CRIMEನಮ್ಮಜಿಲ್ಲೆ

ಕುತ್ತಿಗೆಗೆ ಸೀರೆ ಬಿಗಿದ ಸ್ಥಿತಿಯಲ್ಲಿ ಪತ್ನಿ ಮೃತದೇಹ, ನೇಣು ಬಿಗಿದ ಸ್ಥಿತಿಯಲ್ಲಿ ಪತಿ ಮೃತದೇಹ ಪತ್ತೆ

ವಿಜಯಪಥ ಸಮಗ್ರ ಸುದ್ದಿ

ಮುದ್ದೇಬಿಹಾಳ: ಕಾಲಿಗೆ ಹಾಗೂ ಕುತ್ತಿಗೆಗೆ ಸೀರೆ ಬಿಗಿದು ಹತ್ಯೆ ಮಾಡಿರುವ ಸ್ಥಿತಿಯಲ್ಲಿ ಪತ್ನಿಯ ಮೃತದೇಹವಿದ್ದರೆ ಸಮೀಪದಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತಿಯ ಮೃತದೇಹ ಪತ್ತೆಯಾಗಿರುವ ಘಟನೆ ತಾಲೂಕಿನ ಗೆದ್ದಲಮರಿ ಗ್ರಾಮದ ಜಮೀನಿನಲ್ಲಿ ನಡೆದಿದೆ.

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಗೆದ್ದಲಮರಿ ಗ್ರಾಮದ ನಿವಾಸಿ ಸಿದ್ದಪ್ಪ ಹರನಾಳ ಹಾಗೂ ಆತನ ಪತ್ನಿ ಮೇಘಾ ಹರನಾಳ ಎಂಬುವರ ಶವಗಳೇ ಪತ್ತೆಯಾಗಿರುವುದು.

ಎಂಟು ವರ್ಷಗಳ ಹಿಂದೆ ಮೇಘಾ ಅವರನ್ನು ಸಿದ್ದಪ್ಪ ಹರನಾಳ ವಿವಾಹವಾಗಿದ್ದ. ದಂಪತಿಗೆ ಮುದ್ದಾದ ನಾಲ್ವರು ಮಕ್ಕಳಿದ್ದಾರೆ. ಆದರೆ, ಈಗ ಆ ಮಕ್ಕಳು ಅಪ್ಪ ಅಮ್ಮನ ಕಳೆದುಕೊಂಡು ಅನಾಥರಾಗಿದ್ದಾರೆ.

ಪತಿ ಸಿದ್ದಪ್ಪನೇ ಪತ್ನಿ ಮೇಘಾ ಅವರನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಮೃತ ಮೇಘಾಳ ತಾಯಿ ಗದ್ದೆಮ್ಮ ಹೊಸಮನಿ ಈ ಆರೋಪ ಮಾಡಿದ್ದಾರೆ.

ಸಿದ್ದಪ್ಪನ ತಾಯಿ ಶಾಂತಮ್ಮ ಹಾಗೂ ಸಹೋದರ ಶ್ರೀಕಾಂತ ಕಿರುಕುಳವೇ ಇದಕ್ಕೆ ಕಾರಣ ಎಂದು ಗದ್ದೆಮ್ಮ ದೂರಿದ್ದಾರೆ. ಕಳೆದ ಎರಡ್ಮೂರು ವರ್ಷಗಳಿಂದ ಸಿದ್ದಪ್ಪ ಹಾಗೂ ಮೇಘಾಳ ಸಂಸಾರದಲ್ಲಿ ಆಗಾಗ ಜಗಳವಾಗುತ್ತಿತ್ತು. ನಡುವೆ ರಾಜಿ ಪಂಚಾಯಿತಿ ಮಾಡಿ ಚೆನ್ನಾಗಿರಿ ಎಂದು ಹೇಳಿದ್ದೆವು. ಈಗ ನಮ್ಮ ಮಗಳನ್ನು ಕೊಲೆ ಮಾಡಿ ಅಳಿಯ ನೇಣಿಗೆ ಶರಣಾಗಿದ್ದಾನೆಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ನಾಲ್ವರು ಮಕ್ಕಳನ್ನು ಈಗ ಅನಾಥರನ್ನಾಗಿ ಮಾಡಿ ಹೋಗಿದ್ದಾರೆ ಎಂದು ಮೇಘಾಳ ಕುಟುಂಬಸ್ಥರು ಕಣ್ಣೀರಿಡುತ್ತಿದ್ದಾರೆ. ದಂಪತಿಯ ಜಗಳ ಇಬ್ಬರ ಪ್ರಾಣವನ್ನು ತೆಗೆಯುವ ಮಟ್ಟಕ್ಕೆ ಹೋಗಿರುವುದು ಮಾತ್ರ ಭಾರಿ ನೋವು ತರುತ್ತಿದೆ ಎಂದು ಗೋಳಾಡುತ್ತಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಡಿವೈಎಸ್ಪಿ ಬಾಲಣ್ಣ ನಂದಗಾವಿ ಹಾಗೂ ಮುದ್ದೇಬಿಹಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರ ತನಿಖೆಯಿಂದ ಘಟನೆಯ ಕುರಿತು ಸತ್ತಾಂಶ ಹೊರಬೀಳಬೇಕಿದೆ.

