NEWSನಮ್ಮರಾಜ್ಯ

KSRTC: ನೌಕರರ ಮಾರ್ಚ್‌ ತಿಂಗಳ ವೇತನ ಏ.2ರಂದು ಪಾವತಿಸಲು ಎಂಡಿ ಆದೇಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರಿಗೆ ಈ ಬಾರಿ ಮಾರ್ಚ್‌ ವೇತನವನ್ನು ಏಪ್ರಿಲ್‌ 2ರಂದು ಪಾವತಿಸಲು ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್‌ ಆದೇಶ ಹೊರಡಿಸಿದ್ದಾರೆ.

ಈ ಸಂಬಂಧ ಆದೇಶ ಹೊರಡಿಸಿರುವ ಅವರು, ಮಾರ್ಚ್‌ ತಿಂಗಳ ವೇತನದ ಜತೆಗೆಯಲ್ಲೇ 2023-2024 ನೇ ಸಾಲಿನ ಗಳಿಕೆ ರಜೆ ನಗದೀಕರಣ ಪಾವತಿಸಬೇಕು ಎಂದು ಮಾ.18ರಂದು ಆದೇಶ ಹೊರಡಿಸಿದ್ದಾರೆ.

ಪ್ರತಿ ತಿಂಗಳ ಮೊದಲನೆಯ ದಿನ ಅಂದರೆ 1ರಂದೆ ಸಂಸ್ಥೆಯ ನೌಕರರಿಗೆ ವೇತನ ಪಾವತಿಸಲಾಗುತ್ತಿತ್ತು. ಆದರೆ ಈ ಬಾರಿ ಮಾ.30 ಭಾನುವಾರ, ಮಾ.31ರಂದು ಸಾರ್ವತ್ರಿಕ ರಜೆ ಮತ್ತು  ಏಪ್ರೀಲ್ 1ರಂದು ಬ್ಯಾಂಕ್ ವ್ಯವಹರಿಸದೇ ಇರುವುದರಿಂದ ಮಾರ್ಚ್‌-2025 ರ ಮಾಹೆಯ ವೇತನವನ್ನು ಏಪ್ರೀಲ್2ರಂದು ಪಾವತಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ವೇತನದೊಂದಿಗೆ 2023-2024 ರ ಸಾಲಿನ ಗಳಿಕೆ ರಜೆ ನಗದೀಕರಣದ ಮೊತ್ತವನ್ನು ಎಲ್ಲಾ ಅರ್ಹ ಅಧಿಕಾರಿ/ಸಿಬ್ಬಂದಿಗಳಿಗೆ ಸೇರಿಸಿ ಪಾವತಿಸಲು ಹಾಗೂ ಸೇವಾ ವಿಮುಕ್ತಿ ಹೊಂದಿದ ಅಧಿಕಾರಿ/ಸಿಬ್ಬಂದಿಗಳಿಗೆ ದಿನಾಂಕ 11.04.2025 ರಂದು ಧನಾದೇಶದ ಮೂಲಕ ಪಾವತಿಸಲು ಆದೇಶಿಸಿದ್ದಾರೆ.

ಎಲ್ಲಾ ಹಿರಿಯ/ ವಿಭಾಗೀಯ ನಿಯಂತ್ರಣಾಧಿಕಾರಿಗಳು, ಕಾರ್ಯ ವ್ಯವಸ್ಥಾಪಕರು, ಪ್ರಾದೇಶಿಕ ಕಾರ್ಯಾಗಾರ/ಕಾರ್ಯ ನಿರ್ವಾಹಕ ಅಭಿಯಂತರರು ತಪ್ಪದೆ ಪಾಲಿಸಬೇಕು ಎಂದು ತಿಳಿಸಿದ್ದಾರೆ.

ಈ ವಿಷಯವನ್ನು ಸಂಬಂಧಪಟ್ಟ ನಿರ್ದೇಶಕರು (ಸಿ & ಜಾ), ಎಲ್ಲ ಇಲಾಖಾ ಮುಖ್ಯಸ್ಥರು,  ಉಪ ಮುಖ್ಯ ಲೆಕ್ಕಾಧಿಕಾರಿ ಹಾಗೂ ವ್ಯವಸ್ಥಾಪಕ ನಿರ್ದೇಶಕರಆಪ್ತ ಕಾರ್ಯದರ್ಶಿ ಅವರಿಗೆ ಮಾಹಿತಿಗಾಗಿ ಆದೇಶದ ಪ್ರತಿ ರವಾನಿಸಲಾಗಿದೆ.

