತ್ತಾದ ಬಳಿಕ ಮೃತ ದೇಹಗಳನ್ನು ಮರಣೋತ್ತರ ‌ಪರೀಕ್ಷೆಗೆ ಬಿಮ್ಸ್‌ ಆಸ್ಪತ್ರೆಗೆ ರವಾನೆ ಮಾಡಿದರು.

Deva
the authorDeva

Leave a Reply

error: Content is protected !!
Latest news
ಟನ್‌ ಕಬ್ಬಿಗೆ 3650 ರೂ. ಎಫ್ಆರ್‌ಪಿ ದರ ಘೋಷಣೆ ಮಾಡಿರುವ ಕೇಂದ್ರ ಸರ್ಕಾರದ ನಡೆ ಸಲ್ಲ- 4500 ರೂ. ನಿಗದಿಗೊಳಿಸಬೇಕು: ಕ... KKRTC ವಿಜಯಪುರ: ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರಬರ ಭ್ರಷ್ಟಾಚಾರ ಸಾಬೀತು- ಆದರೂ ಕ್ರಮ ತೆಗೆದುಕೊಳ್ಳದ ಎಂಡ... KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ...