NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರ ಸೈಕಲ್‌ ಜಾಥಾಗೆ 32 ದಿನ: ಹಾವೇರಿಯಲ್ಲಿ ಸಂಚಾರ – ಜಿಲ್ಲಾಧಿಕಾರಿಗೆ ಮನವಿ -ನೂರಾರು ನೌಕರರು ಭಾಗಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ರಾಜ್ಯಾದ್ಯಂತ ಕಳೆದ ಅ.10ರಂದು ಬಳ್ಳಾರಿಯಲ್ಲಿ ಚಾಲನೆ ನೀಡಿರುವ ಬೃಹತ್‌ ಸೈಕಲ್‌ ಜಾಥಾವು ಇಂದಿಗೆ 32 ದಿನಗಳನ್ನು ಪೂರ್ಣಗೊಳಿಸಿದೆ. ಈ ದಿನ ಹಾವೇರಿಯಲ್ಲಿ ಸಂಚರಿಸುತ್ತಿದ್ದು, ನೌಕರರು ಅತ್ಯಂತ ಉತ್ಸಾಹದಿಂದಲೇ ನೌಕರರು ಭಾಗವಸಿದ್ದರು.

ಇನ್ನು ಈ ವೇಳೆ ಜಿಲ್ಲಾಧಿಕಾರಿಗಳ ಮೂಲಕ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರವನ್ನು ಒತ್ತಾಯಿಸಿ ಮನವಿ ಸಲ್ಲಿಸಲು ನೂರಾರು ನೌಕರರು ಸಂಗಮಗೊಂಡಿದ್ದು, ಸರ್ಕಾರದ ನಡೆಯನ್ನು ಖಂಡಿಸಿದರು. ಕೊಟ್ಟ ಮಾತು ಈಡೇರಿಸದ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಚೌಕಾಸಿ ವೇತನ ಪರಿಷ್ಕರಣೆ ತೊಲಗಿಸಿ ಸಾರಿಗೆ ಕಾರ್ಮಿಕರನ್ನು ಉಳಿಸಿ, ಬೇಕೇಬೇಕು ವೇತನ ಆಯೋಗವೇ ಬೇಕು. ಅಗ್ರಿಮೆಂಟ್‌ ಬಾಳು ಕಾರ್ಮಿಕರ ಕುಟುಂಬ ಬೀದಿಪಾಲು. ನಾಲ್ಕು ವರ್ಷಕ್ಕೊಮ್ಮೆ ಸಾರಿಗೆ ಕಾರ್ಮಿಕರ ಬಲಿ ನಿಲ್ಲಲ್ಲಿ. ಮುಷ್ಕರದ ಸಮಯದಲ್ಲಿ ಆಗಿರುವಂತಹ ಸುಳ್ಳು ಪೊಲೀಸ್‌ ಕೇಸ್‌ ಹಿಂಪಡೆಯಬೇಕು ಎಂದು ಒತ್ತಾಯಿಸಿ ಇಂದು ನಗದ ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿದ ನೂರಾರು ಸಾರಿಗೆ ನೌಕರರು ಸೈಕಲ್‌ ಜಾಥಾಕ್ಕೆ ಸಾಥ್‌ ನೀಡಿದರು.

ಸಾರಿಗೆ ಸಂಸ್ಥೆಯಲ್ಲಿ ಖಾಸಗೀಕರಣ ನೀತಿಯನ್ನು ಕೈ ಬಿಡಬೇಕು. ಕೂಟದ ನಡೆ ಕಾರ್ಮಿಕರ ಏಳಿಗೆಯ ಕಡೆ. ನಡೆಸಿ ನಡೆಸಿ ಸಾರಿಗೆ ಕಾರ್ಮಿಕ ಸಂಘಟನೆಗಳ ಚುನಾವಣೆ ನಡೆಸಿ ಎಂಬುವುದು ಸೇರಿದ ವಿವಿಧ ಸ್ಲೋಗನ್‌ಗಳಿರುವ ಬ್ಯಾನರ್‌ಗಳನ್ನು ಹಿಡಿದು ಕಾರ್ಮಿಕರು ಘೋಷಣೆಗಳನ್ನು ಕೂಗಿದರು.

ಬಳಿಕ ಜಿಲಾಧಿಕಾರಿಗಳಿಗೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಯ ಮನವಿ ಪತ್ರ ಸಲ್ಲಿಸುವ ಮೂಲಕ ಸರ್ಕಾರಕ್ಕೆ ಮುಟ್ಟಿಸಿ ನಮ್ಮ ಸಮಸ್ಯೆಗೆ ಶಾಶ್ವತ ಪರಿಹಾರ ಕೊಡಿಸಿ ಎಂದು ಮನವಿ ಮಾಡಿದರು.

ಇನ್ನು ಈಗಾಗಲೇ 13ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಸಂಚರಿಸಿರುವ ಸಾರಿಗೆ ನೌಕರರ ಸೈಕಲ್‌ ಜಾಥಾ ನಿರಂತರವಾಗಿ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸುತ್ತಿದೆ. 1300ಕ್ಕೂ ಹೆಚ್ಚು ಕಿಮೀ ಕ್ರಮಿಸಿರುವ ಸೈಕಲ್‌ ಜಾಥಾ ನಿರಂತರವಾಗಿ ತನ್ನ ಸಂಚಾರವನ್ನು ಮುಂದುವರಿಸಿದೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