ಇನ್ನು ಈ ಸಂಬಂಧ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ. ಇಬ್ಬರ ಮೃತದೇಹಗಳನ್ನು ವಿಜಯಪುರ ನಗರದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಿದ್ದಾರೆ.

Deva
the authorDeva

Leave a Reply

error: Content is protected !!
Latest news
ಒಲಿಂಪಿಕ್ಸ್‌ ಚಿನ್ನದ ಪದಕ ವಿಜೇತರಿಗೆ 6 ಕೋಟಿ ರೂ. ಭಾರಿ ನಗದು ಬಹುಮಾನ: ಕ್ರೀಡಾಪಟುಗಳ ಬದುಕಿಗೆ ಭರವಸೆ ನೀಡಿದ ಸಿಎಂ BMTC: ಮಹಿಳಾ ಕಂಡಕ್ಟರ್‌ಗಳಿಗೆ ಶೇ.33ರಷ್ಟು ಮುಂಬಡ್ತಿ ಮೀಸಲಾತಿ ಅಸಾಧ್ಯ- ಸಂಸ್ಥೆ ನಿಯಮದಲ್ಲೂ ಇಲ್ಲ ಅವಕಾಶ ಎಂದ ಸಿಪಿಎ... ಶಕ್ತಿಯೋಜನೆಗಾಗಿ ರಾಜಸ್ಥಾನದ ಆಧಾರ್‌ ಕಾರ್ಡ್‌ಗೆ ಬೆಂಗಳೂರು ನಿವಾಸಿ ಎಂಬ ನಕಲಿ ಕಾರ್ಡ್‌ ಸೃಷ್ಟಿಸಿಕೊಂಡು ಮಹಿಳೆ ಓಡಾಟ! BMTC ಘಟಕ 29: ಡಿಪೋ ಆವರಣದಲ್ಲಿ ಎಲೆಕ್ಟ್ರಿಕ್ ಬಸ್ ಡಿಕ್ಕಿ- ಚಾಲಕನಿಗೆ ತೀವ್ರ ಗಾಯ ತಿ.ನರಸೀಪುರ: ಯುವಕನ ಕಿರುಕುಳದಿಂದ ಮದುವೆ ನಿಶ್ಚಯವಾಗಿದ್ದ ಯುವತಿ ಜತೆಗೆ ಅಪ್ಪಅಮ್ಮ ಆತ್ಮಹತ್ಯೆ ತಿ.ನರಸೀಪುರ: ವಿದ್ಯುತ್‌ ಖಾಸಗೀಕರಣ ವಿರೋಧಿಸಿ ರೈತರ ಪ್ರತಿಭಟನೆ ತಹಸೀಲ್ದಾರ್‌ಗೆ ಮನವಿ ಚಾಲನೆಯಲ್ಲಿದ್ದ ಬಸ್‌ನ ಸ್ಟೇರಿಂಗ್‌ ಹಿಡಿದ ಕುಡುಕ- ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಬಸ್‌ ಡಿಕ್ಕಿ, 11 ಮಂದಿಗೆ ಗಂಭೀರ... KSRTC: ಶೇ.44 ರಷ್ಟು ಬಸ್‌ ಪ್ರಯಾಣ ದರ ಹೆಚ್ಚಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಗೃಹಜ್ಯೋತಿಯಿಂದ ಸರ್ಕಾರಿ ನೌಕರರ ಹೊರಗಿಡಲು ಸರ್ಕಾರದ ಚಿಂತನೆ ಸರ್ಕಾರಿ ನೌಕರಿ ಮಹಿಳೆಯರಿಗೆ ಇನ್ನು ಮುಂದೆ ಸಿಗಲ್ವ ಶಕ್ತಿ ಯೋಜನೆಯ ಉಚಿತ ಪ್ರಯಾಣ?