Deva
the authorDeva

Leave a Reply

error: Content is protected !!
Latest news
GBA ದಕ್ಷಿಣ: ಮಳೆ ಬಂದಾಗ ಹೆಚ್ಚು ನೀರು ನಿಲ್ಲುವ ಪ್ರದೇಶಗಳಿಗೆ ಆಯುಕ್ತ ರಮೇಶ್ ಭೇಟಿ ಸರ್ಕಾರ ಸಾರಿಗೆ ನೌಕರರ ಏಳಿಗೆ ಬಗ್ಗೆ ಯೋಚಿಸಲೂ ಆಗದಂತಹ ನಿಕೃಷ್ಟ ಹಂತ ತಲುಪಿರುವುದು ದುರಂತವೇ ಸರಿ: ವಿಪಕ್ಷ ನಾಯಕ ಆರ್‌... KKRTC: ಭ್ರಷ್ಟ ಅಧಿಕಾರಿಗಳ ವಿರುದ್ಧ ಎಂಡಿಗೆ ಲಿಖಿತ ದೂರು ಕೊಟ್ಟು 3 ತಿಂಗಳುಗಳು ಕಳೆದರೂ ಯಾವುದೇ ಕ್ರಮವಿಲ್ಲ ಏಕೆ- ಯಾ... KSRTC- ನಮ್ಮ ಹೋರಾಟ ಕಡೆಗಣಿಸುತ್ತಿದ್ದೀರಿ ಇದು ನಿಮಗೆ ಸಲ್ಲ- ಮುಂದಿನ ದಿನಗಳಲ್ಲಿ ತಕ್ಕಪಾಠ ಕಲಿಸುತ್ತೇವೆ ಕೇಂದ್ರ ಸರ್... ಸಾರಿಗೆ ನೌಕರರಿಗೆ 26 ತಿಂಗಳ ವೇತನ ಹಿಂಬಾಕಿ ಪಾವತಿಗೆ ಮೊದಲ ಹಂತವಾಗಿ 450 ಕೋಟಿ ರೂ. ಬಿಡುಗಡೆ ಮಾಡಿದ ಸರ್ಕಾರ ! KSRTC: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಗುಡ್ಡಕ್ಕೆ ಡಿಕ್ಕಿ ಹೊಡೆದು ನಿಂತ ಬಸ್‌- ತಪ್ಪಿದ ಭಾರಿ ಅನಾಹುತ KSRTC ಪ್ರಮುಖ ಬೇಡಿಕೆಗಳ ಸರ್ಕಾರ ಇನ್ನೂ ನೌಕರರ ಶ್ರಮಕ್ಕನ್ವಯ ಇತ್ಯರ್ಥಪಡಿಸಿಲ್ಲ: ಜ್ಯೋತಿ ಅನಂತಸುಬ್ಬರಾವ್ ಅಸಮಾಧಾನ ಇಂದು ಸಾರಿಗೆ ಸಚಿವರ ಅಧ್ಯಕ್ಷತೇಲಿ ನೌಕರರ ವೇತನ ಹೆಚ್ಚಳ, 38 ತಿಂಗಳ ಹಿಂಬಾಕಿ ಕುರಿತು ಮತ್ತೇ ಒಕ್ಕೂಟದ ಜತೆ ಸಭೆ ಕೆಲ ಸಾರಿಗೆ ಅಧಿಕಾರಿಗಳಿಗೆ ವರದಾನವಾದ 17/1ನಿಯಮ- ಮೇ 10ರೊಳಗೆ ರದ್ದುಗೊಳಿಸಿ ಮೂಲ ಹುದ್ದೆಗೆ ನಿಯೋಜಿಸಲು ಎಂಡಿಗೆ ಸಾರಿ... ನಾಲ್ಕೂ ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆ ಓಕೆನಾ ಅಥವಾ ವೇತನ ಆಯೋಗನಾ? ನೌಕರರ ಅಭಿಪ್ರಾಯವೇನು?